Homeಕರ್ನಾಟಕಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಟಿಪ್ಪುವಿನ ಚಿತ್ರವನ್ನು ವಿಕಾರಗೊಳಿಸಿದ ಮುಖಪುಟದೊಂದಿಗೆ ಅಯೋಧ್ಯಾ ಪ್ರಕಾಶನ ಪ್ರಕಟಿಸಿರುವ, ರಾಷ್ಟ್ರೋತ್ಥಾನ ಪರಿಷತ್ ಮುದ್ರಿಸಿರುವ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ‘ಟಿಪ್ಪು ನಿಜಕನಸುಗಳು’ ಕೃತಿಯ ಮಾರಾಟಕ್ಕೆ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ನಗರದ 14ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

“ಪುಸ್ತಕದಲ್ಲಿ ಸಂಪೂರ್ಣ ತಪ್ಪು ಮಾಹಿತಿ ನೀಡಲಾಗಿದೆ. ಲೇಖಕರು ದಾಖಲಿಸಿರುವ ಅಂಶಗಳಿಗೆ ಯಾವುದೇ ಪುರಾವೆಗಳಿಲ್ಲ. ತಾನು ಬರೆದಿರುವ ಅಂಶಗಳನ್ನು ಎಲ್ಲಿಂದ ಪಡೆದುಕೊಳ್ಳಲಾಗಿದೆ ಎಂಬುದಕ್ಕೆ ದಾಖಲೆಗಳನ್ನು ಒದಗಿಸಿಲ್ಲ. ಅಝಾನ್ ಅನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದ್ದು, ತುರುಕರು ಎಂಬ ಪದವನ್ನು ಬಳಕೆ ಮಾಡಿದ್ದಾರೆ. ಈ ಪುಸ್ತಕ ಜನರಿಗೆ ತಲುಪಿದಲ್ಲಿ ಸಮಾಜದಲ್ಲಿ ಅಶಾಂತಿ ಉಂಟಾಗಲು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ತಡೆಯಾಜ್ಞೆ ನೀಡಬೇಕು” ಎಂದು ಅರ್ಜಿದಾರ ಪರ ವಕೀಲರು ಕೋರಿದ್ದರು.

ಪುಸ್ತಕ ಮಾರಾಟಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯವು ಪ್ರತಿವಾದಿಗಳಾದ ಲೇಖಕರು, ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕೃತಿಯಲ್ಲಿ ಏನಿದೆ?

“ಟಿಪ್ಪು ಸುಲ್ತಾನ್‌ ತನ್ನ ಜೀವತಾವಧಿಯಲ್ಲಿ ಮತಾಂತರವನ್ನಲ್ಲದೆ ಬೇರೆನನ್ನೂ ಮಾಡಲಿಲ್ಲ. ಇಸ್ಲಾಮಿಕ್ ಸ್ಟೇಟ್‌ ಸ್ಥಾಪಿಸುವುದೇ ಆತನ ಗುರಿಯಾಗಿತ್ತು. ಆತ ಕನ್ನಡ ವಿರೋಧಿಯಾಗಿದ್ದ ಎಂಬಂತೆ ಚಿತ್ರಿಸಲಾಗಿದೆ. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಗುಂಡಿಕ್ಕಿ ಕೊಂದರು” ಎಂಬ ಕಾಲ್ಪನಿಕ ಸಂಗತಿಗಳನ್ನೆಲ್ಲ ಅಡ್ಡಂಡ ಕಾರ್ಯಪ್ಪ ಅವರು ತಮ್ಮ ಕೃತಿಯಲ್ಲಿ ಬರೆದಿದ್ದಾರೆ.

ಟಿಪ್ಪುವನ್ನು ಸೋಲಿಸಲು ಕೊಡವರು, ಮರಾಠರು, ಕೇರಳದ ನಾಯರ್‌ಗಳು, ಹೈದ್ರಾಬಾದ್‌ ನಿಜಾಮರೆಲ್ಲರೂ ಬ್ರಿಟಿಷರಿಗೆ ಬೆಂಬಲ ನೀಡಿದರು. ಇದಕ್ಕೆ ಟಿಪ್ಪುವಿನ ಹಿಂದೂ ವಿರೋಧಿ ನೀತಿಯೇ ಕಾರಣವಾಗಿತ್ತು ಎಂಬಂತೆ ಬರೆಯಲಾಗಿದೆ. ಇದನ್ನೂ ಇತಿಹಾಸತಜ್ಞರು ಅಲ್ಲಗಳೆದಿದ್ದಾರೆ.

ಆ ಕಾಲದಲ್ಲಿ ಎಲ್ಲ ರಾಜರು ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸುತ್ತಿದ್ದರು. ಆದರೂ ಟಿಪ್ಪು ಮಾತ್ರವೇ ಅದನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಕನ್ನಡಕ್ಕೆ ದ್ರೋಹ ಬಗೆದ ಎಂಬಂತೆ ನಿರೂಪಿಸಲಾಗಿದೆ. ಸಹಜವಾಗಿ ಸಾವನ್ನಪ್ಪಿದ ಕೊಡಗು ರಾಜರನ್ನು ಟಿಪ್ಪುವೇ ಕೊಂದನೆಂಬಂತೆ ಚಿತ್ರಿಸಲಾಗಿದೆ ಎಂದು ಇತಿಹಾಸತಜ್ಞರು ಹೇಳುತ್ತಿದ್ದಾರೆ.

ಬ್ರಿಟಿಷರಿಗೆ ಗೂಢಾಚಾರಿಕೆ ಮಾಡಿದ ಅಯ್ಯಂಗಾರಿ ಬ್ರಾಹ್ಮಣರನ್ನು ಕೊಲ್ಲಲಾಯಿತು. ಆದರೆ ಏಕೆ ಕೊಲ್ಲಲಾಯಿತು ಎಂಬುದನ್ನು ಮುಚ್ಚಿಟ್ಟು ಕೃತಿಯನ್ನು ರಚಿಸಲಾಗಿದೆ. ಶೃಂಗೇರಿ ಮಠಕ್ಕೆ ಟಿಪ್ಪು ಬರೆದ ಪತ್ರಗಳ ಕಾಲಘಟ್ಟವನ್ನೇ ತಿರುಚಿ ಉಲ್ಲೇಖಿಸಲಾಗಿದೆ ಎಂಬ ಆರೋಪಗಳು ಬಂದಿವೆ.

ಇದನ್ನೂ ಓದಿರಿ: ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

ದಿವಾನ್‌ ಪೂರ್ಣಯ್ಯ ಕೊನೆಗಳಿಗೆಯಲ್ಲಿ ಹಿಂದೂವಾದಿಯಾಗಿ ಇತಿಹಾಸಕಾರ ಹುಸೇನ್‌ ಆಲಿ ಕೀರ್ಮಾನಿಗೆ ಬೋಧನೆ ಮಾಡಿದ. ದಿವಾನ್ ಪೂರ್ಣಯ್ಯನ ಆಶಯಗಳಿಗೆ ವಿರುದ್ಧವಾಗಿ ಹುಸೇನ್‌ ಆಲಿ ಕೀರ್ಮಾನಿ ಇತಿಹಾಸದಲ್ಲಿ ಸುಳ್ಳುಗಳನ್ನು ದಾಖಲಿಸಿದ. ಅದಕ್ಕೆ ದಿವಾನ್‌ ಪೂರ್ಣಯ್ಯ ತಕರಾರು ತೆಗೆದಿದ್ದರು ಎಂಬಂತೆ ಚಿತ್ರಿಸಲಾಗಿದೆ. ಆದರೆ ಇದಕ್ಕೂ ಪುರಾವೆ ಇಲ್ಲ ಎನ್ನಲಾಗುತ್ತಿದೆ.

ಟಿಪ್ಪು ತನ್ನ ಅಧಿಕಾರವಧಿಯ ಪೂರ್ತಿ ಮತಾಂತರ ಮಾಡುತ್ತಲೇ ಇದ್ದ. ಆತನಿಗೆ ಬೇರೆ ಕೆಲಸ ಇರಲಿಲ್ಲ. ಸಿಂಹಾಸನಕ್ಕೆ ಏರಿದ ಕೂಡಲೇ ಊರಿನ ಹೆಸರುಗಳನ್ನು ಬದಲಿಸಲು ಆಜ್ಞೆ ಮಾಡಿದ. ಹೆದ್ದೆಯ ಹೆಸರುಗಳನ್ನು ಪರ್ಷಿಯನ್‌ ಹೆಸರುಗಳಿಂದ ನಮೂದಿಸಲು ಸೂಚಿಸಿದ. ಹಿಂದೂಗಳಿಗೆ ಹೆದರಿ ದೇವರಾಜಮ್ಮಣ್ಣಿಯವರನ್ನು ಕೊಲ್ಲದೆ ಬಿಟ್ಟ. ಟಿಪ್ಪು ಹತನಾದಾಗ ದೇವರಾಜಮ್ಮಣ್ಣಿ ಖುಷಿಪಟ್ಟರು ಎಂಬಿತ್ಯಾದಿ ಕಪೋಲಕಲ್ಪಿತ ಸಂಗತಿಗಳನ್ನು ಕೃತಿಯೊಳಗೆ ಸೇರಿಸಲಾಗಿದೆ ಎಂದು ಆಕ್ಷೇಪಗಳು ಬಂದಿವೆ.

(ಈ ವಾರದ ‘ನ್ಯಾಯಪಥ’ದಲ್ಲಿ ‘ಟಿಪ್ಪು ನಿಜಕನಸುಗಳು’ ಕೃತಿ ಕುರಿತ ವಿಮರ್ಶೆಗಳನ್ನು ಓದಬಹುದು. ಚಂದಾದಾರರಾಗಲು ಸಂಪರ್ಕಿಸಿ- 98454 35790)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...