Homeಮುಖಪುಟಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ...

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

- Advertisement -
- Advertisement -

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಲಕ್ನೋ ಜಿಲ್ಲೆಯ ನ್ಯಾಯಾಲಯವು ಎಎನ್‌ಐ ಸುದ್ದಿ ಸಂಸ್ಥೆಯ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಅವರು ನೀಡಿದ ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿ ಹೇಳಿದೆ.

ದೂರು ಪ್ರಕರಣ ಎಂದರೆ ಒಂದು ಅಪರಾಧ ನಡೆದಿದೆ ಎಂದು ನ್ಯಾಯಾಲದ ಮುಂದೆ ಔಪಚಾರಿಕವಾಗಿ ಮಾಡಲಾಗುವ ಆರೋಪವಾಗಿದೆ.

ಅಮಿತಾಬ್ ಠಾಕೂರ್ ಅವರ ದೂರು ಪರಿಶೀಲಿಸಿದ ನ್ಯಾಯಾಲವು “ಈ ಹಂತದಲ್ಲಿ ಪ್ರಾದೇಶಿಕ ನ್ಯಾಯವ್ಯಾಪ್ತಿಯ ಅರ್ಹತೆಗಳು ಅಥವಾ ಸಾಕಷ್ಟು ಆಧಾರಗಳ ಹೊರತಾಗಿಯೂ, ಈ ದೂರು ಕಾರ್ಯವಿಧಾನವಾಗಿ ಕ್ರಮಬದ್ಧವಾಗಿದೆ ಎಂದು ಕಂಡುಬಂದಿದೆ. ಅಧ್ಯಾಯ XV BNSSನ ನಿಬಂಧನೆಗಳ ಅಡಿಯಲ್ಲಿ, ಈ ದೂರು ದೂರು ಪ್ರಕರಣವಾಗಿ ನೋಂದಾಯಿಸಲು ಅರ್ಹವಾಗಿದೆ” ಎಂದು ಸೆಪ್ಟೆಂಬರ್ 11, 2025ರಂದು ಹೊರಡಿಸಿದ ಆದೇಶದಲ್ಲಿ ಲಕ್ನೋದ ನ್ಯಾಯಾಂಗ ಮ್ಯಾಜಿಸ್ಟ್ರೇಟ್-III ಹೇಳಿದ್ದಾರೆ.

“ಈ ಪ್ರಕರಣವನ್ನು ದೂರು ಪ್ರಕರಣವಾಗಿ ದಾಖಲಿಸಲಿ. ದೂರುದಾರರು ಹೇಳಿಕೆಯನ್ನು ದಾಖಲಿಸಲು ದಿನಾಂಕ 26 ಸೆಪ್ಟೆಂಬರ್ 2025 ರಂದು ಹಾಜರಾಗಲಿ” ಎಂದು ನ್ಯಾಯಾಲಯ ತಿಳಿಸಿದೆ.

ದೂರಿನಲ್ಲಿರುವ ಆರೋಪಗಳು

ಬಿಎನ್‌ಎಸ್‌ಎಸ್‌ನ ಸೆಕ್ಷನ್ 210ರ ಅಡಿಯಲ್ಲಿ ನೀಡಿದ ವಿವರವಾದ ದೂರಿನಲ್ಲಿ, “ಚುನಾವಣಾ ಆಯೋಗ ತನ್ನ ವೆಬ್‌ಸೈಟ್ ಅಥವಾ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಪ್ರಕಟಿಸಿರದ ವಿಷಯಗಳನ್ನು, ಚುನಾವಣಾ ಆಯೋಗ ಹೇಳಿದೆ ಎಂದು ಸ್ಮಿತಾ ಪ್ರಕಾಶ್ ನೇತೃತ್ವದ ಎಎನ್‌ಐ ಪದೇ ಪದೇ ವರದಿ ಮಾಡುತ್ತಿದೆ. ಈ ಮೂಲಕ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅಮಿತಾಬ್ ಠಾಕೂರ್ ಆರೋಪಿಸಿದ್ದಾರೆ.

ದೂರಿನಲ್ಲಿ ಆಗಸ್ಟ್ 2025ರ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ. ಅದರಲ್ಲಿ ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸುವ ಮೊದಲು ಅಥವಾ ಪ್ರಕಟಿಸಿರದ ವಿಷಯಗಳನ್ನು ಎಎನ್‌ಐ ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

“ಆಗಸ್ಟ್ 1, 2025ರಂದು ಮಧ್ಯಾಹ್ನ 15:08ಕ್ಕೆ (3.08) ರಾಹುಲ್ ಗಾಂಧಿಯ ‘ಮತಗಳ್ಳತನ’ ಆರೋಪಗಳನ್ನು ಆಕ್ಷೇಪಿಸಿ ಚುನಾವಣಾ ಆಯೋಗ ಹೇಳಿಕೆ ನೀಡಿದೆ ಎಂದು ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿತ್ತು. ಆದರೆ, ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯನ್ನು ಹಿಂದಿಯಲ್ಲಿ ಸಂಜೆ 17:59ಕ್ಕೆ (5.59) ಇಂಗ್ಲಿಷ್‌ನಲ್ಲಿ ಸಂಜೆ 19:55ಕ್ಕೆ (9.55) ಪ್ರಕಟಿಸಿದೆ. ಅದರಲ್ಲಿ ರಾಹುಲ್ ಗಾಂಧಿಯ ಹೇಳಿಕೆಯು ‘ದಾರಿತಪ್ಪಿಸುವ, ಆಧಾರರಹಿತ ಮತ್ತು ಬೆದರಿಕೆ’ಎಂದಿದೆ. ಇಲ್ಲಿ ಚುನಾವಣಾ ಆಯೋಗ ಹೇಳಿಕೆ ನೀಡುವ ಮೊದಲೇ ಅದರ ಹೆಸರಿನಲ್ಲಿ ಎಎನ್‌ಐ ಪೋಸ್ಟ್ ಮಾಡಿತ್ತು” ಎಂದು ಠಾಕೂರ್ ವಿವರಿಸಿದ್ದಾರೆ.

ಹೀಗೆ, ಚುನಾವಣಾ ಆಯೋಗ ತನ್ನ ವೆಬ್‌ಸೈಟ್, ಸುದ್ದಿಗೋಷ್ಠಿ ಸೇರಿದಂತೆ ಎಲ್ಲೂ ಹೇಳಿರದ ಅನೇಕ ಸುದ್ದಿಗಳನ್ನು ಎಎನ್‌ಐ ಚುನಾವಣಾ ಆಯೋಗದ ಹೆಸರಿನಲ್ಲಿ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಈ ಆಧಾರಗಳ ಮೇಲೆ, ಎಎನ್‌ಐ ಕೃತ್ಯಗಳು ಪ್ರಾಥಮಿಕವಾಗಿ ಕಾನೂನುಬಾಹಿರ ಮತ್ತು ಕ್ರಿಮಿನಲ್ ಕೃತ್ಯಗಳಾಗಿವೆ. ವಿಶೇಷವಾಗಿ ಸೆಕ್ಷನ್ 318(2) ಬಿಎನ್ಎಸ್ ಅಡಿಯಲ್ಲಿ ಎಂದು ಅಮಿತಾಬ್ ಠಾಕೂರ್ ತಿಳಿಸಿದ್ದಾರೆ.

ಪೊಲೀಸರ ಮೂಲಕ ಎಫ್‌ಐಆರ್ ದಾಖಲಿಸಲು ಕೋರಬಹುದಿತ್ತು. ಆದರೆ, ಪೊಲೀಸರು ವಿವಿಧ ಕಾರಣಗಳಿಂದ ಪ್ರತಿವಾದಿಗಳ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದ್ದು, ಆದ್ದರಿಂದ ನ್ಯಾಯಾಲಯದ ಮುಂದೆ ನೇರ ದೂರು ಪ್ರಕರಣ ದಾಖಲಿಸುವುದು ಹೆಚ್ಚು ಸೂಕ್ತ ಎಂಬುವುದಾಗಿ ತೀರ್ಮಾನಿಸಿದೆ ಎಂದು ಠಾಕೂರ್ ಹೇಳಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...