Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು.

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪುಸ್ತಕಗಳ ಪ್ರಕಟಣೆ, ಪ್ರಸಾರ ಮತ್ತು ಮಾರಾಟವನ್ನು ತಡೆಯಿಡಿಯಲು ಸಾಧ್ಯವಿಲ್ಲ ಎಂದಿರುವ ದೆಹಲಿ ಕೋರ್ಟ್ ಈ ಕುರಿತು ಹಿಂದುತ್ವವಾದಿ ನಾಯಕನೊಬ್ಬ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.

ಹಿಂದೂ ಸೇನಾ ಅಧ್ಯಕ್ಷ ವಿಷ್ಣು ಗುಪ್ತ ಎಂಬುವವರು ಹಿಂದೂ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಸಲ್ಮಾನ್ ಖುರ್ಷಿದ್ ಅವರ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಪುಸ್ತಕ ಪ್ರಕಟಣೆ ಮತ್ತು ಮಾರಾಟವನ್ನು ನಿಷೇಧಿಸಬೇಕೆಂದು ಅರ್ಜಿ ಸಲ್ಲಿಸಿದ್ದರು.

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪುಸ್ತಕ ಬಿಡುಗಡೆ ಮಾಡಿರುವುದು ರಾಜ್ಯದ ಅಲ್ಪಸಂಖ್ಯಾತರ ಮತಗಳನ್ನು ಧ್ರುವೀಕರಣಗೊಳಿಸುವ ಮತ್ತು ಗಳಿಸುವ ಗುರಿಯನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರೀತಿ ಪರೇವಾರವರು, “ಅರ್ಜಿದಾರರ ವಾದದಂತೆ ಪ್ರಾಥಮಿಕ ಸಾಕ್ಷಿಯಾಗಲಿ ಇತರ ಸಾಕ್ಷಿಗಳು ಪೂರಕವಾಗಿಲ್ಲ. ಹಾಗಾಗಿ ಪುಸ್ತಕಕ್ಕೆ ತಡೆಯಾಜ್ಞೆ ಸಾಧ್ಯವಿಲ್ಲ. ಅದು ಪ್ರಕಾಶಕರಿಗೆ ಹಣಕಾಸಿನ ತೊಂದರೆಗೆ ಕಾರಣವಾಗುತ್ತದೆ ಮತ್ತು ಲೇಖಕರ ಭಾಷಣ ಮತ್ತು ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸುತ್ತದೆ” ಎಂದಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಕಾರಣಕ್ಕಾಗಿಯೇ ಹಲವು ಹಿಂದುತ್ವವಾದಿಗಳು ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿನ ಮನೆಗೆ ಬೆಂಕಿ ಹಚ್ಚಿದ್ದರು.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಅರ್ಜಿ ಕುರಿತು ನ್ಯಾಯಾಧೀಶರು “ಅರ್ಜಿದಾರರು ಯಾವಾಗಲೂ ಪುಸ್ತಕದ ವಿರುದ್ಧ ಪ್ರಚಾರ ಮಾಡಬಹುದು ಮತ್ತು ಅವರ ಭಾವನೆಗಳಗೆ ಘಾಸಿಗೊಳಿಸಿರುವ ಆಪಾದಿತ ಪ್ಯಾರಾಗಳಿಗೆ ಖಂಡನೆಯನ್ನು ಸಹ ಪ್ರಕಟಿಸಬಹುದು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...