Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು.

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪುಸ್ತಕಗಳ ಪ್ರಕಟಣೆ, ಪ್ರಸಾರ ಮತ್ತು ಮಾರಾಟವನ್ನು ತಡೆಯಿಡಿಯಲು ಸಾಧ್ಯವಿಲ್ಲ ಎಂದಿರುವ ದೆಹಲಿ ಕೋರ್ಟ್ ಈ ಕುರಿತು ಹಿಂದುತ್ವವಾದಿ ನಾಯಕನೊಬ್ಬ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.

ಹಿಂದೂ ಸೇನಾ ಅಧ್ಯಕ್ಷ ವಿಷ್ಣು ಗುಪ್ತ ಎಂಬುವವರು ಹಿಂದೂ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಸಲ್ಮಾನ್ ಖುರ್ಷಿದ್ ಅವರ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಪುಸ್ತಕ ಪ್ರಕಟಣೆ ಮತ್ತು ಮಾರಾಟವನ್ನು ನಿಷೇಧಿಸಬೇಕೆಂದು ಅರ್ಜಿ ಸಲ್ಲಿಸಿದ್ದರು.

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪುಸ್ತಕ ಬಿಡುಗಡೆ ಮಾಡಿರುವುದು ರಾಜ್ಯದ ಅಲ್ಪಸಂಖ್ಯಾತರ ಮತಗಳನ್ನು ಧ್ರುವೀಕರಣಗೊಳಿಸುವ ಮತ್ತು ಗಳಿಸುವ ಗುರಿಯನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರೀತಿ ಪರೇವಾರವರು, “ಅರ್ಜಿದಾರರ ವಾದದಂತೆ ಪ್ರಾಥಮಿಕ ಸಾಕ್ಷಿಯಾಗಲಿ ಇತರ ಸಾಕ್ಷಿಗಳು ಪೂರಕವಾಗಿಲ್ಲ. ಹಾಗಾಗಿ ಪುಸ್ತಕಕ್ಕೆ ತಡೆಯಾಜ್ಞೆ ಸಾಧ್ಯವಿಲ್ಲ. ಅದು ಪ್ರಕಾಶಕರಿಗೆ ಹಣಕಾಸಿನ ತೊಂದರೆಗೆ ಕಾರಣವಾಗುತ್ತದೆ ಮತ್ತು ಲೇಖಕರ ಭಾಷಣ ಮತ್ತು ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸುತ್ತದೆ” ಎಂದಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಕಾರಣಕ್ಕಾಗಿಯೇ ಹಲವು ಹಿಂದುತ್ವವಾದಿಗಳು ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿನ ಮನೆಗೆ ಬೆಂಕಿ ಹಚ್ಚಿದ್ದರು.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಅರ್ಜಿ ಕುರಿತು ನ್ಯಾಯಾಧೀಶರು “ಅರ್ಜಿದಾರರು ಯಾವಾಗಲೂ ಪುಸ್ತಕದ ವಿರುದ್ಧ ಪ್ರಚಾರ ಮಾಡಬಹುದು ಮತ್ತು ಅವರ ಭಾವನೆಗಳಗೆ ಘಾಸಿಗೊಳಿಸಿರುವ ಆಪಾದಿತ ಪ್ಯಾರಾಗಳಿಗೆ ಖಂಡನೆಯನ್ನು ಸಹ ಪ್ರಕಟಿಸಬಹುದು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...