Homeಕರ್ನಾಟಕಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಟಿಪ್ಪುವಿನ ಚಿತ್ರವನ್ನು ವಿಕಾರಗೊಳಿಸಿದ ಮುಖಪುಟದೊಂದಿಗೆ ಅಯೋಧ್ಯಾ ಪ್ರಕಾಶನ ಪ್ರಕಟಿಸಿರುವ, ರಾಷ್ಟ್ರೋತ್ಥಾನ ಪರಿಷತ್ ಮುದ್ರಿಸಿರುವ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ‘ಟಿಪ್ಪು ನಿಜಕನಸುಗಳು’ ಕೃತಿಯ ಮಾರಾಟಕ್ಕೆ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ನಗರದ 14ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

“ಪುಸ್ತಕದಲ್ಲಿ ಸಂಪೂರ್ಣ ತಪ್ಪು ಮಾಹಿತಿ ನೀಡಲಾಗಿದೆ. ಲೇಖಕರು ದಾಖಲಿಸಿರುವ ಅಂಶಗಳಿಗೆ ಯಾವುದೇ ಪುರಾವೆಗಳಿಲ್ಲ. ತಾನು ಬರೆದಿರುವ ಅಂಶಗಳನ್ನು ಎಲ್ಲಿಂದ ಪಡೆದುಕೊಳ್ಳಲಾಗಿದೆ ಎಂಬುದಕ್ಕೆ ದಾಖಲೆಗಳನ್ನು ಒದಗಿಸಿಲ್ಲ. ಅಝಾನ್ ಅನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದ್ದು, ತುರುಕರು ಎಂಬ ಪದವನ್ನು ಬಳಕೆ ಮಾಡಿದ್ದಾರೆ. ಈ ಪುಸ್ತಕ ಜನರಿಗೆ ತಲುಪಿದಲ್ಲಿ ಸಮಾಜದಲ್ಲಿ ಅಶಾಂತಿ ಉಂಟಾಗಲು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ತಡೆಯಾಜ್ಞೆ ನೀಡಬೇಕು” ಎಂದು ಅರ್ಜಿದಾರ ಪರ ವಕೀಲರು ಕೋರಿದ್ದರು.

ಪುಸ್ತಕ ಮಾರಾಟಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯವು ಪ್ರತಿವಾದಿಗಳಾದ ಲೇಖಕರು, ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕೃತಿಯಲ್ಲಿ ಏನಿದೆ?

“ಟಿಪ್ಪು ಸುಲ್ತಾನ್‌ ತನ್ನ ಜೀವತಾವಧಿಯಲ್ಲಿ ಮತಾಂತರವನ್ನಲ್ಲದೆ ಬೇರೆನನ್ನೂ ಮಾಡಲಿಲ್ಲ. ಇಸ್ಲಾಮಿಕ್ ಸ್ಟೇಟ್‌ ಸ್ಥಾಪಿಸುವುದೇ ಆತನ ಗುರಿಯಾಗಿತ್ತು. ಆತ ಕನ್ನಡ ವಿರೋಧಿಯಾಗಿದ್ದ ಎಂಬಂತೆ ಚಿತ್ರಿಸಲಾಗಿದೆ. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಗುಂಡಿಕ್ಕಿ ಕೊಂದರು” ಎಂಬ ಕಾಲ್ಪನಿಕ ಸಂಗತಿಗಳನ್ನೆಲ್ಲ ಅಡ್ಡಂಡ ಕಾರ್ಯಪ್ಪ ಅವರು ತಮ್ಮ ಕೃತಿಯಲ್ಲಿ ಬರೆದಿದ್ದಾರೆ.

ಟಿಪ್ಪುವನ್ನು ಸೋಲಿಸಲು ಕೊಡವರು, ಮರಾಠರು, ಕೇರಳದ ನಾಯರ್‌ಗಳು, ಹೈದ್ರಾಬಾದ್‌ ನಿಜಾಮರೆಲ್ಲರೂ ಬ್ರಿಟಿಷರಿಗೆ ಬೆಂಬಲ ನೀಡಿದರು. ಇದಕ್ಕೆ ಟಿಪ್ಪುವಿನ ಹಿಂದೂ ವಿರೋಧಿ ನೀತಿಯೇ ಕಾರಣವಾಗಿತ್ತು ಎಂಬಂತೆ ಬರೆಯಲಾಗಿದೆ. ಇದನ್ನೂ ಇತಿಹಾಸತಜ್ಞರು ಅಲ್ಲಗಳೆದಿದ್ದಾರೆ.

ಆ ಕಾಲದಲ್ಲಿ ಎಲ್ಲ ರಾಜರು ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸುತ್ತಿದ್ದರು. ಆದರೂ ಟಿಪ್ಪು ಮಾತ್ರವೇ ಅದನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಕನ್ನಡಕ್ಕೆ ದ್ರೋಹ ಬಗೆದ ಎಂಬಂತೆ ನಿರೂಪಿಸಲಾಗಿದೆ. ಸಹಜವಾಗಿ ಸಾವನ್ನಪ್ಪಿದ ಕೊಡಗು ರಾಜರನ್ನು ಟಿಪ್ಪುವೇ ಕೊಂದನೆಂಬಂತೆ ಚಿತ್ರಿಸಲಾಗಿದೆ ಎಂದು ಇತಿಹಾಸತಜ್ಞರು ಹೇಳುತ್ತಿದ್ದಾರೆ.

ಬ್ರಿಟಿಷರಿಗೆ ಗೂಢಾಚಾರಿಕೆ ಮಾಡಿದ ಅಯ್ಯಂಗಾರಿ ಬ್ರಾಹ್ಮಣರನ್ನು ಕೊಲ್ಲಲಾಯಿತು. ಆದರೆ ಏಕೆ ಕೊಲ್ಲಲಾಯಿತು ಎಂಬುದನ್ನು ಮುಚ್ಚಿಟ್ಟು ಕೃತಿಯನ್ನು ರಚಿಸಲಾಗಿದೆ. ಶೃಂಗೇರಿ ಮಠಕ್ಕೆ ಟಿಪ್ಪು ಬರೆದ ಪತ್ರಗಳ ಕಾಲಘಟ್ಟವನ್ನೇ ತಿರುಚಿ ಉಲ್ಲೇಖಿಸಲಾಗಿದೆ ಎಂಬ ಆರೋಪಗಳು ಬಂದಿವೆ.

ಇದನ್ನೂ ಓದಿರಿ: ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

ದಿವಾನ್‌ ಪೂರ್ಣಯ್ಯ ಕೊನೆಗಳಿಗೆಯಲ್ಲಿ ಹಿಂದೂವಾದಿಯಾಗಿ ಇತಿಹಾಸಕಾರ ಹುಸೇನ್‌ ಆಲಿ ಕೀರ್ಮಾನಿಗೆ ಬೋಧನೆ ಮಾಡಿದ. ದಿವಾನ್ ಪೂರ್ಣಯ್ಯನ ಆಶಯಗಳಿಗೆ ವಿರುದ್ಧವಾಗಿ ಹುಸೇನ್‌ ಆಲಿ ಕೀರ್ಮಾನಿ ಇತಿಹಾಸದಲ್ಲಿ ಸುಳ್ಳುಗಳನ್ನು ದಾಖಲಿಸಿದ. ಅದಕ್ಕೆ ದಿವಾನ್‌ ಪೂರ್ಣಯ್ಯ ತಕರಾರು ತೆಗೆದಿದ್ದರು ಎಂಬಂತೆ ಚಿತ್ರಿಸಲಾಗಿದೆ. ಆದರೆ ಇದಕ್ಕೂ ಪುರಾವೆ ಇಲ್ಲ ಎನ್ನಲಾಗುತ್ತಿದೆ.

ಟಿಪ್ಪು ತನ್ನ ಅಧಿಕಾರವಧಿಯ ಪೂರ್ತಿ ಮತಾಂತರ ಮಾಡುತ್ತಲೇ ಇದ್ದ. ಆತನಿಗೆ ಬೇರೆ ಕೆಲಸ ಇರಲಿಲ್ಲ. ಸಿಂಹಾಸನಕ್ಕೆ ಏರಿದ ಕೂಡಲೇ ಊರಿನ ಹೆಸರುಗಳನ್ನು ಬದಲಿಸಲು ಆಜ್ಞೆ ಮಾಡಿದ. ಹೆದ್ದೆಯ ಹೆಸರುಗಳನ್ನು ಪರ್ಷಿಯನ್‌ ಹೆಸರುಗಳಿಂದ ನಮೂದಿಸಲು ಸೂಚಿಸಿದ. ಹಿಂದೂಗಳಿಗೆ ಹೆದರಿ ದೇವರಾಜಮ್ಮಣ್ಣಿಯವರನ್ನು ಕೊಲ್ಲದೆ ಬಿಟ್ಟ. ಟಿಪ್ಪು ಹತನಾದಾಗ ದೇವರಾಜಮ್ಮಣ್ಣಿ ಖುಷಿಪಟ್ಟರು ಎಂಬಿತ್ಯಾದಿ ಕಪೋಲಕಲ್ಪಿತ ಸಂಗತಿಗಳನ್ನು ಕೃತಿಯೊಳಗೆ ಸೇರಿಸಲಾಗಿದೆ ಎಂದು ಆಕ್ಷೇಪಗಳು ಬಂದಿವೆ.

(ಈ ವಾರದ ‘ನ್ಯಾಯಪಥ’ದಲ್ಲಿ ‘ಟಿಪ್ಪು ನಿಜಕನಸುಗಳು’ ಕೃತಿ ಕುರಿತ ವಿಮರ್ಶೆಗಳನ್ನು ಓದಬಹುದು. ಚಂದಾದಾರರಾಗಲು ಸಂಪರ್ಕಿಸಿ- 98454 35790)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...