Homeಮುಖಪುಟತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

ತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

- Advertisement -
- Advertisement -

ಮುಂಬೈ ದಾಳಿಯ (26/11) ಆರೋಪಿ ತಹವ್ವುರ್ ರಾಣಾನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ (ಏ.10) ರಾತ್ರಿ ಭಾರತಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಸ್ಟಡಿಗೆ ನೀಡಿದೆ.

ಗುರುವಾರ ರಾತ್ರಿ ಅಮೆರಿಕದಿಂದ ಬಂದ ರಾಣಾನನ್ನು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು, ಬಳಿಕ ಭಾರೀ ಭದ್ರತೆಯೊಂದಿಗೆ ಪಟಿಯಾಲ ಹೌಸ್‌ನಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ್ದರು.

ವರದಿಗಳ ಪ್ರಕಾರ, ಇಮೇಲ್ ಸಂವಹನದಂತಹ ಪ್ರಮುಖ ಸಾಕ್ಷ್ಯಗಳನ್ನು ಉಲ್ಲೇಖಿಸಿ, ಎನ್‌ಐಎ ಆರಂಭದಲ್ಲಿ ರಾಣಾನನ್ನು 20 ದಿನಗಳ ಕಾಲ ಕಸ್ಟಡಿಗೆ ನಿಡುವಂತೆ ಮನವಿ ಮಾಡಿತ್ತು.

ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ಅರ್ಜಿಯಲ್ಲಿ, ಶಂಕಿತ ಪಿತೂರಿಯ ತನಿಖೆಗೆ ರಾಣಾನ ಕಸ್ಟಡಿ ವಿಚಾರಣೆ ಅತ್ಯಗತ್ಯ ಎಂದು ಎನ್‌ಐಎ ವಾದಿಸಿತ್ತು. ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಿಮಿನಲ್ ಸಂಚಿನಲ್ಲಿ ರಾಣಾ ಇತರರೊಂದಿಗೆ ಸಹಕರಿಸಿದ್ದಾನೆ ಎಂದು ಆರೋಪಿಸಿತ್ತು.

ವಿಚಾರಣೆಯ ಸಮಯದಲ್ಲಿ, ರಾಣಾ ಖಾಸಗಿ ವಕೀಲರನ್ನು ನೇಮಿಸಿಕೊಳ್ಳಲು ಬಯಸುತ್ತಾರಾ? ಇಲ್ಲ ನ್ಯಾಯಾಲಯದಿಂದ ಕಾನೂನು ನೆರವು ಪಡೆಯಲು ಬಯಸುತ್ತಾರಾ? ಎಂದು ನ್ಯಾಯಾಧೀಶರು ಕೇಳಿದ್ದಾರೆ.

ಎನ್‌ಐಎ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ದಯಾನ್ ಕೃಷ್ಣನ್, ಲಭ್ಯವಿರುವ ಸಾಕ್ಷ್ಯಗಳು ಮತ್ತು ಸಂಬಂಧಿತ ವಿಷಯಗಳನ್ನು ಪರಿಶೀಲಿಸಲು ಮತ್ತು ದೃಢೀಕರಿಸಲು ರಾಣಾನನ್ನು ಕಸ್ಟಡಿಗೆ ನೀಡುವುದು ಅಗತ್ಯ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ರಾಣಾ ವಿರುದ್ಧದ ಆರೋಪಗಳನ್ನು ವಿವರಿಸಿ ಮತ್ತು ನ್ಯಾಯಾಧೀಶರ ಪರಿಗಣನೆಗೆ ಸಾಕ್ಷ್ಯಗಳ ಪಟ್ಟಿಯನ್ನು ಮಂಡಿಸಿ, ಎನ್‌ಐಎ ಪರವಾಗಿ ಕೃಷ್ಣನ್ ರಿಮಾಂಡ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸಂಭಾವ್ಯ ಸಮಸ್ಯೆಗಳ ನಿರೀಕ್ಷೆಯಲ್ಲಿ ಹೆಡ್ಲಿ ರಾಣಾಗೆ ತನ್ನ ಆಸ್ತಿ ಮತ್ತು ಸಂಪನ್ಮೂಲಗಳ ವಿವರವಾದ ಪಟ್ಟಿಯನ್ನು ಇಮೇಲ್ ಮಾಡಿದ್ದ ಎಂದು ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದೆ. ಈ ಸಂವಹನವು ಇಲ್ಯಾಸ್ ಕಾಶ್ಮೀರಿ ಮತ್ತು ಅಬ್ದುರ್ ರೆಹಮಾನ್ ಸೇರಿದಂತೆ ಇತರ ಆರೋಪಿಗಳ ಪಾತ್ರಗಳನ್ನು ಬಹಿರಂಗಪಡಿಸಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ರಾಣಾನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮುನ್ನ, ದೆಹಲಿ ಪೊಲೀಸರು ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಮಾಧ್ಯಮ ಪ್ರತಿನಿಧಿಗಳು ಮತ್ತು ಸಾರ್ವಜನಿಕರನ್ನು ನ್ಯಾಯಾಲಯದ ಆವರಣದಿಂದ ಹೊರಗಡೆ ಕಳಿಸಿದ್ದರು.

ಎನ್‌ಐಎ ಮಹಾನಿರ್ದೇಶಕರು, ಇಬ್ಬರು ಇನ್ಸ್‌ಪೆಕ್ಟರ್ ಜನರಲ್‌ಗಳು, ಒಬ್ಬ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಮತ್ತು ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 12 ಅಧಿಕಾರಿಗಳ ಉನ್ನತಾಧಿಕಾರದ ತಂಡ ರಾಣಾನನ್ನು ವಿಚಾರಣೆಗೆ ಒಳಪಡಿಸಲಿದೆ.

ಎನ್‌ಐಎ ಮೂಲಗಳ ಪ್ರಕಾರ, ತನಿಖೆಯಲ್ಲಿ ನೇರವಾಗಿ ಭಾಗಿಯಾಗಿರುವ ಈ 12 ಅಧಿಕಾರಿಗಳಿಗೆ ಮಾತ್ರ ರಾಣಾ ಇರುವ ಸೆಲ್‌ಗೆ ಪ್ರವೇಶ ನೀಡಲಾಗುತ್ತದೆ. ಬೇರೆ ಯಾವುದೇ ಅಧಿಕಾರಿ ಸೆಲ್‌ಗೆ ಹೋರಬೇಕಾದರೆ ಪೂರ್ವಾನುಮತಿ ಬೇಕಾಗುತ್ತದೆ. ಕೋರ್ ತಂಡದಲ್ಲಿರುವವರಲ್ಲಿ ಎನ್‌ಐಎ ಡಿಜಿ ಸದಾನಂದ ದಾತೆ, ಐಜಿ ಆಶಿಶ್ ಬಾತ್ರಾ ಮತ್ತು ಡಿಐಜಿ ಜಯಾ ರಾಯ್ ಸೇರಿದ್ದಾರೆ.

ರಾಣಾಗೆ ರೆಕಾರ್ಡ್ ಮಾಡಿದ ಧ್ವನಿ ಮಾದರಿಗಳು, ಛಾಯಾಚಿತ್ರಗಳು, ವಿಡಿಯೊಗಳು ಮತ್ತು ಇಮೇಲ್ ಟ್ರೇಲ್‌ಗಳು ಸೇರಿದಂತೆ ಹಲವಾರು ವಸ್ತುಗಳನ್ನು ತೋರಿಸಲಾಗುವುದು. ಅವುಗಳಲ್ಲಿ ಕೆಲವು ಪಾಕಿಸ್ತಾನದ ಗುಪ್ತಚರ ಜಾಲ ಮತ್ತು ಭಯೋತ್ಪಾದಕರೊಂದಿಗೆ ಆತನ ಸಂಪರ್ಕವನ್ನು ಖಚಿತಪಡಿಸುವ ನಿರೀಕ್ಷೆಯಿಂದ ಎಂದು ವರದಿಗಳು ಹೇಳಿವೆ.

ರಾಣಾನನ್ನು ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಭಾರತಕ್ಕೆ ಗಡೀಪಾರು ಮಾಡಿಸಿಕೊಂಡು ತರಲಾಗಿದೆ. 16 ವರ್ಷಗಳ ವಿಚಾರಣೆ ನಂತರ ಹಸ್ತಾಂತರ ನಡೆದಿದೆ.

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...