Homeಕರ್ನಾಟಕಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

- Advertisement -
- Advertisement -

ದಲಿತ ಕುಟುಂಬಗಳ ಶೆಡ್‌ಗಳನ್ನು ನಾಶಪಡಿಸಿ, ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಜ.30) ಕಾಯ್ದಿರಿಸಿದೆ.

ಮಾದಿಗ ಸಮುದಾಯದ 20 ವರ್ಷದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮುನಿರತ್ನ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ನಡೆಸಿದ್ದಾರೆ.

ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಹೆಚ್‌ ಹನುಮಂತರಾಯ ಅವರು “ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಚರಿತ್ರೆಯ ತುಂಬಾ ಆಘಾತಕಾರಿ ಅಧ್ಯಾಯಗಳಿವೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿ ಪ್ರದೇಶವನ್ನು ಮುನಿರತ್ನ ಮತ್ತು ಅವರ ಬೆಂಬಲಿಗರು ಬಲವಂತದಿಂದ ತೆರವುಗೊಳಿಸಿ ಪುನರ್ವಸತಿ ಕೇಳಿದವರ ವಿರುದ್ಧ ಅಮಾನವೀಯವಾಗಿ ವರ್ತಿಸಿದ್ದಾರೆ. ಮುನಿರತ್ನ ಎಂಥವರು ಎಂಬುವುದು ಎಲ್ಲರಿಗೂ ಗೊತ್ತಿದೆ. ಅವರು ತಾವೊಬ್ಬ ಸಾಚಾ ಎಂದು ಪ್ರತಿಬಿಂಬಿಸಿಕೊಂಡರೆ ಅದನ್ನೆಲ್ಲಾ ನಂಬಲಾಗದು” ಎಂದಿದ್ದಾರೆ.

“ಮುನಿರತ್ನ ಮತ್ತು ಅವರ ಬೆಂಬಲಿಗರು ಬಡವರನ್ನು, ಹೆಣ್ಣು ಮಕ್ಕಳನ್ನು ಗುಡಿಸಲುಗಳಿಂದ ರಾತ್ರೋರಾತ್ರಿ ಹೊರ ಹಾಕಿದ್ದಾರೆ. ಇಂತಹ ಕುಕೃತ್ಯಗಳನ್ನು ಮುನಿರತ್ನ ಮಾಡಿಕೊಂಡೇ ಬಂದವರು. ತಮ್ಮ ಮೇಲೆ ಆಪಾದನೆಗಳು ಬಂದಾಗಲೆಲ್ಲಾ ಅವುಗಳಿಂದ ಹೊರ ಬರುವುದು ಹೇಗೆ ಎಂಬುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಪ್ರತಿ ಘಟನೆಯಲ್ಲೂ ಹಿಂದಿನ ಅನುಭವಗಳ ಆಧಾರದಲ್ಲಿ ತುಂಬಾ ಹುಷಾರಾಗಿ ವರ್ತಿಸುತ್ತಾರೆ” ಎಂದು ವಕೀಲರು ದೂರಿದ್ದಾರೆ.

“ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯ ಅವಶ್ಯಕತೆಯೇ ಇಲ್ಲ. ಒಕ್ಕಲೆಬ್ಬಿಸಿದವರಿಗೆ ಪೂರ್ವಭಾವಿಯಾಗಿ ನೋಟಿಸ್‌ ನೀಡಿಲ್ಲ. ಸೂಕ್ತ ಪುನರ್ವಸತಿ ಕಲ್ಪಿಸಿಲ್ಲ. ವಾಸ್ತವದಲ್ಲಿ ಇದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿರುವ ಕಾರ್ಯಾಚರಣೆಯೇ ಅಲ್ಲ. ಮುನಿರತ್ನ ಸುತ್ತಮುತ್ತ ಇರುವ ಮಾಜಿ ಕಾರ್ಪೊರೇಟರ್‌ಗಳು ಮತ್ತು ಟಿಕೆಟ್‌ ಆಕಾಂಕ್ಷಿಗಳ ತಂಡದಿಂದ ಮುನಿರತ್ನ ನಡೆಸಿರುವ ದುಷ್ಕತ್ಯವಿದು. ಆದಾಗ್ಯೂ, ಸತ್ಯ ಹೊರಗೆಳೆಯುತ್ತೇನೆ ಎಂದು ಈ ಹೆಣ್ಣು ಮಗಳು ಧೈರ್ಯ ಮಾಡಿ ದೂರು ಕೊಟ್ಟಿದ್ದಾರೆ. ಹೀಗಾಗಿ, ಮುನಿರತ್ನಗೆ ನಿರೀಕ್ಷಣಾ ಜಾಮೀನು ನೀಡಬಾರದು” ಎಂದು ವಕೀಲರು ಮನವಿ ಮಾಡಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಮುನಿರತ್ನ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ ಹಾರನಹಳ್ಳಿ “ಇದರಲ್ಲಿ ಮುನಿರತ್ನ ಪಾತ್ರವೇ ಇಲ್ಲ. ಇದೆಲ್ಲಾ ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿರುವ ಕಾರ್ಯಾಚರಣೆ. ಇದಕ್ಕೆ ಪತ್ರಿಕಾ ವರದಿಗಳೇ ಸಾಕ್ಷಿ. ಸದ್ಯ ಪಾಲಿಕೆಯಲ್ಲಿ ಕಾರ್ಪೋರೇಟರ್‌ಗಳು ಇಲ್ಲ. ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮುನಿರತ್ನ ವಿರುದ್ಧ ರೂಪಿಸಿರುವ ರಾಜಕೀಯ ಪ್ರೇರಿತ ದೂರಿದು. ಆದ್ದರಿಂದ, ನಿರೀಕ್ಷಣಾ ಜಾಮೀನು ನೀಡಬೇಕು” ಎಂದು ಕೋರಿದ್ದಾರೆ.

ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ. ಮುನಿರತ್ನ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಆದೇಶವನ್ನು ವಿಸ್ತರಿಸಿದ್ದಾರೆ. ಸಿಐಡಿ ಪರ ಪ್ರಾಸಿಕ್ಯೂಟರ್ ಝೈದಾ ಬಾನು ಖಾಜಿ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಮುನಿರತ್ನ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಕೆ

ಮುನಿರತ್ನ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಸೋಂಕು ಹರಡಲು ಯತ್ನಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವರದಿಗಳ ಪ್ರಕಾರ, ಡಿಸೆಂಬರ್ 17, 2024ರಂದು 2,481 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ ಮಾಡಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿ ಆರೋಪಿಗಳಲ್ಲಿ ಶಾಸಕ ಮುನಿರತ್ನ, ಪೊಲೀಸ್ ಇನ್ಸ್‌ಪೆಕ್ಟರ್ ಐಯ್ಯನ ರೆಡ್ಡಿ ಮತ್ತು ಮುನಿರತ್ನ ಅವರ ಇಬ್ಬರು ಸಹಚರರಾದ ಶ್ರೀನಿವಾಸ್ ಪಿ. ಮತ್ತು ಸುಧಾಕರ್ ಆರ್ ವಿರುದ್ಧ ಎಸ್‌ಐಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

ಆರೋಪಿಗಳ ವಿರುದ್ದ ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಕ್ಷನ್ 376 (2)(n), ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಯ ಸೋಂಕನ್ನು ಹರಡಿದ್ದಕ್ಕಾಗಿ ಸೆಕ್ಷನ್‌ 270 ಮತ್ತು ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಭಾಗದ ಚಿತ್ರವನ್ನು ಸೆರೆಹಿಡಿದಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ, ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...