Homeಮುಖಪುಟವಿಮರ್ಶೆ ನಿಷೇಧಕ್ಕೆ ಮನವಿ; 'ಕಾಲಿವುಡ್' ನಿರ್ಮಾಪಕರ ಸಂಘದ ಮನವಿ ತಿರಸ್ಕರಿಸಿದ ನ್ಯಾಯಾಲಯ

ವಿಮರ್ಶೆ ನಿಷೇಧಕ್ಕೆ ಮನವಿ; ‘ಕಾಲಿವುಡ್’ ನಿರ್ಮಾಪಕರ ಸಂಘದ ಮನವಿ ತಿರಸ್ಕರಿಸಿದ ನ್ಯಾಯಾಲಯ

- Advertisement -
- Advertisement -

ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಮೂರು ದಿನಗಳ ಕಾಲ ಚಲನಚಿತ್ರದ ಕುರಿತು ವಿಮರ್ಷೆ ಮಾಡದಂತೆ ವ್ಯಕ್ತಿಗಳು ಅಥವಾ ಸಾಮಾಜಿಕ ಮಾಧ್ಯಮ ಚಾನಲ್‌ಗಳನ್ನು ನಿರ್ಬಂಧಿಸಬೇಕು ಎಂದು ಮಧ್ಯಂತರ ಆದೇಶ ನೀಡಬೇಕು ಎಂಬ ಮನವಿಯನ್ನು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.

ತಮಿಳು ಚಲನಚಿತ್ರ ಸಕ್ರಿಯ ನಿರ್ಮಾಪಕರ ಸಂಘ (ಟಿಎಫ್‌ಎಪಿಎ) ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸೌಂಥರ್, “ಯಾವುದೇ ಚಲನಚಿತ್ರವನ್ನು ವಿಮರ್ಷಿಸಲು ವಿಮರ್ಶಕರು ಅರ್ಹರಾಗಿದ್ದಾರೆ; ಅದು ಅವರ ಅಭಿಪ್ರಾಯವಾಗಿದೆ” ಎಂದು ಹೇಳಿದ್ದಾರೆ.

‘ಟಿಎಫ್‌ಎಪಿಎ’ಯನ್ನು ಪ್ರತಿನಿಧಿಸುವ ವಕೀಲ ವಿಜಯನ್ ಸುಬ್ರಮಣಿಯನ್, ಕೆಲವು ವ್ಯಕ್ತಿಗಳು, ಚಲನಚಿತ್ರ ವಿಮರ್ಶೆಗಳ ಸೋಗಿನಲ್ಲಿ, ನಿರ್ದೇಶಕರು, ನಟರು ಮತ್ತು ನಿರ್ಮಾಪಕರ ಮಾನಹಾನಿ, ಅವರ ಪ್ರತಿಷ್ಠೆಗೆ ಹಾನಿಯುಂಟುಮಾಡುತ್ತಾರೆ ಎಂದು ವಾದಿಸಿದರು.

ಅಸೋಸಿಯೇಷನ್ ​​ಈ ಚಟುವಟಿಕೆಗಳ ಮೇಲೆ ನಿರ್ಬಂಧಗಳನ್ನು ಕೋರಿದ್ದು, ಚಲನಚಿತ್ರ ವಿಮರ್ಶೆಗಳ ಉದ್ದೇಶಕ್ಕಾಗಿ ಯೂಟ್ಯೂಬ್ ಚಾನೆಲ್‌ಗಳು ಸಿನಿಮಾ ಥಿಯೇಟರ್‌ಗಳಿಗೆ ಪ್ರವೇಶಿಸುವುದನ್ನು ತಡೆಯಲು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನಗಳನ್ನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತು.

ಅರ್ಜಿಯು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಿಮರ್ಷೆ ಕುರಿತ ನಿಯಂತ್ರಣ ಮತ್ತು ಸ್ವಯಂ-ಶಿಸ್ತಿನ ಕೊರತೆಯನ್ನು ಎತ್ತಿ ತೋರಿಸಿದೆ. ಇದು ಮಾನಹಾನಿಕರ ಟೀಕೆಗಳಿಗೆ ಮತ್ತು ಚಲನಚಿತ್ರ ರೇಟಿಂಗ್‌ಗಳನ್ನು ತಿರುಚಲು ಸಂಘಟಿತ ಪ್ರಯತ್ನಗಳಿಗೆ ಕಾರಣವಾಗುತ್ತದೆ, ಇದನ್ನು “ವಿಮರ್ಶೆ ಬಾಂಬ್ ದಾಳಿ” ಎಂದು ಕರೆಯಲಾಗುತ್ತದೆ ಎಂದು ವಾದಿಸಿದ್ದಾರೆ.

“ಸಾಮಾನ್ಯವಾಗಿ ವೈಯಕ್ತಿಕ ಅಥವಾ ವ್ಯಾಪಾರದ ಪೈಪೋಟಿಯಿಂದ ಪ್ರೇರೇಪಿಸಲ್ಪಟ್ಟಿವೆ. ಸಾರ್ವಜನಿಕ ಅಭಿಪ್ರಾಯವನ್ನು ಋಣಾತ್ಮಕವಾಗಿ ಪ್ರಭಾವಿಸುತ್ತದೆ ಮತ್ತು ಪ್ರೇಕ್ಷಕರು ತನ್ನದೇ ಆದ ತೀರ್ಪು ರೂಪಿಸುವ ಮೊದಲು ಗಲ್ಲಾಪೆಟ್ಟಿಗೆಯ ಸಂಗ್ರಹಣೆಗಳಿಗೆ ಹಾನಿ ಮಾಡುತ್ತದೆ” ಎಂದು ಟಿಎಫ್‌ಎಪಿಎ ವಾದಿಸಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಒತ್ತಿಹೇಳುವ ನ್ಯಾಯಾಧೀಶರು ಈ ನಿಟ್ಟಿನಲ್ಲಿ ಮಧ್ಯಂತರ ಆದೇಶ ಅಥವಾ ನಿರ್ದೇಶನಗಳನ್ನು ನೀಡಲು ನಿರಾಕರಿಸಿದರು. ಪ್ರತಿಕ್ರಿಯೆಗಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು,  ಯೂಟ್ಯೂಬ್‌ಗೆ ನೋಟಿಸ್‌ಗಳನ್ನು ನೀಡಲಾಗಿದೆ. ನಾಲ್ಕು ವಾರಗಳ ನಂತರ ಮುಂದಿನ ವಿಚಾರಣೆಗೆ ಪ್ರಕರಣವನ್ನು ಮುಂದೂಡಲಾಗಿದೆ.

ತಮ್ಮ ಚಲನಚಿತ್ರಗಳ ವಾಣಿಜ್ಯ ಪ್ರದರ್ಶನದ ಮೇಲೆ ಆರಂಭಿಕ ವಿಮರ್ಶೆಗಳ ಪ್ರಭಾವದ ಬಗ್ಗೆ ತಮಿಳು ಚಲನಚಿತ್ರ ನಿರ್ಮಾಪಕರಲ್ಲಿ ಹೆಚ್ಚುತ್ತಿರುವ ಕಳವಳವನ್ನು ಈ ಅರ್ಜಿಯು ಅನುಸರಿಸುತ್ತದೆ.

ಇತ್ತೀಚೆಗೆ, ‘ಕಂಗುವ’, ‘ಇಂಡಿಯನ್ 2’ ಮತ್ತು ‘ವೆಟ್ಟೈಯನ್’ ಚಿತ್ರಗಳು ಯೂಟ್ಯೂಬ್ ಚಾನೆಲ್‌ಗಳಲ್ಲಿ ನಕಾರಾತ್ಮಕ ವಿಮರ್ಶೆಗಳು ಮತ್ತು ಅಭಿಮಾನಿಗಳ ಸಂದರ್ಶನಗಳಿಂದ ಪ್ರಭಾವಿತವಾಗಿವೆ ಎಂದು ವರದಿಯಾಗಿದೆ.

ಟಿಎಫ್‌ಎಪಿಎ ಮತ್ತು ತಮಿಳುನಾಡು ನಿರ್ಮಾಪಕರ ಮಂಡಳಿಯು ಆನ್‌ಲೈನ್ ಚಲನಚಿತ್ರ ವಿಮರ್ಶೆಗಳನ್ನು ನಿಯಂತ್ರಿಸಲು ಮಾರ್ಗಸೂಚಿಗಳಿಗೆ ಕರೆ ನೀಡಿವೆ. ಯೂಟ್ಯೂಬರ್‌ಗಳು ತಮ್ಮ ಆವರಣದಲ್ಲಿ ಸಂದರ್ಶನಗಳನ್ನು ನಡೆಸುವುದನ್ನು ನಿಷೇಧಿಸುವಂತೆ ಥಿಯೇಟರ್ ಮಾಲೀಕರನ್ನು ಒತ್ತಾಯಿಸಿವೆ.

ಇದನ್ನೂ ಓದಿ; ಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧ, ಪೊಲೀಸರು ಅನುಮತಿ ನೀಡುತ್ತಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...