Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು.

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪುಸ್ತಕಗಳ ಪ್ರಕಟಣೆ, ಪ್ರಸಾರ ಮತ್ತು ಮಾರಾಟವನ್ನು ತಡೆಯಿಡಿಯಲು ಸಾಧ್ಯವಿಲ್ಲ ಎಂದಿರುವ ದೆಹಲಿ ಕೋರ್ಟ್ ಈ ಕುರಿತು ಹಿಂದುತ್ವವಾದಿ ನಾಯಕನೊಬ್ಬ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.

ಹಿಂದೂ ಸೇನಾ ಅಧ್ಯಕ್ಷ ವಿಷ್ಣು ಗುಪ್ತ ಎಂಬುವವರು ಹಿಂದೂ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಸಲ್ಮಾನ್ ಖುರ್ಷಿದ್ ಅವರ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಪುಸ್ತಕ ಪ್ರಕಟಣೆ ಮತ್ತು ಮಾರಾಟವನ್ನು ನಿಷೇಧಿಸಬೇಕೆಂದು ಅರ್ಜಿ ಸಲ್ಲಿಸಿದ್ದರು.

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪುಸ್ತಕ ಬಿಡುಗಡೆ ಮಾಡಿರುವುದು ರಾಜ್ಯದ ಅಲ್ಪಸಂಖ್ಯಾತರ ಮತಗಳನ್ನು ಧ್ರುವೀಕರಣಗೊಳಿಸುವ ಮತ್ತು ಗಳಿಸುವ ಗುರಿಯನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರೀತಿ ಪರೇವಾರವರು, “ಅರ್ಜಿದಾರರ ವಾದದಂತೆ ಪ್ರಾಥಮಿಕ ಸಾಕ್ಷಿಯಾಗಲಿ ಇತರ ಸಾಕ್ಷಿಗಳು ಪೂರಕವಾಗಿಲ್ಲ. ಹಾಗಾಗಿ ಪುಸ್ತಕಕ್ಕೆ ತಡೆಯಾಜ್ಞೆ ಸಾಧ್ಯವಿಲ್ಲ. ಅದು ಪ್ರಕಾಶಕರಿಗೆ ಹಣಕಾಸಿನ ತೊಂದರೆಗೆ ಕಾರಣವಾಗುತ್ತದೆ ಮತ್ತು ಲೇಖಕರ ಭಾಷಣ ಮತ್ತು ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸುತ್ತದೆ” ಎಂದಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಕಾರಣಕ್ಕಾಗಿಯೇ ಹಲವು ಹಿಂದುತ್ವವಾದಿಗಳು ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿನ ಮನೆಗೆ ಬೆಂಕಿ ಹಚ್ಚಿದ್ದರು.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಅರ್ಜಿ ಕುರಿತು ನ್ಯಾಯಾಧೀಶರು “ಅರ್ಜಿದಾರರು ಯಾವಾಗಲೂ ಪುಸ್ತಕದ ವಿರುದ್ಧ ಪ್ರಚಾರ ಮಾಡಬಹುದು ಮತ್ತು ಅವರ ಭಾವನೆಗಳಗೆ ಘಾಸಿಗೊಳಿಸಿರುವ ಆಪಾದಿತ ಪ್ಯಾರಾಗಳಿಗೆ ಖಂಡನೆಯನ್ನು ಸಹ ಪ್ರಕಟಿಸಬಹುದು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...