Homeಮುಖಪುಟತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

ತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

- Advertisement -
- Advertisement -

ಮುಂಬೈ ದಾಳಿಯ (26/11) ಆರೋಪಿ ತಹವ್ವುರ್ ರಾಣಾನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ (ಏ.10) ರಾತ್ರಿ ಭಾರತಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಸ್ಟಡಿಗೆ ನೀಡಿದೆ.

ಗುರುವಾರ ರಾತ್ರಿ ಅಮೆರಿಕದಿಂದ ಬಂದ ರಾಣಾನನ್ನು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು, ಬಳಿಕ ಭಾರೀ ಭದ್ರತೆಯೊಂದಿಗೆ ಪಟಿಯಾಲ ಹೌಸ್‌ನಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ್ದರು.

ವರದಿಗಳ ಪ್ರಕಾರ, ಇಮೇಲ್ ಸಂವಹನದಂತಹ ಪ್ರಮುಖ ಸಾಕ್ಷ್ಯಗಳನ್ನು ಉಲ್ಲೇಖಿಸಿ, ಎನ್‌ಐಎ ಆರಂಭದಲ್ಲಿ ರಾಣಾನನ್ನು 20 ದಿನಗಳ ಕಾಲ ಕಸ್ಟಡಿಗೆ ನಿಡುವಂತೆ ಮನವಿ ಮಾಡಿತ್ತು.

ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ಅರ್ಜಿಯಲ್ಲಿ, ಶಂಕಿತ ಪಿತೂರಿಯ ತನಿಖೆಗೆ ರಾಣಾನ ಕಸ್ಟಡಿ ವಿಚಾರಣೆ ಅತ್ಯಗತ್ಯ ಎಂದು ಎನ್‌ಐಎ ವಾದಿಸಿತ್ತು. ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಿಮಿನಲ್ ಸಂಚಿನಲ್ಲಿ ರಾಣಾ ಇತರರೊಂದಿಗೆ ಸಹಕರಿಸಿದ್ದಾನೆ ಎಂದು ಆರೋಪಿಸಿತ್ತು.

ವಿಚಾರಣೆಯ ಸಮಯದಲ್ಲಿ, ರಾಣಾ ಖಾಸಗಿ ವಕೀಲರನ್ನು ನೇಮಿಸಿಕೊಳ್ಳಲು ಬಯಸುತ್ತಾರಾ? ಇಲ್ಲ ನ್ಯಾಯಾಲಯದಿಂದ ಕಾನೂನು ನೆರವು ಪಡೆಯಲು ಬಯಸುತ್ತಾರಾ? ಎಂದು ನ್ಯಾಯಾಧೀಶರು ಕೇಳಿದ್ದಾರೆ.

ಎನ್‌ಐಎ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ದಯಾನ್ ಕೃಷ್ಣನ್, ಲಭ್ಯವಿರುವ ಸಾಕ್ಷ್ಯಗಳು ಮತ್ತು ಸಂಬಂಧಿತ ವಿಷಯಗಳನ್ನು ಪರಿಶೀಲಿಸಲು ಮತ್ತು ದೃಢೀಕರಿಸಲು ರಾಣಾನನ್ನು ಕಸ್ಟಡಿಗೆ ನೀಡುವುದು ಅಗತ್ಯ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ರಾಣಾ ವಿರುದ್ಧದ ಆರೋಪಗಳನ್ನು ವಿವರಿಸಿ ಮತ್ತು ನ್ಯಾಯಾಧೀಶರ ಪರಿಗಣನೆಗೆ ಸಾಕ್ಷ್ಯಗಳ ಪಟ್ಟಿಯನ್ನು ಮಂಡಿಸಿ, ಎನ್‌ಐಎ ಪರವಾಗಿ ಕೃಷ್ಣನ್ ರಿಮಾಂಡ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸಂಭಾವ್ಯ ಸಮಸ್ಯೆಗಳ ನಿರೀಕ್ಷೆಯಲ್ಲಿ ಹೆಡ್ಲಿ ರಾಣಾಗೆ ತನ್ನ ಆಸ್ತಿ ಮತ್ತು ಸಂಪನ್ಮೂಲಗಳ ವಿವರವಾದ ಪಟ್ಟಿಯನ್ನು ಇಮೇಲ್ ಮಾಡಿದ್ದ ಎಂದು ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದೆ. ಈ ಸಂವಹನವು ಇಲ್ಯಾಸ್ ಕಾಶ್ಮೀರಿ ಮತ್ತು ಅಬ್ದುರ್ ರೆಹಮಾನ್ ಸೇರಿದಂತೆ ಇತರ ಆರೋಪಿಗಳ ಪಾತ್ರಗಳನ್ನು ಬಹಿರಂಗಪಡಿಸಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ರಾಣಾನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮುನ್ನ, ದೆಹಲಿ ಪೊಲೀಸರು ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಮಾಧ್ಯಮ ಪ್ರತಿನಿಧಿಗಳು ಮತ್ತು ಸಾರ್ವಜನಿಕರನ್ನು ನ್ಯಾಯಾಲಯದ ಆವರಣದಿಂದ ಹೊರಗಡೆ ಕಳಿಸಿದ್ದರು.

ಎನ್‌ಐಎ ಮಹಾನಿರ್ದೇಶಕರು, ಇಬ್ಬರು ಇನ್ಸ್‌ಪೆಕ್ಟರ್ ಜನರಲ್‌ಗಳು, ಒಬ್ಬ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಮತ್ತು ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 12 ಅಧಿಕಾರಿಗಳ ಉನ್ನತಾಧಿಕಾರದ ತಂಡ ರಾಣಾನನ್ನು ವಿಚಾರಣೆಗೆ ಒಳಪಡಿಸಲಿದೆ.

ಎನ್‌ಐಎ ಮೂಲಗಳ ಪ್ರಕಾರ, ತನಿಖೆಯಲ್ಲಿ ನೇರವಾಗಿ ಭಾಗಿಯಾಗಿರುವ ಈ 12 ಅಧಿಕಾರಿಗಳಿಗೆ ಮಾತ್ರ ರಾಣಾ ಇರುವ ಸೆಲ್‌ಗೆ ಪ್ರವೇಶ ನೀಡಲಾಗುತ್ತದೆ. ಬೇರೆ ಯಾವುದೇ ಅಧಿಕಾರಿ ಸೆಲ್‌ಗೆ ಹೋರಬೇಕಾದರೆ ಪೂರ್ವಾನುಮತಿ ಬೇಕಾಗುತ್ತದೆ. ಕೋರ್ ತಂಡದಲ್ಲಿರುವವರಲ್ಲಿ ಎನ್‌ಐಎ ಡಿಜಿ ಸದಾನಂದ ದಾತೆ, ಐಜಿ ಆಶಿಶ್ ಬಾತ್ರಾ ಮತ್ತು ಡಿಐಜಿ ಜಯಾ ರಾಯ್ ಸೇರಿದ್ದಾರೆ.

ರಾಣಾಗೆ ರೆಕಾರ್ಡ್ ಮಾಡಿದ ಧ್ವನಿ ಮಾದರಿಗಳು, ಛಾಯಾಚಿತ್ರಗಳು, ವಿಡಿಯೊಗಳು ಮತ್ತು ಇಮೇಲ್ ಟ್ರೇಲ್‌ಗಳು ಸೇರಿದಂತೆ ಹಲವಾರು ವಸ್ತುಗಳನ್ನು ತೋರಿಸಲಾಗುವುದು. ಅವುಗಳಲ್ಲಿ ಕೆಲವು ಪಾಕಿಸ್ತಾನದ ಗುಪ್ತಚರ ಜಾಲ ಮತ್ತು ಭಯೋತ್ಪಾದಕರೊಂದಿಗೆ ಆತನ ಸಂಪರ್ಕವನ್ನು ಖಚಿತಪಡಿಸುವ ನಿರೀಕ್ಷೆಯಿಂದ ಎಂದು ವರದಿಗಳು ಹೇಳಿವೆ.

ರಾಣಾನನ್ನು ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಭಾರತಕ್ಕೆ ಗಡೀಪಾರು ಮಾಡಿಸಿಕೊಂಡು ತರಲಾಗಿದೆ. 16 ವರ್ಷಗಳ ವಿಚಾರಣೆ ನಂತರ ಹಸ್ತಾಂತರ ನಡೆದಿದೆ.

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...