Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆ ಅಸಾಧ್ಯ: ಸಲ್ಮಾನ್ ಖುರ್ಷಿದ್ ಪುಸ್ತಕ ತಡೆಯಾಜ್ಞೆಗೆ ಕೋರ್ಟ್ ನಕಾರ

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು.

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪುಸ್ತಕಗಳ ಪ್ರಕಟಣೆ, ಪ್ರಸಾರ ಮತ್ತು ಮಾರಾಟವನ್ನು ತಡೆಯಿಡಿಯಲು ಸಾಧ್ಯವಿಲ್ಲ ಎಂದಿರುವ ದೆಹಲಿ ಕೋರ್ಟ್ ಈ ಕುರಿತು ಹಿಂದುತ್ವವಾದಿ ನಾಯಕನೊಬ್ಬ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.

ಹಿಂದೂ ಸೇನಾ ಅಧ್ಯಕ್ಷ ವಿಷ್ಣು ಗುಪ್ತ ಎಂಬುವವರು ಹಿಂದೂ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಸಲ್ಮಾನ್ ಖುರ್ಷಿದ್ ಅವರ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಪುಸ್ತಕ ಪ್ರಕಟಣೆ ಮತ್ತು ಮಾರಾಟವನ್ನು ನಿಷೇಧಿಸಬೇಕೆಂದು ಅರ್ಜಿ ಸಲ್ಲಿಸಿದ್ದರು.

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಪುಸ್ತಕ ಬಿಡುಗಡೆ ಮಾಡಿರುವುದು ರಾಜ್ಯದ ಅಲ್ಪಸಂಖ್ಯಾತರ ಮತಗಳನ್ನು ಧ್ರುವೀಕರಣಗೊಳಿಸುವ ಮತ್ತು ಗಳಿಸುವ ಗುರಿಯನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರೀತಿ ಪರೇವಾರವರು, “ಅರ್ಜಿದಾರರ ವಾದದಂತೆ ಪ್ರಾಥಮಿಕ ಸಾಕ್ಷಿಯಾಗಲಿ ಇತರ ಸಾಕ್ಷಿಗಳು ಪೂರಕವಾಗಿಲ್ಲ. ಹಾಗಾಗಿ ಪುಸ್ತಕಕ್ಕೆ ತಡೆಯಾಜ್ಞೆ ಸಾಧ್ಯವಿಲ್ಲ. ಅದು ಪ್ರಕಾಶಕರಿಗೆ ಹಣಕಾಸಿನ ತೊಂದರೆಗೆ ಕಾರಣವಾಗುತ್ತದೆ ಮತ್ತು ಲೇಖಕರ ಭಾಷಣ ಮತ್ತು ಅಭಿವ್ಯಕ್ತಿಯ ಹಕ್ಕನ್ನು ಮೊಟಕುಗೊಳಿಸುತ್ತದೆ” ಎಂದಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಕಾರಣಕ್ಕಾಗಿಯೇ ಹಲವು ಹಿಂದುತ್ವವಾದಿಗಳು ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿನ ಮನೆಗೆ ಬೆಂಕಿ ಹಚ್ಚಿದ್ದರು.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಅರ್ಜಿ ಕುರಿತು ನ್ಯಾಯಾಧೀಶರು “ಅರ್ಜಿದಾರರು ಯಾವಾಗಲೂ ಪುಸ್ತಕದ ವಿರುದ್ಧ ಪ್ರಚಾರ ಮಾಡಬಹುದು ಮತ್ತು ಅವರ ಭಾವನೆಗಳಗೆ ಘಾಸಿಗೊಳಿಸಿರುವ ಆಪಾದಿತ ಪ್ಯಾರಾಗಳಿಗೆ ಖಂಡನೆಯನ್ನು ಸಹ ಪ್ರಕಟಿಸಬಹುದು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...