Homeಮುಖಪುಟ'ಆಪರೇಶನ್‌ ಸಿಂಧೂರ' ಕುರಿತು ಪೋಸ್ಟ್:‌ ಅಶೋಕ ವಿವಿ ಪ್ರಾಧ್ಯಾಪಕಗೆ 14 ದಿನಗಳ ನ್ಯಾಯಾಂಗ ಬಂಧನ

‘ಆಪರೇಶನ್‌ ಸಿಂಧೂರ’ ಕುರಿತು ಪೋಸ್ಟ್:‌ ಅಶೋಕ ವಿವಿ ಪ್ರಾಧ್ಯಾಪಕಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

‘ಆಪರೇಷನ್ ಸಿಂಧೂರ’ ಕುರಿತ ಫೇಸ್‌ಬುಕ್ ಪೋಸ್ಟ್‌ಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮುದಾಬಾದ್ ಅವರನ್ನು ಸೋನೆಪತ್ ನ್ಯಾಯಾಲಯ ಮಂಗಳವಾರ (ಮೇ.20) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಲಿ ಖಾನ್ ಅವರನ್ನು ಭಾನುವಾರ ದೆಹಲಿಯಲ್ಲಿ ಬಂಧಿಸಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.

ಇಂದು ಅವರನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಝಾದ್ ಸಿಂಗ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪೊಲೀಸರು ಇನ್ನೂ ಏಳು ದಿನಗಳ ಕಾಲ ಅಲಿ ಖಾನ್ ಅವರನ್ನು ಕಸ್ಟಡಿಗೆ ಕೇಳಿದ್ದರು. ಆದರೆ, ನ್ಯಾಯಾಧೀಶರು ಪೊಲೀಸರ ಮನವಿಯನ್ನು ತಿರಸ್ಕರಿಸಿ, ಖಾನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಅಲಿ ಖಾನ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಈ ವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಅಲಿ ಖಾನ್ ಅವರ ಬಂಧನವು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರ ಕ್ರಮವನ್ನು ‘ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ’ ಎಂದು ಹಲವರು ಬಣ್ಣಿಸಿದ್ದಾರೆ.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ’ ಎಂದು ಹೆಸರಿಡಲಾಗಿತ್ತು.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಅಲಿ ಖಾನ್ ಅವರು “ಆಪರೇಷನ್ ಸಿಂಧೂರ ಮೂಲಕ ಭಾರತವು ಪಾಕಿಸ್ತಾನಕ್ಕೆ ‘ನೀವು ನಿಮ್ಮ ಭಯೋತ್ಪಾದನೆ ಸಮಸ್ಯೆಯನ್ನು ನಿಭಾಯಿಸದಿದ್ದರೆ ನಾವು ಮಾಡುತ್ತೇವೆ!” ಎಂಬ ಸಂದೇಶವನ್ನು ಕಳುಹಿಸಿದೆ” ಎಂದು ಬರೆದುಕೊಂಡಿದ್ದರು.

ಯುದ್ಧವನ್ನು ಕುರುಡಾಗಿ ಪ್ರತಿಪಾದಿಸುವವರನ್ನು ಅವರು ಟೀಕಿಸಿದ್ದರು

ಆಪರೇಷನ್ ಸಿಂಧೂರ ಕುರಿತ ಮಾಧ್ಯಮಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹೊಗಳುವ ಬಲಪಂಥೀಯರು ಗುಂಪು ಹಲ್ಲೆ ಮತ್ತು ಆಸ್ತಿಗಳ ಅನಿಯಂತ್ರಿತ ಧ್ವಂಸಕ್ಕೆ ಬಲಿಯಾದವರ ಪರವಾಗಿ ಮಾತನಾಡುವಂತೆ ಅವರು ಕೇಳಿಕೊಂಡಿದ್ದರು.

ಅಲಿ ಖಾನ್ ಮಹ್ಮುದಾಬಾದ್ ಅವರ ಫೇಸ್‌ಬುಕ್ ಪೋಸ್ಟ್‌  PC: barandbench.com

ಫೇಸ್‌ಬುಕ್ ಪೋಸ್ಟ್‌ ಸಂಬಂಧ ಅಲಿ ಖಾನ್ ಅವರಿಗೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿತ್ತು.

ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ಅವರು, ಅಲಿ ಖಾನ್ ಹೇಳಿಕೆಗಳು ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ಸಿಂಗ್ ಸೇರಿದಂತೆ ಸಮವಸ್ತ್ರದಲ್ಲಿರುವ ಮಹಿಳೆಯರನ್ನು ಅವಹೇಳನ ಮಾಡಿದಂತೆ ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ ವೃತ್ತಿಪರ ಅಧಿಕಾರಿಗಳಾಗಿರುವ ಅವರ ಪಾತ್ರವನ್ನು ದುರ್ಬಲಗೊಳಿಸಿದಂತೆ ಎಂದು ಆರೋಪಿಸಿದ್ದರು.

ತನ್ನ ಪೋಸ್ಟ್‌ ವಿವಾದಕ್ಕೀಡಾದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದ ಅಲಿ ಖಾನ್ ಅವರು, ‘ನನ್ನ ಪೋಸ್ಟ್‌ನಲ್ಲಿ ಸ್ವಲ್ಪವೂ ಸ್ತ್ರೀದ್ವೇಷವಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದ್ದರು.

ಆದಾಗ್ಯೂ, ಭಾಟಿಯಾ ಅವರ ಹೇಳಿಕೆಯು ಅಲಿ ಖಾನ್ ವಿರುದ್ಧ ಎಫ್‌ಐಆರ್ ದಾಖಲಾಗಲು ಕಾರಣವಾಯಿತು. ನಂತರ ಅವರ ಬಂಧನವಾಯಿತು.

ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಪ್ರಧಾನ ಕಾರ್ಯದರ್ಶಿ ಮತ್ತು ಜಥೇರಿ ಗ್ರಾಮದ ಸರಪಂಚ್ ಯೋಗೇಶ್ ಜಥೇರಿ ನೀಡಿದ ದೂರಿನ ಮೇರೆಗೆ ಅಲಿ ಖಾಬ್ ವಿರುದ್ಧ ಎರಡನೇ ಎಫ್‌ಐಆರ್ ದಾಖಲಾಗಿದೆ. ಎರಡನೇ ಪ್ರಕರಣದಲ್ಲಿ ಅಲಿಖಾನ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಪ್ರವಾಸಿ ತಾಣ’ವೆಂದು ಘೋಷಿಸಲು ಕೋರಿ ಪಿಐಎಲ್: ತಿರಸ್ಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...