Homeಮುಖಪುಟಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ...

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ವರದಿ ಆರೋಪ: ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೋರ್ಟ್

- Advertisement -
- Advertisement -

ಚುನಾವಣಾ ಆಯೋಗದ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಲಕ್ನೋ ಜಿಲ್ಲೆಯ ನ್ಯಾಯಾಲಯವು ಎಎನ್‌ಐ ಸುದ್ದಿ ಸಂಸ್ಥೆಯ ಸಂಪಾದಕಿ ಸ್ಮಿತಾ ಪ್ರಕಾಶ್ ವಿರುದ್ಧ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಅವರು ನೀಡಿದ ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯ ದೂರು ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿ ಹೇಳಿದೆ.

ದೂರು ಪ್ರಕರಣ ಎಂದರೆ ಒಂದು ಅಪರಾಧ ನಡೆದಿದೆ ಎಂದು ನ್ಯಾಯಾಲದ ಮುಂದೆ ಔಪಚಾರಿಕವಾಗಿ ಮಾಡಲಾಗುವ ಆರೋಪವಾಗಿದೆ.

ಅಮಿತಾಬ್ ಠಾಕೂರ್ ಅವರ ದೂರು ಪರಿಶೀಲಿಸಿದ ನ್ಯಾಯಾಲವು “ಈ ಹಂತದಲ್ಲಿ ಪ್ರಾದೇಶಿಕ ನ್ಯಾಯವ್ಯಾಪ್ತಿಯ ಅರ್ಹತೆಗಳು ಅಥವಾ ಸಾಕಷ್ಟು ಆಧಾರಗಳ ಹೊರತಾಗಿಯೂ, ಈ ದೂರು ಕಾರ್ಯವಿಧಾನವಾಗಿ ಕ್ರಮಬದ್ಧವಾಗಿದೆ ಎಂದು ಕಂಡುಬಂದಿದೆ. ಅಧ್ಯಾಯ XV BNSSನ ನಿಬಂಧನೆಗಳ ಅಡಿಯಲ್ಲಿ, ಈ ದೂರು ದೂರು ಪ್ರಕರಣವಾಗಿ ನೋಂದಾಯಿಸಲು ಅರ್ಹವಾಗಿದೆ” ಎಂದು ಸೆಪ್ಟೆಂಬರ್ 11, 2025ರಂದು ಹೊರಡಿಸಿದ ಆದೇಶದಲ್ಲಿ ಲಕ್ನೋದ ನ್ಯಾಯಾಂಗ ಮ್ಯಾಜಿಸ್ಟ್ರೇಟ್-III ಹೇಳಿದ್ದಾರೆ.

“ಈ ಪ್ರಕರಣವನ್ನು ದೂರು ಪ್ರಕರಣವಾಗಿ ದಾಖಲಿಸಲಿ. ದೂರುದಾರರು ಹೇಳಿಕೆಯನ್ನು ದಾಖಲಿಸಲು ದಿನಾಂಕ 26 ಸೆಪ್ಟೆಂಬರ್ 2025 ರಂದು ಹಾಜರಾಗಲಿ” ಎಂದು ನ್ಯಾಯಾಲಯ ತಿಳಿಸಿದೆ.

ದೂರಿನಲ್ಲಿರುವ ಆರೋಪಗಳು

ಬಿಎನ್‌ಎಸ್‌ಎಸ್‌ನ ಸೆಕ್ಷನ್ 210ರ ಅಡಿಯಲ್ಲಿ ನೀಡಿದ ವಿವರವಾದ ದೂರಿನಲ್ಲಿ, “ಚುನಾವಣಾ ಆಯೋಗ ತನ್ನ ವೆಬ್‌ಸೈಟ್ ಅಥವಾ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಪ್ರಕಟಿಸಿರದ ವಿಷಯಗಳನ್ನು, ಚುನಾವಣಾ ಆಯೋಗ ಹೇಳಿದೆ ಎಂದು ಸ್ಮಿತಾ ಪ್ರಕಾಶ್ ನೇತೃತ್ವದ ಎಎನ್‌ಐ ಪದೇ ಪದೇ ವರದಿ ಮಾಡುತ್ತಿದೆ. ಈ ಮೂಲಕ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅಮಿತಾಬ್ ಠಾಕೂರ್ ಆರೋಪಿಸಿದ್ದಾರೆ.

ದೂರಿನಲ್ಲಿ ಆಗಸ್ಟ್ 2025ರ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ. ಅದರಲ್ಲಿ ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸುವ ಮೊದಲು ಅಥವಾ ಪ್ರಕಟಿಸಿರದ ವಿಷಯಗಳನ್ನು ಎಎನ್‌ಐ ತನ್ನ ಎಕ್ಸ್‌ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

“ಆಗಸ್ಟ್ 1, 2025ರಂದು ಮಧ್ಯಾಹ್ನ 15:08ಕ್ಕೆ (3.08) ರಾಹುಲ್ ಗಾಂಧಿಯ ‘ಮತಗಳ್ಳತನ’ ಆರೋಪಗಳನ್ನು ಆಕ್ಷೇಪಿಸಿ ಚುನಾವಣಾ ಆಯೋಗ ಹೇಳಿಕೆ ನೀಡಿದೆ ಎಂದು ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿತ್ತು. ಆದರೆ, ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯನ್ನು ಹಿಂದಿಯಲ್ಲಿ ಸಂಜೆ 17:59ಕ್ಕೆ (5.59) ಇಂಗ್ಲಿಷ್‌ನಲ್ಲಿ ಸಂಜೆ 19:55ಕ್ಕೆ (9.55) ಪ್ರಕಟಿಸಿದೆ. ಅದರಲ್ಲಿ ರಾಹುಲ್ ಗಾಂಧಿಯ ಹೇಳಿಕೆಯು ‘ದಾರಿತಪ್ಪಿಸುವ, ಆಧಾರರಹಿತ ಮತ್ತು ಬೆದರಿಕೆ’ಎಂದಿದೆ. ಇಲ್ಲಿ ಚುನಾವಣಾ ಆಯೋಗ ಹೇಳಿಕೆ ನೀಡುವ ಮೊದಲೇ ಅದರ ಹೆಸರಿನಲ್ಲಿ ಎಎನ್‌ಐ ಪೋಸ್ಟ್ ಮಾಡಿತ್ತು” ಎಂದು ಠಾಕೂರ್ ವಿವರಿಸಿದ್ದಾರೆ.

ಹೀಗೆ, ಚುನಾವಣಾ ಆಯೋಗ ತನ್ನ ವೆಬ್‌ಸೈಟ್, ಸುದ್ದಿಗೋಷ್ಠಿ ಸೇರಿದಂತೆ ಎಲ್ಲೂ ಹೇಳಿರದ ಅನೇಕ ಸುದ್ದಿಗಳನ್ನು ಎಎನ್‌ಐ ಚುನಾವಣಾ ಆಯೋಗದ ಹೆಸರಿನಲ್ಲಿ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಈ ಆಧಾರಗಳ ಮೇಲೆ, ಎಎನ್‌ಐ ಕೃತ್ಯಗಳು ಪ್ರಾಥಮಿಕವಾಗಿ ಕಾನೂನುಬಾಹಿರ ಮತ್ತು ಕ್ರಿಮಿನಲ್ ಕೃತ್ಯಗಳಾಗಿವೆ. ವಿಶೇಷವಾಗಿ ಸೆಕ್ಷನ್ 318(2) ಬಿಎನ್ಎಸ್ ಅಡಿಯಲ್ಲಿ ಎಂದು ಅಮಿತಾಬ್ ಠಾಕೂರ್ ತಿಳಿಸಿದ್ದಾರೆ.

ಪೊಲೀಸರ ಮೂಲಕ ಎಫ್‌ಐಆರ್ ದಾಖಲಿಸಲು ಕೋರಬಹುದಿತ್ತು. ಆದರೆ, ಪೊಲೀಸರು ವಿವಿಧ ಕಾರಣಗಳಿಂದ ಪ್ರತಿವಾದಿಗಳ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದ್ದು, ಆದ್ದರಿಂದ ನ್ಯಾಯಾಲಯದ ಮುಂದೆ ನೇರ ದೂರು ಪ್ರಕರಣ ದಾಖಲಿಸುವುದು ಹೆಚ್ಚು ಸೂಕ್ತ ಎಂಬುವುದಾಗಿ ತೀರ್ಮಾನಿಸಿದೆ ಎಂದು ಠಾಕೂರ್ ಹೇಳಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...