Homeಕರ್ನಾಟಕಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

- Advertisement -
- Advertisement -

ದಲಿತ ಕುಟುಂಬಗಳ ಶೆಡ್‌ಗಳನ್ನು ನಾಶಪಡಿಸಿ, ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಜ.30) ಕಾಯ್ದಿರಿಸಿದೆ.

ಮಾದಿಗ ಸಮುದಾಯದ 20 ವರ್ಷದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮುನಿರತ್ನ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ನಡೆಸಿದ್ದಾರೆ.

ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಹೆಚ್‌ ಹನುಮಂತರಾಯ ಅವರು “ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಚರಿತ್ರೆಯ ತುಂಬಾ ಆಘಾತಕಾರಿ ಅಧ್ಯಾಯಗಳಿವೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿ ಪ್ರದೇಶವನ್ನು ಮುನಿರತ್ನ ಮತ್ತು ಅವರ ಬೆಂಬಲಿಗರು ಬಲವಂತದಿಂದ ತೆರವುಗೊಳಿಸಿ ಪುನರ್ವಸತಿ ಕೇಳಿದವರ ವಿರುದ್ಧ ಅಮಾನವೀಯವಾಗಿ ವರ್ತಿಸಿದ್ದಾರೆ. ಮುನಿರತ್ನ ಎಂಥವರು ಎಂಬುವುದು ಎಲ್ಲರಿಗೂ ಗೊತ್ತಿದೆ. ಅವರು ತಾವೊಬ್ಬ ಸಾಚಾ ಎಂದು ಪ್ರತಿಬಿಂಬಿಸಿಕೊಂಡರೆ ಅದನ್ನೆಲ್ಲಾ ನಂಬಲಾಗದು” ಎಂದಿದ್ದಾರೆ.

“ಮುನಿರತ್ನ ಮತ್ತು ಅವರ ಬೆಂಬಲಿಗರು ಬಡವರನ್ನು, ಹೆಣ್ಣು ಮಕ್ಕಳನ್ನು ಗುಡಿಸಲುಗಳಿಂದ ರಾತ್ರೋರಾತ್ರಿ ಹೊರ ಹಾಕಿದ್ದಾರೆ. ಇಂತಹ ಕುಕೃತ್ಯಗಳನ್ನು ಮುನಿರತ್ನ ಮಾಡಿಕೊಂಡೇ ಬಂದವರು. ತಮ್ಮ ಮೇಲೆ ಆಪಾದನೆಗಳು ಬಂದಾಗಲೆಲ್ಲಾ ಅವುಗಳಿಂದ ಹೊರ ಬರುವುದು ಹೇಗೆ ಎಂಬುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಪ್ರತಿ ಘಟನೆಯಲ್ಲೂ ಹಿಂದಿನ ಅನುಭವಗಳ ಆಧಾರದಲ್ಲಿ ತುಂಬಾ ಹುಷಾರಾಗಿ ವರ್ತಿಸುತ್ತಾರೆ” ಎಂದು ವಕೀಲರು ದೂರಿದ್ದಾರೆ.

“ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯ ಅವಶ್ಯಕತೆಯೇ ಇಲ್ಲ. ಒಕ್ಕಲೆಬ್ಬಿಸಿದವರಿಗೆ ಪೂರ್ವಭಾವಿಯಾಗಿ ನೋಟಿಸ್‌ ನೀಡಿಲ್ಲ. ಸೂಕ್ತ ಪುನರ್ವಸತಿ ಕಲ್ಪಿಸಿಲ್ಲ. ವಾಸ್ತವದಲ್ಲಿ ಇದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿರುವ ಕಾರ್ಯಾಚರಣೆಯೇ ಅಲ್ಲ. ಮುನಿರತ್ನ ಸುತ್ತಮುತ್ತ ಇರುವ ಮಾಜಿ ಕಾರ್ಪೊರೇಟರ್‌ಗಳು ಮತ್ತು ಟಿಕೆಟ್‌ ಆಕಾಂಕ್ಷಿಗಳ ತಂಡದಿಂದ ಮುನಿರತ್ನ ನಡೆಸಿರುವ ದುಷ್ಕತ್ಯವಿದು. ಆದಾಗ್ಯೂ, ಸತ್ಯ ಹೊರಗೆಳೆಯುತ್ತೇನೆ ಎಂದು ಈ ಹೆಣ್ಣು ಮಗಳು ಧೈರ್ಯ ಮಾಡಿ ದೂರು ಕೊಟ್ಟಿದ್ದಾರೆ. ಹೀಗಾಗಿ, ಮುನಿರತ್ನಗೆ ನಿರೀಕ್ಷಣಾ ಜಾಮೀನು ನೀಡಬಾರದು” ಎಂದು ವಕೀಲರು ಮನವಿ ಮಾಡಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಮುನಿರತ್ನ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ ಹಾರನಹಳ್ಳಿ “ಇದರಲ್ಲಿ ಮುನಿರತ್ನ ಪಾತ್ರವೇ ಇಲ್ಲ. ಇದೆಲ್ಲಾ ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿರುವ ಕಾರ್ಯಾಚರಣೆ. ಇದಕ್ಕೆ ಪತ್ರಿಕಾ ವರದಿಗಳೇ ಸಾಕ್ಷಿ. ಸದ್ಯ ಪಾಲಿಕೆಯಲ್ಲಿ ಕಾರ್ಪೋರೇಟರ್‌ಗಳು ಇಲ್ಲ. ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮುನಿರತ್ನ ವಿರುದ್ಧ ರೂಪಿಸಿರುವ ರಾಜಕೀಯ ಪ್ರೇರಿತ ದೂರಿದು. ಆದ್ದರಿಂದ, ನಿರೀಕ್ಷಣಾ ಜಾಮೀನು ನೀಡಬೇಕು” ಎಂದು ಕೋರಿದ್ದಾರೆ.

ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ. ಮುನಿರತ್ನ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಆದೇಶವನ್ನು ವಿಸ್ತರಿಸಿದ್ದಾರೆ. ಸಿಐಡಿ ಪರ ಪ್ರಾಸಿಕ್ಯೂಟರ್ ಝೈದಾ ಬಾನು ಖಾಜಿ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಮುನಿರತ್ನ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಕೆ

ಮುನಿರತ್ನ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಸೋಂಕು ಹರಡಲು ಯತ್ನಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವರದಿಗಳ ಪ್ರಕಾರ, ಡಿಸೆಂಬರ್ 17, 2024ರಂದು 2,481 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ ಮಾಡಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿ ಆರೋಪಿಗಳಲ್ಲಿ ಶಾಸಕ ಮುನಿರತ್ನ, ಪೊಲೀಸ್ ಇನ್ಸ್‌ಪೆಕ್ಟರ್ ಐಯ್ಯನ ರೆಡ್ಡಿ ಮತ್ತು ಮುನಿರತ್ನ ಅವರ ಇಬ್ಬರು ಸಹಚರರಾದ ಶ್ರೀನಿವಾಸ್ ಪಿ. ಮತ್ತು ಸುಧಾಕರ್ ಆರ್ ವಿರುದ್ಧ ಎಸ್‌ಐಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

ಆರೋಪಿಗಳ ವಿರುದ್ದ ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಕ್ಷನ್ 376 (2)(n), ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಯ ಸೋಂಕನ್ನು ಹರಡಿದ್ದಕ್ಕಾಗಿ ಸೆಕ್ಷನ್‌ 270 ಮತ್ತು ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಭಾಗದ ಚಿತ್ರವನ್ನು ಸೆರೆಹಿಡಿದಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ, ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...