Homeಮುಖಪುಟಕೇಜ್ರಿವಾಲ್‌ನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸಲು ನಿರಾಕರಿಸಿದ ಹೈಕೋರ್ಟ್‌

ಕೇಜ್ರಿವಾಲ್‌ನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸಲು ನಿರಾಕರಿಸಿದ ಹೈಕೋರ್ಟ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಈ ಕುರಿತ ಅರ್ಜಿಯನ್ನು ತಳ್ಳಿಹಾಕಿದ ದೆಹಲಿ ನ್ಯಾಯಾಲಯ, ಈ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದೆ.

ರೈತ ಮತ್ತು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡಿದ್ದ ದೆಹಲಿ ನಿವಾಸಿ ಸುರ್ಜಿತ್ ಸಿಂಗ್ ಯಾದವ್ ಈ ಬಗ್ಗೆ ಕೋರ್ಟ್‌ ಮೊರೆ ಹೋಗಿದ್ದರು. ಹಣಕಾಸು ಅವ್ಯವಹಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿಯೊಬ್ಬರು ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಯಾದವ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್, ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿದೆಯೇ? ನಾವು ಇಂದಿನ ಪತ್ರಿಕೆಯನ್ನು ಓದಿದ್ದೇವೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಈ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದಾರೆ. ಅದು ರಾಷ್ಟ್ರಪತಿಗಳ ಬಳಿಗೆ ಹೋಗಲಿದೆ. ಲೆಫ್ಟಿನೆಂಟ್ ಗವರ್ನರ್ ಈ ಬಗ್ಗೆ ಪರಿಗಣಿಸಬೇಕು, ರಾಷ್ಟ್ರಪತಿಗಳು ಪರಿಗಣಿಸಬೇಕು. ನಾವು ಏಕೆ ಪರಿಗಣಿಸಬೇಕು, ಅವರು ಪರಿಗಣಿಸುತ್ತಾರೆ. ನಾವು ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವುದಿಲ್ಲ. ಯಾವುದೇ ಹೈಕೋರ್ಟ್ ಅದನ್ನು ಮಾಡುವುದಿಲ್ಲ. ಅವರು ತೀರ್ಮಾನಕ್ಕೆ ಬರುತ್ತಾರೆ. ಅವರು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ನ್ಯಾಯಮೂರ್ತಿ ಮನಮೋಹನ್ ಅವರು ಹೇಳಿದ್ದಾರೆ.

ಕೇಜ್ರಿವಾಲ್ ಅವರನ್ನು ಈ ಹುದ್ದೆಯಲ್ಲಿ ಮುಂದುವರಿಸುವುದರಿಂದ ಕಾನೂನು ಪ್ರಕ್ರಿಯೆಗೆ ಅಡ್ಡಿಯುಂಟಾಗುವುದು ಮತ್ತು ನ್ಯಾಯಾಂಗದ ಹಾದಿಗೆ ಅಡ್ಡಿಯಾಗುವುದಲ್ಲದೆ, ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರಗಳ ಸ್ಥಗಿತಕ್ಕೆ ಕಾರಣವಾಗಬಹುದು ಎಂದು ಅರ್ಜಿದಾರರು ಕೋರ್ಟ್‌ ಗಮನಕ್ಕೆ ತಂದಿದ್ದರು.

ಕಾರಾಗೃಹದಲ್ಲಿರುವ ಮುಖ್ಯಮಂತ್ರಿಗಳು ಸರಕಾರಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ನಡೆಸಲು ಅಸಮರ್ಥರಾಗಿರುತ್ತಾರೆ ಮತ್ತು ಒಂದು ವೇಳೆ ಮಾಡಿದರೂ, ಸಂವಿಧಾನದ ಮೂರನೇ ಶೆಡ್ಯೂಲ್ ಅಡಿಯಲ್ಲಿ ಮುಖ್ಯಮಂತ್ರಿಗೆ ಬೋಧಿಸಲಾದ ಗೌಪ್ಯತೆಯ ಪ್ರಮಾಣ ವಚನವನ್ನು ನೇರವಾಗಿ ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿದೆ ಮತ್ತು ನಂತರ ದೆಹಲಿ ನ್ಯಾಯಾಲಯವು ಮಾರ್ಚ್ 28ರವರೆಗೆ ಅವರನ್ನು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ.

ಇದನ್ನು ಓದಿ: ಎಎಪಿ ಪ್ರತಿಭಟನೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...