Homeಮುಖಪುಟದಂತ ಸಂಗ್ರಹ ಪ್ರಕರಣ: ಮೋಹನ್‌ಲಾಲ್‌ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ!

ದಂತ ಸಂಗ್ರಹ ಪ್ರಕರಣ: ಮೋಹನ್‌ಲಾಲ್‌ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ!

- Advertisement -
- Advertisement -

ಎರಡು ಜೋಡಿ ದಂತಗಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ನಟ ಮೋಹನ್ ಲಾಲ್ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ಹಿಂಪಡೆಯುವಂತೆ ಕೇರಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಕೊಚ್ಚಿಯ ವಿಚಾರಣಾ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಲಾಲ್ ವಿಚಾರಣೆ ಎದುರಿಸಬೇಕಾಗಿರುವುದು ಸ್ಪಷ್ಟವಾಗಿದೆ. ಮೋಹನ್‌ ಲಾಲ್ ಅಕ್ರಮವಾಗಿ ದಂತದ ಕಲಾಕೃತಿಗಳನ್ನು ಇರಿಸಿಕೊಂಡಿದ್ದರು ಎಂದು 2012ರಲ್ಲಿ ಪ್ರಕರಣ ದಾಖಲಾಗಿದ್ದು, ಥೇವರದಲ್ಲಿನ ಅವರ ಮನೆಯಿಂದ ಕಲಾಕೃತಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಕರಣವನ್ನು ಮುಂದುವರಿಸುವುದು ವ್ಯರ್ಥ ಕಸರತ್ತಾಗಿದೆ. ನ್ಯಾಯಾಲಯದ ಸಮಯವೂ ವ್ಯರ್ಥವಾಗುತ್ತದೆ” ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ. ಆದರೆ ಕೋರ್ಟ್, “ಮೊದಲ ಆರೋಪಿಯಾಗಿ ಗುರುತಿಸಲಾಗಿರುವ ಮೋಹನ್‌ಲಾಲ್ ಅವರಿಗೆ ನೀಡಲಾದ ಮಾಲೀಕತ್ವ ಪ್ರಮಾಣಪತ್ರದ ಕಾನೂನುಬದ್ಧತೆಯ ಬಗ್ಗೆ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಸವಾಲುಗಳನ್ನು ಬಗೆಹರಿಸದೆ ಅರ್ಜಿಯನ್ನು ತರಾತುರಿಯಲ್ಲಿ ಸಲ್ಲಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

“ವಿಚಾರಣೆಯನ್ನು ಹಿಂಪಡೆಯಲು ಸಲ್ಲಿಸಿರುವ ಅರ್ಜಿಯನ್ನು ಅನುಮತಿಸಲು ನಾನು ಒಲವು ತೋರುತ್ತಿಲ್ಲ” ಎಂದು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಂಜು ಕ್ಲೀಟಸ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: Film Review| ಜನ ಗಣ ಮನ: ಸಮೂಹ ಸನ್ನಿಗೊಂದು ಮದ್ದು

ಈ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಯಿಂದ ಹಿಂದೆ ಸರಿಯಲು ಫೆಬ್ರವರಿ 7, 2020ರಂದು ರಾಜ್ಯ ಸರ್ಕಾರ ಒಪ್ಪಿಗೆ ವಿಸ್ತರಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಆದರೆ ನ್ಯಾಯಾಲಯ ತನ್ನ ಆದೇಶದಲ್ಲಿ, “ಈ ಪ್ರಕರಣದಲ್ಲಿ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರುವುದಿಲ್ಲ. ದಂತಗಳಿಗೆ ಸಂಬಂಧಿಸಿದ ಮಾಲೀಕತ್ವವು ಅನೂರ್ಜಿತವಾಗಿದೆ” ಎಂದು ತಿಳಿಸಿದೆ.

ಜೂನ್ 2012ರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಮೋಹನ್‌ ಲಾಲ್‌ ಮನೆಯಿಂದ ನಾಲ್ಕು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಯಿತು. ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಯಿತು. ಯಾವುದೇ ಹೆಚ್ಚಿನ ತನಿಖೆ ನಡೆಯದಂತೆ ಪ್ರಕರಣವನ್ನು ಮುಚ್ಚಿ ಹಾಕಲು ತನ್ನ ಪ್ರಭಾವವನ್ನು ಮೋಹನ್‌ ಬಳಸಿದ್ದಾರೆಂದು ದೂರುದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...