Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು.

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪುಸ್ತಕಗಳ ಪ್ರಕಟಣೆ, ಪ್ರಸಾರ ಮತ್ತು ಮಾರಾಟವನ್ನು ತಡೆಯಿಡಿಯಲು ಸಾಧ್ಯವಿಲ್ಲ ಎಂದಿರುವ ದೆಹಲಿ ಕೋರ್ಟ್ ಈ ಕುರಿತು ಹಿಂದುತ್ವವಾದಿ ನಾಯಕನೊಬ್ಬ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.

ಹಿಂದೂ ಸೇನಾ ಅಧ್ಯಕ್ಷ ವಿಷ್ಣು ಗುಪ್ತ ಎಂಬುವವರು ಹಿಂದೂ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಸಲ್ಮಾನ್ ಖುರ್ಷಿದ್ ಅವರ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಪುಸ್ತಕ ಪ್ರಕಟಣೆ ಮತ್ತು ಮಾರಾಟವನ್ನು ನಿಷೇಧಿಸಬೇಕೆಂದು ಅರ್ಜಿ ಸಲ್ಲಿಸಿದ್ದರು.

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪುಸ್ತಕ ಬಿಡುಗಡೆ ಮಾಡಿರುವುದು ರಾಜ್ಯದ ಅಲ್ಪಸಂಖ್ಯಾತರ ಮತಗಳನ್ನು ಧ್ರುವೀಕರಣಗೊಳಿಸುವ ಮತ್ತು ಗಳಿಸುವ ಗುರಿಯನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರೀತಿ ಪರೇವಾರವರು, “ಅರ್ಜಿದಾರರ ವಾದದಂತೆ ಪ್ರಾಥಮಿಕ ಸಾಕ್ಷಿಯಾಗಲಿ ಇತರ ಸಾಕ್ಷಿಗಳು ಪೂರಕವಾಗಿಲ್ಲ. ಹಾಗಾಗಿ ಪುಸ್ತಕಕ್ಕೆ ತಡೆಯಾಜ್ಞೆ ಸಾಧ್ಯವಿಲ್ಲ. ಅದು ಪ್ರಕಾಶಕರಿಗೆ ಹಣಕಾಸಿನ ತೊಂದರೆಗೆ ಕಾರಣವಾಗುತ್ತದೆ ಮತ್ತು ಲೇಖಕರ ಭಾಷಣ ಮತ್ತು ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸುತ್ತದೆ” ಎಂದಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಕಾರಣಕ್ಕಾಗಿಯೇ ಹಲವು ಹಿಂದುತ್ವವಾದಿಗಳು ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿನ ಮನೆಗೆ ಬೆಂಕಿ ಹಚ್ಚಿದ್ದರು.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಅರ್ಜಿ ಕುರಿತು ನ್ಯಾಯಾಧೀಶರು “ಅರ್ಜಿದಾರರು ಯಾವಾಗಲೂ ಪುಸ್ತಕದ ವಿರುದ್ಧ ಪ್ರಚಾರ ಮಾಡಬಹುದು ಮತ್ತು ಅವರ ಭಾವನೆಗಳಗೆ ಘಾಸಿಗೊಳಿಸಿರುವ ಆಪಾದಿತ ಪ್ಯಾರಾಗಳಿಗೆ ಖಂಡನೆಯನ್ನು ಸಹ ಪ್ರಕಟಿಸಬಹುದು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...