Homeಮುಖಪುಟಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ...

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

- Advertisement -
- Advertisement -

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಲಕ್ನೋ ಜಿಲ್ಲೆಯ ನ್ಯಾಯಾಲಯವು ಎಎನ್‌ಐ ಸುದ್ದಿ ಸಂಸ್ಥೆಯ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಅವರು ನೀಡಿದ ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿ ಹೇಳಿದೆ.

ದೂರು ಪ್ರಕರಣ ಎಂದರೆ ಒಂದು ಅಪರಾಧ ನಡೆದಿದೆ ಎಂದು ನ್ಯಾಯಾಲದ ಮುಂದೆ ಔಪಚಾರಿಕವಾಗಿ ಮಾಡಲಾಗುವ ಆರೋಪವಾಗಿದೆ.

ಅಮಿತಾಬ್ ಠಾಕೂರ್ ಅವರ ದೂರು ಪರಿಶೀಲಿಸಿದ ನ್ಯಾಯಾಲವು “ಈ ಹಂತದಲ್ಲಿ ಪ್ರಾದೇಶಿಕ ನ್ಯಾಯವ್ಯಾಪ್ತಿಯ ಅರ್ಹತೆಗಳು ಅಥವಾ ಸಾಕಷ್ಟು ಆಧಾರಗಳ ಹೊರತಾಗಿಯೂ, ಈ ದೂರು ಕಾರ್ಯವಿಧಾನವಾಗಿ ಕ್ರಮಬದ್ಧವಾಗಿದೆ ಎಂದು ಕಂಡುಬಂದಿದೆ. ಅಧ್ಯಾಯ XV BNSSನ ನಿಬಂಧನೆಗಳ ಅಡಿಯಲ್ಲಿ, ಈ ದೂರು ದೂರು ಪ್ರಕರಣವಾಗಿ ನೋಂದಾಯಿಸಲು ಅರ್ಹವಾಗಿದೆ” ಎಂದು ಸೆಪ್ಟೆಂಬರ್ 11, 2025ರಂದು ಹೊರಡಿಸಿದ ಆದೇಶದಲ್ಲಿ ಲಕ್ನೋದ ನ್ಯಾಯಾಂಗ ಮ್ಯಾಜಿಸ್ಟ್ರೇಟ್-III ಹೇಳಿದ್ದಾರೆ.

“ಈ ಪ್ರಕರಣವನ್ನು ದೂರು ಪ್ರಕರಣವಾಗಿ ದಾಖಲಿಸಲಿ. ದೂರುದಾರರು ಹೇಳಿಕೆಯನ್ನು ದಾಖಲಿಸಲು ದಿನಾಂಕ 26 ಸೆಪ್ಟೆಂಬರ್ 2025 ರಂದು ಹಾಜರಾಗಲಿ” ಎಂದು ನ್ಯಾಯಾಲಯ ತಿಳಿಸಿದೆ.

ದೂರಿನಲ್ಲಿರುವ ಆರೋಪಗಳು

ಬಿಎನ್‌ಎಸ್‌ಎಸ್‌ನ ಸೆಕ್ಷನ್ 210ರ ಅಡಿಯಲ್ಲಿ ನೀಡಿದ ವಿವರವಾದ ದೂರಿನಲ್ಲಿ, “ಚುನಾವಣಾ ಆಯೋಗ ತನ್ನ ವೆಬ್‌ಸೈಟ್ ಅಥವಾ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಪ್ರಕಟಿಸಿರದ ವಿಷಯಗಳನ್ನು, ಚುನಾವಣಾ ಆಯೋಗ ಹೇಳಿದೆ ಎಂದು ಸ್ಮಿತಾ ಪ್ರಕಾಶ್ ನೇತೃತ್ವದ ಎಎನ್‌ಐ ಪದೇ ಪದೇ ವರದಿ ಮಾಡುತ್ತಿದೆ. ಈ ಮೂಲಕ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅಮಿತಾಬ್ ಠಾಕೂರ್ ಆರೋಪಿಸಿದ್ದಾರೆ.

ದೂರಿನಲ್ಲಿ ಆಗಸ್ಟ್ 2025ರ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ. ಅದರಲ್ಲಿ ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸುವ ಮೊದಲು ಅಥವಾ ಪ್ರಕಟಿಸಿರದ ವಿಷಯಗಳನ್ನು ಎಎನ್‌ಐ ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

“ಆಗಸ್ಟ್ 1, 2025ರಂದು ಮಧ್ಯಾಹ್ನ 15:08ಕ್ಕೆ (3.08) ರಾಹುಲ್ ಗಾಂಧಿಯ ‘ಮತಗಳ್ಳತನ’ ಆರೋಪಗಳನ್ನು ಆಕ್ಷೇಪಿಸಿ ಚುನಾವಣಾ ಆಯೋಗ ಹೇಳಿಕೆ ನೀಡಿದೆ ಎಂದು ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿತ್ತು. ಆದರೆ, ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯನ್ನು ಹಿಂದಿಯಲ್ಲಿ ಸಂಜೆ 17:59ಕ್ಕೆ (5.59) ಇಂಗ್ಲಿಷ್‌ನಲ್ಲಿ ಸಂಜೆ 19:55ಕ್ಕೆ (9.55) ಪ್ರಕಟಿಸಿದೆ. ಅದರಲ್ಲಿ ರಾಹುಲ್ ಗಾಂಧಿಯ ಹೇಳಿಕೆಯು ‘ದಾರಿತಪ್ಪಿಸುವ, ಆಧಾರರಹಿತ ಮತ್ತು ಬೆದರಿಕೆ’ಎಂದಿದೆ. ಇಲ್ಲಿ ಚುನಾವಣಾ ಆಯೋಗ ಹೇಳಿಕೆ ನೀಡುವ ಮೊದಲೇ ಅದರ ಹೆಸರಿನಲ್ಲಿ ಎಎನ್‌ಐ ಪೋಸ್ಟ್ ಮಾಡಿತ್ತು” ಎಂದು ಠಾಕೂರ್ ವಿವರಿಸಿದ್ದಾರೆ.

ಹೀಗೆ, ಚುನಾವಣಾ ಆಯೋಗ ತನ್ನ ವೆಬ್‌ಸೈಟ್, ಸುದ್ದಿಗೋಷ್ಠಿ ಸೇರಿದಂತೆ ಎಲ್ಲೂ ಹೇಳಿರದ ಅನೇಕ ಸುದ್ದಿಗಳನ್ನು ಎಎನ್‌ಐ ಚುನಾವಣಾ ಆಯೋಗದ ಹೆಸರಿನಲ್ಲಿ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಈ ಆಧಾರಗಳ ಮೇಲೆ, ಎಎನ್‌ಐ ಕೃತ್ಯಗಳು ಪ್ರಾಥಮಿಕವಾಗಿ ಕಾನೂನುಬಾಹಿರ ಮತ್ತು ಕ್ರಿಮಿನಲ್ ಕೃತ್ಯಗಳಾಗಿವೆ. ವಿಶೇಷವಾಗಿ ಸೆಕ್ಷನ್ 318(2) ಬಿಎನ್ಎಸ್ ಅಡಿಯಲ್ಲಿ ಎಂದು ಅಮಿತಾಬ್ ಠಾಕೂರ್ ತಿಳಿಸಿದ್ದಾರೆ.

ಪೊಲೀಸರ ಮೂಲಕ ಎಫ್‌ಐಆರ್ ದಾಖಲಿಸಲು ಕೋರಬಹುದಿತ್ತು. ಆದರೆ, ಪೊಲೀಸರು ವಿವಿಧ ಕಾರಣಗಳಿಂದ ಪ್ರತಿವಾದಿಗಳ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದ್ದು, ಆದ್ದರಿಂದ ನ್ಯಾಯಾಲಯದ ಮುಂದೆ ನೇರ ದೂರು ಪ್ರಕರಣ ದಾಖಲಿಸುವುದು ಹೆಚ್ಚು ಸೂಕ್ತ ಎಂಬುವುದಾಗಿ ತೀರ್ಮಾನಿಸಿದೆ ಎಂದು ಠಾಕೂರ್ ಹೇಳಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...