Homeಕರ್ನಾಟಕಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

- Advertisement -
- Advertisement -

ದಲಿತ ಕುಟುಂಬಗಳ ಶೆಡ್‌ಗಳನ್ನು ನಾಶಪಡಿಸಿ, ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಜ.30) ಕಾಯ್ದಿರಿಸಿದೆ.

ಮಾದಿಗ ಸಮುದಾಯದ 20 ವರ್ಷದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮುನಿರತ್ನ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ನಡೆಸಿದ್ದಾರೆ.

ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಹೆಚ್‌ ಹನುಮಂತರಾಯ ಅವರು “ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಚರಿತ್ರೆಯ ತುಂಬಾ ಆಘಾತಕಾರಿ ಅಧ್ಯಾಯಗಳಿವೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿ ಪ್ರದೇಶವನ್ನು ಮುನಿರತ್ನ ಮತ್ತು ಅವರ ಬೆಂಬಲಿಗರು ಬಲವಂತದಿಂದ ತೆರವುಗೊಳಿಸಿ ಪುನರ್ವಸತಿ ಕೇಳಿದವರ ವಿರುದ್ಧ ಅಮಾನವೀಯವಾಗಿ ವರ್ತಿಸಿದ್ದಾರೆ. ಮುನಿರತ್ನ ಎಂಥವರು ಎಂಬುವುದು ಎಲ್ಲರಿಗೂ ಗೊತ್ತಿದೆ. ಅವರು ತಾವೊಬ್ಬ ಸಾಚಾ ಎಂದು ಪ್ರತಿಬಿಂಬಿಸಿಕೊಂಡರೆ ಅದನ್ನೆಲ್ಲಾ ನಂಬಲಾಗದು” ಎಂದಿದ್ದಾರೆ.

“ಮುನಿರತ್ನ ಮತ್ತು ಅವರ ಬೆಂಬಲಿಗರು ಬಡವರನ್ನು, ಹೆಣ್ಣು ಮಕ್ಕಳನ್ನು ಗುಡಿಸಲುಗಳಿಂದ ರಾತ್ರೋರಾತ್ರಿ ಹೊರ ಹಾಕಿದ್ದಾರೆ. ಇಂತಹ ಕುಕೃತ್ಯಗಳನ್ನು ಮುನಿರತ್ನ ಮಾಡಿಕೊಂಡೇ ಬಂದವರು. ತಮ್ಮ ಮೇಲೆ ಆಪಾದನೆಗಳು ಬಂದಾಗಲೆಲ್ಲಾ ಅವುಗಳಿಂದ ಹೊರ ಬರುವುದು ಹೇಗೆ ಎಂಬುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಪ್ರತಿ ಘಟನೆಯಲ್ಲೂ ಹಿಂದಿನ ಅನುಭವಗಳ ಆಧಾರದಲ್ಲಿ ತುಂಬಾ ಹುಷಾರಾಗಿ ವರ್ತಿಸುತ್ತಾರೆ” ಎಂದು ವಕೀಲರು ದೂರಿದ್ದಾರೆ.

“ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯ ಅವಶ್ಯಕತೆಯೇ ಇಲ್ಲ. ಒಕ್ಕಲೆಬ್ಬಿಸಿದವರಿಗೆ ಪೂರ್ವಭಾವಿಯಾಗಿ ನೋಟಿಸ್‌ ನೀಡಿಲ್ಲ. ಸೂಕ್ತ ಪುನರ್ವಸತಿ ಕಲ್ಪಿಸಿಲ್ಲ. ವಾಸ್ತವದಲ್ಲಿ ಇದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿರುವ ಕಾರ್ಯಾಚರಣೆಯೇ ಅಲ್ಲ. ಮುನಿರತ್ನ ಸುತ್ತಮುತ್ತ ಇರುವ ಮಾಜಿ ಕಾರ್ಪೊರೇಟರ್‌ಗಳು ಮತ್ತು ಟಿಕೆಟ್‌ ಆಕಾಂಕ್ಷಿಗಳ ತಂಡದಿಂದ ಮುನಿರತ್ನ ನಡೆಸಿರುವ ದುಷ್ಕತ್ಯವಿದು. ಆದಾಗ್ಯೂ, ಸತ್ಯ ಹೊರಗೆಳೆಯುತ್ತೇನೆ ಎಂದು ಈ ಹೆಣ್ಣು ಮಗಳು ಧೈರ್ಯ ಮಾಡಿ ದೂರು ಕೊಟ್ಟಿದ್ದಾರೆ. ಹೀಗಾಗಿ, ಮುನಿರತ್ನಗೆ ನಿರೀಕ್ಷಣಾ ಜಾಮೀನು ನೀಡಬಾರದು” ಎಂದು ವಕೀಲರು ಮನವಿ ಮಾಡಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಮುನಿರತ್ನ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ ಹಾರನಹಳ್ಳಿ “ಇದರಲ್ಲಿ ಮುನಿರತ್ನ ಪಾತ್ರವೇ ಇಲ್ಲ. ಇದೆಲ್ಲಾ ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿರುವ ಕಾರ್ಯಾಚರಣೆ. ಇದಕ್ಕೆ ಪತ್ರಿಕಾ ವರದಿಗಳೇ ಸಾಕ್ಷಿ. ಸದ್ಯ ಪಾಲಿಕೆಯಲ್ಲಿ ಕಾರ್ಪೋರೇಟರ್‌ಗಳು ಇಲ್ಲ. ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮುನಿರತ್ನ ವಿರುದ್ಧ ರೂಪಿಸಿರುವ ರಾಜಕೀಯ ಪ್ರೇರಿತ ದೂರಿದು. ಆದ್ದರಿಂದ, ನಿರೀಕ್ಷಣಾ ಜಾಮೀನು ನೀಡಬೇಕು” ಎಂದು ಕೋರಿದ್ದಾರೆ.

ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ. ಮುನಿರತ್ನ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಆದೇಶವನ್ನು ವಿಸ್ತರಿಸಿದ್ದಾರೆ. ಸಿಐಡಿ ಪರ ಪ್ರಾಸಿಕ್ಯೂಟರ್ ಝೈದಾ ಬಾನು ಖಾಜಿ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಮುನಿರತ್ನ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಕೆ

ಮುನಿರತ್ನ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಸೋಂಕು ಹರಡಲು ಯತ್ನಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವರದಿಗಳ ಪ್ರಕಾರ, ಡಿಸೆಂಬರ್ 17, 2024ರಂದು 2,481 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ ಮಾಡಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿ ಆರೋಪಿಗಳಲ್ಲಿ ಶಾಸಕ ಮುನಿರತ್ನ, ಪೊಲೀಸ್ ಇನ್ಸ್‌ಪೆಕ್ಟರ್ ಐಯ್ಯನ ರೆಡ್ಡಿ ಮತ್ತು ಮುನಿರತ್ನ ಅವರ ಇಬ್ಬರು ಸಹಚರರಾದ ಶ್ರೀನಿವಾಸ್ ಪಿ. ಮತ್ತು ಸುಧಾಕರ್ ಆರ್ ವಿರುದ್ಧ ಎಸ್‌ಐಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

ಆರೋಪಿಗಳ ವಿರುದ್ದ ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಕ್ಷನ್ 376 (2)(n), ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಯ ಸೋಂಕನ್ನು ಹರಡಿದ್ದಕ್ಕಾಗಿ ಸೆಕ್ಷನ್‌ 270 ಮತ್ತು ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಭಾಗದ ಚಿತ್ರವನ್ನು ಸೆರೆಹಿಡಿದಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ, ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...