Homeಕರ್ನಾಟಕಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಟಿಪ್ಪುವಿನ ಚಿತ್ರವನ್ನು ವಿಕಾರಗೊಳಿಸಿದ ಮುಖಪುಟದೊಂದಿಗೆ ಅಯೋಧ್ಯಾ ಪ್ರಕಾಶನ ಪ್ರಕಟಿಸಿರುವ, ರಾಷ್ಟ್ರೋತ್ಥಾನ ಪರಿಷತ್ ಮುದ್ರಿಸಿರುವ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ‘ಟಿಪ್ಪು ನಿಜಕನಸುಗಳು’ ಕೃತಿಯ ಮಾರಾಟಕ್ಕೆ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ನಗರದ 14ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

“ಪುಸ್ತಕದಲ್ಲಿ ಸಂಪೂರ್ಣ ತಪ್ಪು ಮಾಹಿತಿ ನೀಡಲಾಗಿದೆ. ಲೇಖಕರು ದಾಖಲಿಸಿರುವ ಅಂಶಗಳಿಗೆ ಯಾವುದೇ ಪುರಾವೆಗಳಿಲ್ಲ. ತಾನು ಬರೆದಿರುವ ಅಂಶಗಳನ್ನು ಎಲ್ಲಿಂದ ಪಡೆದುಕೊಳ್ಳಲಾಗಿದೆ ಎಂಬುದಕ್ಕೆ ದಾಖಲೆಗಳನ್ನು ಒದಗಿಸಿಲ್ಲ. ಅಝಾನ್ ಅನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದ್ದು, ತುರುಕರು ಎಂಬ ಪದವನ್ನು ಬಳಕೆ ಮಾಡಿದ್ದಾರೆ. ಈ ಪುಸ್ತಕ ಜನರಿಗೆ ತಲುಪಿದಲ್ಲಿ ಸಮಾಜದಲ್ಲಿ ಅಶಾಂತಿ ಉಂಟಾಗಲು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ತಡೆಯಾಜ್ಞೆ ನೀಡಬೇಕು” ಎಂದು ಅರ್ಜಿದಾರ ಪರ ವಕೀಲರು ಕೋರಿದ್ದರು.

ಪುಸ್ತಕ ಮಾರಾಟಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯವು ಪ್ರತಿವಾದಿಗಳಾದ ಲೇಖಕರು, ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕೃತಿಯಲ್ಲಿ ಏನಿದೆ?

“ಟಿಪ್ಪು ಸುಲ್ತಾನ್‌ ತನ್ನ ಜೀವತಾವಧಿಯಲ್ಲಿ ಮತಾಂತರವನ್ನಲ್ಲದೆ ಬೇರೆನನ್ನೂ ಮಾಡಲಿಲ್ಲ. ಇಸ್ಲಾಮಿಕ್ ಸ್ಟೇಟ್‌ ಸ್ಥಾಪಿಸುವುದೇ ಆತನ ಗುರಿಯಾಗಿತ್ತು. ಆತ ಕನ್ನಡ ವಿರೋಧಿಯಾಗಿದ್ದ ಎಂಬಂತೆ ಚಿತ್ರಿಸಲಾಗಿದೆ. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಗುಂಡಿಕ್ಕಿ ಕೊಂದರು” ಎಂಬ ಕಾಲ್ಪನಿಕ ಸಂಗತಿಗಳನ್ನೆಲ್ಲ ಅಡ್ಡಂಡ ಕಾರ್ಯಪ್ಪ ಅವರು ತಮ್ಮ ಕೃತಿಯಲ್ಲಿ ಬರೆದಿದ್ದಾರೆ.

ಟಿಪ್ಪುವನ್ನು ಸೋಲಿಸಲು ಕೊಡವರು, ಮರಾಠರು, ಕೇರಳದ ನಾಯರ್‌ಗಳು, ಹೈದ್ರಾಬಾದ್‌ ನಿಜಾಮರೆಲ್ಲರೂ ಬ್ರಿಟಿಷರಿಗೆ ಬೆಂಬಲ ನೀಡಿದರು. ಇದಕ್ಕೆ ಟಿಪ್ಪುವಿನ ಹಿಂದೂ ವಿರೋಧಿ ನೀತಿಯೇ ಕಾರಣವಾಗಿತ್ತು ಎಂಬಂತೆ ಬರೆಯಲಾಗಿದೆ. ಇದನ್ನೂ ಇತಿಹಾಸತಜ್ಞರು ಅಲ್ಲಗಳೆದಿದ್ದಾರೆ.

ಆ ಕಾಲದಲ್ಲಿ ಎಲ್ಲ ರಾಜರು ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸುತ್ತಿದ್ದರು. ಆದರೂ ಟಿಪ್ಪು ಮಾತ್ರವೇ ಅದನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಕನ್ನಡಕ್ಕೆ ದ್ರೋಹ ಬಗೆದ ಎಂಬಂತೆ ನಿರೂಪಿಸಲಾಗಿದೆ. ಸಹಜವಾಗಿ ಸಾವನ್ನಪ್ಪಿದ ಕೊಡಗು ರಾಜರನ್ನು ಟಿಪ್ಪುವೇ ಕೊಂದನೆಂಬಂತೆ ಚಿತ್ರಿಸಲಾಗಿದೆ ಎಂದು ಇತಿಹಾಸತಜ್ಞರು ಹೇಳುತ್ತಿದ್ದಾರೆ.

ಬ್ರಿಟಿಷರಿಗೆ ಗೂಢಾಚಾರಿಕೆ ಮಾಡಿದ ಅಯ್ಯಂಗಾರಿ ಬ್ರಾಹ್ಮಣರನ್ನು ಕೊಲ್ಲಲಾಯಿತು. ಆದರೆ ಏಕೆ ಕೊಲ್ಲಲಾಯಿತು ಎಂಬುದನ್ನು ಮುಚ್ಚಿಟ್ಟು ಕೃತಿಯನ್ನು ರಚಿಸಲಾಗಿದೆ. ಶೃಂಗೇರಿ ಮಠಕ್ಕೆ ಟಿಪ್ಪು ಬರೆದ ಪತ್ರಗಳ ಕಾಲಘಟ್ಟವನ್ನೇ ತಿರುಚಿ ಉಲ್ಲೇಖಿಸಲಾಗಿದೆ ಎಂಬ ಆರೋಪಗಳು ಬಂದಿವೆ.

ಇದನ್ನೂ ಓದಿರಿ: ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

ದಿವಾನ್‌ ಪೂರ್ಣಯ್ಯ ಕೊನೆಗಳಿಗೆಯಲ್ಲಿ ಹಿಂದೂವಾದಿಯಾಗಿ ಇತಿಹಾಸಕಾರ ಹುಸೇನ್‌ ಆಲಿ ಕೀರ್ಮಾನಿಗೆ ಬೋಧನೆ ಮಾಡಿದ. ದಿವಾನ್ ಪೂರ್ಣಯ್ಯನ ಆಶಯಗಳಿಗೆ ವಿರುದ್ಧವಾಗಿ ಹುಸೇನ್‌ ಆಲಿ ಕೀರ್ಮಾನಿ ಇತಿಹಾಸದಲ್ಲಿ ಸುಳ್ಳುಗಳನ್ನು ದಾಖಲಿಸಿದ. ಅದಕ್ಕೆ ದಿವಾನ್‌ ಪೂರ್ಣಯ್ಯ ತಕರಾರು ತೆಗೆದಿದ್ದರು ಎಂಬಂತೆ ಚಿತ್ರಿಸಲಾಗಿದೆ. ಆದರೆ ಇದಕ್ಕೂ ಪುರಾವೆ ಇಲ್ಲ ಎನ್ನಲಾಗುತ್ತಿದೆ.

ಟಿಪ್ಪು ತನ್ನ ಅಧಿಕಾರವಧಿಯ ಪೂರ್ತಿ ಮತಾಂತರ ಮಾಡುತ್ತಲೇ ಇದ್ದ. ಆತನಿಗೆ ಬೇರೆ ಕೆಲಸ ಇರಲಿಲ್ಲ. ಸಿಂಹಾಸನಕ್ಕೆ ಏರಿದ ಕೂಡಲೇ ಊರಿನ ಹೆಸರುಗಳನ್ನು ಬದಲಿಸಲು ಆಜ್ಞೆ ಮಾಡಿದ. ಹೆದ್ದೆಯ ಹೆಸರುಗಳನ್ನು ಪರ್ಷಿಯನ್‌ ಹೆಸರುಗಳಿಂದ ನಮೂದಿಸಲು ಸೂಚಿಸಿದ. ಹಿಂದೂಗಳಿಗೆ ಹೆದರಿ ದೇವರಾಜಮ್ಮಣ್ಣಿಯವರನ್ನು ಕೊಲ್ಲದೆ ಬಿಟ್ಟ. ಟಿಪ್ಪು ಹತನಾದಾಗ ದೇವರಾಜಮ್ಮಣ್ಣಿ ಖುಷಿಪಟ್ಟರು ಎಂಬಿತ್ಯಾದಿ ಕಪೋಲಕಲ್ಪಿತ ಸಂಗತಿಗಳನ್ನು ಕೃತಿಯೊಳಗೆ ಸೇರಿಸಲಾಗಿದೆ ಎಂದು ಆಕ್ಷೇಪಗಳು ಬಂದಿವೆ.

(ಈ ವಾರದ ‘ನ್ಯಾಯಪಥ’ದಲ್ಲಿ ‘ಟಿಪ್ಪು ನಿಜಕನಸುಗಳು’ ಕೃತಿ ಕುರಿತ ವಿಮರ್ಶೆಗಳನ್ನು ಓದಬಹುದು. ಚಂದಾದಾರರಾಗಲು ಸಂಪರ್ಕಿಸಿ- 98454 35790)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...