Homeಮುಖಪುಟತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

ತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

- Advertisement -
- Advertisement -

ಮುಂಬೈ ದಾಳಿಯ (26/11) ಆರೋಪಿ ತಹವ್ವುರ್ ರಾಣಾನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ (ಏ.10) ರಾತ್ರಿ ಭಾರತಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಸ್ಟಡಿಗೆ ನೀಡಿದೆ.

ಗುರುವಾರ ರಾತ್ರಿ ಅಮೆರಿಕದಿಂದ ಬಂದ ರಾಣಾನನ್ನು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು, ಬಳಿಕ ಭಾರೀ ಭದ್ರತೆಯೊಂದಿಗೆ ಪಟಿಯಾಲ ಹೌಸ್‌ನಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ್ದರು.

ವರದಿಗಳ ಪ್ರಕಾರ, ಇಮೇಲ್ ಸಂವಹನದಂತಹ ಪ್ರಮುಖ ಸಾಕ್ಷ್ಯಗಳನ್ನು ಉಲ್ಲೇಖಿಸಿ, ಎನ್‌ಐಎ ಆರಂಭದಲ್ಲಿ ರಾಣಾನನ್ನು 20 ದಿನಗಳ ಕಾಲ ಕಸ್ಟಡಿಗೆ ನಿಡುವಂತೆ ಮನವಿ ಮಾಡಿತ್ತು.

ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ಅರ್ಜಿಯಲ್ಲಿ, ಶಂಕಿತ ಪಿತೂರಿಯ ತನಿಖೆಗೆ ರಾಣಾನ ಕಸ್ಟಡಿ ವಿಚಾರಣೆ ಅತ್ಯಗತ್ಯ ಎಂದು ಎನ್‌ಐಎ ವಾದಿಸಿತ್ತು. ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಿಮಿನಲ್ ಸಂಚಿನಲ್ಲಿ ರಾಣಾ ಇತರರೊಂದಿಗೆ ಸಹಕರಿಸಿದ್ದಾನೆ ಎಂದು ಆರೋಪಿಸಿತ್ತು.

ವಿಚಾರಣೆಯ ಸಮಯದಲ್ಲಿ, ರಾಣಾ ಖಾಸಗಿ ವಕೀಲರನ್ನು ನೇಮಿಸಿಕೊಳ್ಳಲು ಬಯಸುತ್ತಾರಾ? ಇಲ್ಲ ನ್ಯಾಯಾಲಯದಿಂದ ಕಾನೂನು ನೆರವು ಪಡೆಯಲು ಬಯಸುತ್ತಾರಾ? ಎಂದು ನ್ಯಾಯಾಧೀಶರು ಕೇಳಿದ್ದಾರೆ.

ಎನ್‌ಐಎ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ದಯಾನ್ ಕೃಷ್ಣನ್, ಲಭ್ಯವಿರುವ ಸಾಕ್ಷ್ಯಗಳು ಮತ್ತು ಸಂಬಂಧಿತ ವಿಷಯಗಳನ್ನು ಪರಿಶೀಲಿಸಲು ಮತ್ತು ದೃಢೀಕರಿಸಲು ರಾಣಾನನ್ನು ಕಸ್ಟಡಿಗೆ ನೀಡುವುದು ಅಗತ್ಯ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ರಾಣಾ ವಿರುದ್ಧದ ಆರೋಪಗಳನ್ನು ವಿವರಿಸಿ ಮತ್ತು ನ್ಯಾಯಾಧೀಶರ ಪರಿಗಣನೆಗೆ ಸಾಕ್ಷ್ಯಗಳ ಪಟ್ಟಿಯನ್ನು ಮಂಡಿಸಿ, ಎನ್‌ಐಎ ಪರವಾಗಿ ಕೃಷ್ಣನ್ ರಿಮಾಂಡ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸಂಭಾವ್ಯ ಸಮಸ್ಯೆಗಳ ನಿರೀಕ್ಷೆಯಲ್ಲಿ ಹೆಡ್ಲಿ ರಾಣಾಗೆ ತನ್ನ ಆಸ್ತಿ ಮತ್ತು ಸಂಪನ್ಮೂಲಗಳ ವಿವರವಾದ ಪಟ್ಟಿಯನ್ನು ಇಮೇಲ್ ಮಾಡಿದ್ದ ಎಂದು ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದೆ. ಈ ಸಂವಹನವು ಇಲ್ಯಾಸ್ ಕಾಶ್ಮೀರಿ ಮತ್ತು ಅಬ್ದುರ್ ರೆಹಮಾನ್ ಸೇರಿದಂತೆ ಇತರ ಆರೋಪಿಗಳ ಪಾತ್ರಗಳನ್ನು ಬಹಿರಂಗಪಡಿಸಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ರಾಣಾನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮುನ್ನ, ದೆಹಲಿ ಪೊಲೀಸರು ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಮಾಧ್ಯಮ ಪ್ರತಿನಿಧಿಗಳು ಮತ್ತು ಸಾರ್ವಜನಿಕರನ್ನು ನ್ಯಾಯಾಲಯದ ಆವರಣದಿಂದ ಹೊರಗಡೆ ಕಳಿಸಿದ್ದರು.

ಎನ್‌ಐಎ ಮಹಾನಿರ್ದೇಶಕರು, ಇಬ್ಬರು ಇನ್ಸ್‌ಪೆಕ್ಟರ್ ಜನರಲ್‌ಗಳು, ಒಬ್ಬ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಮತ್ತು ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 12 ಅಧಿಕಾರಿಗಳ ಉನ್ನತಾಧಿಕಾರದ ತಂಡ ರಾಣಾನನ್ನು ವಿಚಾರಣೆಗೆ ಒಳಪಡಿಸಲಿದೆ.

ಎನ್‌ಐಎ ಮೂಲಗಳ ಪ್ರಕಾರ, ತನಿಖೆಯಲ್ಲಿ ನೇರವಾಗಿ ಭಾಗಿಯಾಗಿರುವ ಈ 12 ಅಧಿಕಾರಿಗಳಿಗೆ ಮಾತ್ರ ರಾಣಾ ಇರುವ ಸೆಲ್‌ಗೆ ಪ್ರವೇಶ ನೀಡಲಾಗುತ್ತದೆ. ಬೇರೆ ಯಾವುದೇ ಅಧಿಕಾರಿ ಸೆಲ್‌ಗೆ ಹೋರಬೇಕಾದರೆ ಪೂರ್ವಾನುಮತಿ ಬೇಕಾಗುತ್ತದೆ. ಕೋರ್ ತಂಡದಲ್ಲಿರುವವರಲ್ಲಿ ಎನ್‌ಐಎ ಡಿಜಿ ಸದಾನಂದ ದಾತೆ, ಐಜಿ ಆಶಿಶ್ ಬಾತ್ರಾ ಮತ್ತು ಡಿಐಜಿ ಜಯಾ ರಾಯ್ ಸೇರಿದ್ದಾರೆ.

ರಾಣಾಗೆ ರೆಕಾರ್ಡ್ ಮಾಡಿದ ಧ್ವನಿ ಮಾದರಿಗಳು, ಛಾಯಾಚಿತ್ರಗಳು, ವಿಡಿಯೊಗಳು ಮತ್ತು ಇಮೇಲ್ ಟ್ರೇಲ್‌ಗಳು ಸೇರಿದಂತೆ ಹಲವಾರು ವಸ್ತುಗಳನ್ನು ತೋರಿಸಲಾಗುವುದು. ಅವುಗಳಲ್ಲಿ ಕೆಲವು ಪಾಕಿಸ್ತಾನದ ಗುಪ್ತಚರ ಜಾಲ ಮತ್ತು ಭಯೋತ್ಪಾದಕರೊಂದಿಗೆ ಆತನ ಸಂಪರ್ಕವನ್ನು ಖಚಿತಪಡಿಸುವ ನಿರೀಕ್ಷೆಯಿಂದ ಎಂದು ವರದಿಗಳು ಹೇಳಿವೆ.

ರಾಣಾನನ್ನು ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಭಾರತಕ್ಕೆ ಗಡೀಪಾರು ಮಾಡಿಸಿಕೊಂಡು ತರಲಾಗಿದೆ. 16 ವರ್ಷಗಳ ವಿಚಾರಣೆ ನಂತರ ಹಸ್ತಾಂತರ ನಡೆದಿದೆ.

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...