Homeಕರ್ನಾಟಕಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

- Advertisement -
- Advertisement -

ದಲಿತ ಕುಟುಂಬಗಳ ಶೆಡ್‌ಗಳನ್ನು ನಾಶಪಡಿಸಿ, ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಜ.30) ಕಾಯ್ದಿರಿಸಿದೆ.

ಮಾದಿಗ ಸಮುದಾಯದ 20 ವರ್ಷದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮುನಿರತ್ನ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ನಡೆಸಿದ್ದಾರೆ.

ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಹೆಚ್‌ ಹನುಮಂತರಾಯ ಅವರು “ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಚರಿತ್ರೆಯ ತುಂಬಾ ಆಘಾತಕಾರಿ ಅಧ್ಯಾಯಗಳಿವೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿ ಪ್ರದೇಶವನ್ನು ಮುನಿರತ್ನ ಮತ್ತು ಅವರ ಬೆಂಬಲಿಗರು ಬಲವಂತದಿಂದ ತೆರವುಗೊಳಿಸಿ ಪುನರ್ವಸತಿ ಕೇಳಿದವರ ವಿರುದ್ಧ ಅಮಾನವೀಯವಾಗಿ ವರ್ತಿಸಿದ್ದಾರೆ. ಮುನಿರತ್ನ ಎಂಥವರು ಎಂಬುವುದು ಎಲ್ಲರಿಗೂ ಗೊತ್ತಿದೆ. ಅವರು ತಾವೊಬ್ಬ ಸಾಚಾ ಎಂದು ಪ್ರತಿಬಿಂಬಿಸಿಕೊಂಡರೆ ಅದನ್ನೆಲ್ಲಾ ನಂಬಲಾಗದು” ಎಂದಿದ್ದಾರೆ.

“ಮುನಿರತ್ನ ಮತ್ತು ಅವರ ಬೆಂಬಲಿಗರು ಬಡವರನ್ನು, ಹೆಣ್ಣು ಮಕ್ಕಳನ್ನು ಗುಡಿಸಲುಗಳಿಂದ ರಾತ್ರೋರಾತ್ರಿ ಹೊರ ಹಾಕಿದ್ದಾರೆ. ಇಂತಹ ಕುಕೃತ್ಯಗಳನ್ನು ಮುನಿರತ್ನ ಮಾಡಿಕೊಂಡೇ ಬಂದವರು. ತಮ್ಮ ಮೇಲೆ ಆಪಾದನೆಗಳು ಬಂದಾಗಲೆಲ್ಲಾ ಅವುಗಳಿಂದ ಹೊರ ಬರುವುದು ಹೇಗೆ ಎಂಬುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಪ್ರತಿ ಘಟನೆಯಲ್ಲೂ ಹಿಂದಿನ ಅನುಭವಗಳ ಆಧಾರದಲ್ಲಿ ತುಂಬಾ ಹುಷಾರಾಗಿ ವರ್ತಿಸುತ್ತಾರೆ” ಎಂದು ವಕೀಲರು ದೂರಿದ್ದಾರೆ.

“ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯ ಅವಶ್ಯಕತೆಯೇ ಇಲ್ಲ. ಒಕ್ಕಲೆಬ್ಬಿಸಿದವರಿಗೆ ಪೂರ್ವಭಾವಿಯಾಗಿ ನೋಟಿಸ್‌ ನೀಡಿಲ್ಲ. ಸೂಕ್ತ ಪುನರ್ವಸತಿ ಕಲ್ಪಿಸಿಲ್ಲ. ವಾಸ್ತವದಲ್ಲಿ ಇದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿರುವ ಕಾರ್ಯಾಚರಣೆಯೇ ಅಲ್ಲ. ಮುನಿರತ್ನ ಸುತ್ತಮುತ್ತ ಇರುವ ಮಾಜಿ ಕಾರ್ಪೊರೇಟರ್‌ಗಳು ಮತ್ತು ಟಿಕೆಟ್‌ ಆಕಾಂಕ್ಷಿಗಳ ತಂಡದಿಂದ ಮುನಿರತ್ನ ನಡೆಸಿರುವ ದುಷ್ಕತ್ಯವಿದು. ಆದಾಗ್ಯೂ, ಸತ್ಯ ಹೊರಗೆಳೆಯುತ್ತೇನೆ ಎಂದು ಈ ಹೆಣ್ಣು ಮಗಳು ಧೈರ್ಯ ಮಾಡಿ ದೂರು ಕೊಟ್ಟಿದ್ದಾರೆ. ಹೀಗಾಗಿ, ಮುನಿರತ್ನಗೆ ನಿರೀಕ್ಷಣಾ ಜಾಮೀನು ನೀಡಬಾರದು” ಎಂದು ವಕೀಲರು ಮನವಿ ಮಾಡಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಮುನಿರತ್ನ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ ಹಾರನಹಳ್ಳಿ “ಇದರಲ್ಲಿ ಮುನಿರತ್ನ ಪಾತ್ರವೇ ಇಲ್ಲ. ಇದೆಲ್ಲಾ ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿರುವ ಕಾರ್ಯಾಚರಣೆ. ಇದಕ್ಕೆ ಪತ್ರಿಕಾ ವರದಿಗಳೇ ಸಾಕ್ಷಿ. ಸದ್ಯ ಪಾಲಿಕೆಯಲ್ಲಿ ಕಾರ್ಪೋರೇಟರ್‌ಗಳು ಇಲ್ಲ. ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮುನಿರತ್ನ ವಿರುದ್ಧ ರೂಪಿಸಿರುವ ರಾಜಕೀಯ ಪ್ರೇರಿತ ದೂರಿದು. ಆದ್ದರಿಂದ, ನಿರೀಕ್ಷಣಾ ಜಾಮೀನು ನೀಡಬೇಕು” ಎಂದು ಕೋರಿದ್ದಾರೆ.

ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ. ಮುನಿರತ್ನ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಆದೇಶವನ್ನು ವಿಸ್ತರಿಸಿದ್ದಾರೆ. ಸಿಐಡಿ ಪರ ಪ್ರಾಸಿಕ್ಯೂಟರ್ ಝೈದಾ ಬಾನು ಖಾಜಿ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಮುನಿರತ್ನ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಕೆ

ಮುನಿರತ್ನ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಸೋಂಕು ಹರಡಲು ಯತ್ನಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವರದಿಗಳ ಪ್ರಕಾರ, ಡಿಸೆಂಬರ್ 17, 2024ರಂದು 2,481 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ ಮಾಡಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿ ಆರೋಪಿಗಳಲ್ಲಿ ಶಾಸಕ ಮುನಿರತ್ನ, ಪೊಲೀಸ್ ಇನ್ಸ್‌ಪೆಕ್ಟರ್ ಐಯ್ಯನ ರೆಡ್ಡಿ ಮತ್ತು ಮುನಿರತ್ನ ಅವರ ಇಬ್ಬರು ಸಹಚರರಾದ ಶ್ರೀನಿವಾಸ್ ಪಿ. ಮತ್ತು ಸುಧಾಕರ್ ಆರ್ ವಿರುದ್ಧ ಎಸ್‌ಐಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

ಆರೋಪಿಗಳ ವಿರುದ್ದ ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಕ್ಷನ್ 376 (2)(n), ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಯ ಸೋಂಕನ್ನು ಹರಡಿದ್ದಕ್ಕಾಗಿ ಸೆಕ್ಷನ್‌ 270 ಮತ್ತು ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಭಾಗದ ಚಿತ್ರವನ್ನು ಸೆರೆಹಿಡಿದಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ, ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...