ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಗಣಿ ಉದ್ಯಮಿ ಮತ್ತು ಗಂಗಾವತಿಯ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ರಾಜ್ಯ ವಿಧಾನಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ವರದಿಯಾಗಿದೆ. ಶಿಕ್ಷೆ ಘೊಷಿಸಿದ ನ್ಯಾಯಾಲಯ
ರಾಜ್ಯ ವಿಧಾನಸಭೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅದು ಮೇ 7 ರಂದು ರೆಡ್ಡಿ ಅವರ ಅನರ್ಹತೆಯನ್ನು ಅಧಿಕೃತಗೊಳಿಸಿತು. ನಂತರ ತಕ್ಷಣವೇ ಭಾರತದ ಚುನಾವಣಾ ಆಯೋಗ ಮತ್ತು ಇತರ ಅಧಿಕಾರಿಗಳಿಗೆ ತಿಳಿಸಿದ್ದು, ಅನರ್ಹತೆ ಮೇ 6 ರಿಂದ ಜಾರಿಗೆ ಬರುತ್ತದೆ ಎಂದು ಹೇಳಿದೆ.
ರೆಡ್ಡಿ ಅವರ ಅಪರಾಧವು ಸಂವಿಧಾನದ 191(1)(e) ವಿಧಿ ಮತ್ತು 1951 ರ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ಶಾಸಕ ಸ್ಥಾನದಿಂದ ಅವರನ್ನು ತಕ್ಷಣದ ಅನರ್ಹತೆ ಮಾಡುವಂತೆ ಆಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೈದರಾಬಾದಿನ ವಿಶೇಷ ಸಿಬಿಐ ನ್ಯಾಯಾಲಯವು ರೆಡ್ಡಿ ಮತ್ತು ಇತರ ಮೂವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ವಿಧಾನಸಭೆ ಈ ನಿರ್ಧಾರಕ್ಕೆ ಬಂದಿದೆ.
ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ನಾಲ್ವರು ದೋಷಿಗಳು ಎಂದು ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ (ಮೇ.6) ತೀರ್ಪು ನೀಡಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಮೂವರನ್ನು ಖುಲಾಸೆಗೊಳಿಸಿದೆ.
ಶಾಸಕ ಗಾಲಿ ಜನಾರ್ದನ ರೆಡ್ಡಿ, ಓಎಂಸಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ ಶ್ರೀನಿವಾಸ ರೆಡ್ಡಿ, ಆಂಧ್ರ ಪ್ರದೇಶ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ನಿರ್ದೇಶಕ ವಿ.ಡಿ ರಾಜಗೋಪಾಲ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ಉಪ ನಿರ್ದೇಶಕರಾಗಿದ್ದ ಕೆ.ಮೆಫಾಝ್ ಅಲಿ ಖಾನ್ ದೋಷಿಗಳು ಎಂದು ನ್ಯಾಯಾಲಯ ಮೇ 6ರಂದು ಘೋಷಿಸಿತ್ತು.
ಆಂಧ್ರ ಪ್ರದೇಶ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ, ಗಣಿ ಇಲಾಖೆಯ ಮಾಜಿ ಅಧಿಕಾರಿ ಕೃಪಾನಂದಂ ಅವರನ್ನು ಖುಲಾಸೆಗೊಳಿಸಲಾಗಿದೆ. ಇನ್ನೊಬ್ಬರು, ಗಣಿ ಇಲಾಖೆ ಮಾಜಿ ಪ್ರಧಾನ ಕಾರ್ಯದರ್ಶಿ ವೈ. ಶ್ರೀಲಕ್ಷ್ಮಿ ಅವರನ್ನು 2022ರಲ್ಲಿ ಪ್ರಕರಣದಿಂದ ಬಿಡುಗಡೆ ಮಾಡಲಾಗಿದೆ. ಇದು 29 ಲಕ್ಷ ಟನ್ ಅದಿರು ಕಳ್ಳತನ ಮಾಡಿದ 13 ವರ್ಷ ಹಳೆಯ ಪ್ರಕರಣವಾಗಿದೆ. ಕರ್ನಾಟಕದಿಂದ ಆಂಧ್ರ ಪ್ರದೇಶಕ್ಕೆ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿತ್ತು.
2009ರಲ್ಲಿ, ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಿಬಿಐ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತ್ತು. 2011ರಲ್ಲಿ ಮೊದಲ ಚಾರ್ಜ್ಶೀಟ್ ಸಲ್ಲಿಸಿತ್ತು.
ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳಡಿಯಲ್ಲಿ ಆರೋಪಿಗಳ ವಿರುದ್ದ ಆರೋಪಗಳನ್ನು ಹೊರಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆದ ವಿಚಾರಣೆ ನಡೆದಿತ್ತು. ಮೇ ಅಂತ್ಯದೊಳಗೆ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಗಡುವು ನೀಡಿದ ಹಿನ್ನೆಲೆ, ಸಿಬಿಐ ನ್ಯಾಯಾಲಯ ಕಳೆದ ತಿಂಗಳು ವಿಚಾರಣೆ ಪೂರ್ಣಗೊಳಿಸಿತ್ತು. ಶಿಕ್ಷೆ ಘೊಷಿಸಿದ ನ್ಯಾಯಾಲಯ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ
ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

