Homeಕರ್ನಾಟಕಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಟಿಪ್ಪುವಿನ ಚಿತ್ರವನ್ನು ವಿಕಾರಗೊಳಿಸಿದ ಮುಖಪುಟದೊಂದಿಗೆ ಅಯೋಧ್ಯಾ ಪ್ರಕಾಶನ ಪ್ರಕಟಿಸಿರುವ, ರಾಷ್ಟ್ರೋತ್ಥಾನ ಪರಿಷತ್ ಮುದ್ರಿಸಿರುವ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ‘ಟಿಪ್ಪು ನಿಜಕನಸುಗಳು’ ಕೃತಿಯ ಮಾರಾಟಕ್ಕೆ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ನಗರದ 14ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

“ಪುಸ್ತಕದಲ್ಲಿ ಸಂಪೂರ್ಣ ತಪ್ಪು ಮಾಹಿತಿ ನೀಡಲಾಗಿದೆ. ಲೇಖಕರು ದಾಖಲಿಸಿರುವ ಅಂಶಗಳಿಗೆ ಯಾವುದೇ ಪುರಾವೆಗಳಿಲ್ಲ. ತಾನು ಬರೆದಿರುವ ಅಂಶಗಳನ್ನು ಎಲ್ಲಿಂದ ಪಡೆದುಕೊಳ್ಳಲಾಗಿದೆ ಎಂಬುದಕ್ಕೆ ದಾಖಲೆಗಳನ್ನು ಒದಗಿಸಿಲ್ಲ. ಅಝಾನ್ ಅನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದ್ದು, ತುರುಕರು ಎಂಬ ಪದವನ್ನು ಬಳಕೆ ಮಾಡಿದ್ದಾರೆ. ಈ ಪುಸ್ತಕ ಜನರಿಗೆ ತಲುಪಿದಲ್ಲಿ ಸಮಾಜದಲ್ಲಿ ಅಶಾಂತಿ ಉಂಟಾಗಲು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ತಡೆಯಾಜ್ಞೆ ನೀಡಬೇಕು” ಎಂದು ಅರ್ಜಿದಾರ ಪರ ವಕೀಲರು ಕೋರಿದ್ದರು.

ಪುಸ್ತಕ ಮಾರಾಟಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯವು ಪ್ರತಿವಾದಿಗಳಾದ ಲೇಖಕರು, ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕೃತಿಯಲ್ಲಿ ಏನಿದೆ?

“ಟಿಪ್ಪು ಸುಲ್ತಾನ್‌ ತನ್ನ ಜೀವತಾವಧಿಯಲ್ಲಿ ಮತಾಂತರವನ್ನಲ್ಲದೆ ಬೇರೆನನ್ನೂ ಮಾಡಲಿಲ್ಲ. ಇಸ್ಲಾಮಿಕ್ ಸ್ಟೇಟ್‌ ಸ್ಥಾಪಿಸುವುದೇ ಆತನ ಗುರಿಯಾಗಿತ್ತು. ಆತ ಕನ್ನಡ ವಿರೋಧಿಯಾಗಿದ್ದ ಎಂಬಂತೆ ಚಿತ್ರಿಸಲಾಗಿದೆ. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಗುಂಡಿಕ್ಕಿ ಕೊಂದರು” ಎಂಬ ಕಾಲ್ಪನಿಕ ಸಂಗತಿಗಳನ್ನೆಲ್ಲ ಅಡ್ಡಂಡ ಕಾರ್ಯಪ್ಪ ಅವರು ತಮ್ಮ ಕೃತಿಯಲ್ಲಿ ಬರೆದಿದ್ದಾರೆ.

ಟಿಪ್ಪುವನ್ನು ಸೋಲಿಸಲು ಕೊಡವರು, ಮರಾಠರು, ಕೇರಳದ ನಾಯರ್‌ಗಳು, ಹೈದ್ರಾಬಾದ್‌ ನಿಜಾಮರೆಲ್ಲರೂ ಬ್ರಿಟಿಷರಿಗೆ ಬೆಂಬಲ ನೀಡಿದರು. ಇದಕ್ಕೆ ಟಿಪ್ಪುವಿನ ಹಿಂದೂ ವಿರೋಧಿ ನೀತಿಯೇ ಕಾರಣವಾಗಿತ್ತು ಎಂಬಂತೆ ಬರೆಯಲಾಗಿದೆ. ಇದನ್ನೂ ಇತಿಹಾಸತಜ್ಞರು ಅಲ್ಲಗಳೆದಿದ್ದಾರೆ.

ಆ ಕಾಲದಲ್ಲಿ ಎಲ್ಲ ರಾಜರು ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸುತ್ತಿದ್ದರು. ಆದರೂ ಟಿಪ್ಪು ಮಾತ್ರವೇ ಅದನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಕನ್ನಡಕ್ಕೆ ದ್ರೋಹ ಬಗೆದ ಎಂಬಂತೆ ನಿರೂಪಿಸಲಾಗಿದೆ. ಸಹಜವಾಗಿ ಸಾವನ್ನಪ್ಪಿದ ಕೊಡಗು ರಾಜರನ್ನು ಟಿಪ್ಪುವೇ ಕೊಂದನೆಂಬಂತೆ ಚಿತ್ರಿಸಲಾಗಿದೆ ಎಂದು ಇತಿಹಾಸತಜ್ಞರು ಹೇಳುತ್ತಿದ್ದಾರೆ.

ಬ್ರಿಟಿಷರಿಗೆ ಗೂಢಾಚಾರಿಕೆ ಮಾಡಿದ ಅಯ್ಯಂಗಾರಿ ಬ್ರಾಹ್ಮಣರನ್ನು ಕೊಲ್ಲಲಾಯಿತು. ಆದರೆ ಏಕೆ ಕೊಲ್ಲಲಾಯಿತು ಎಂಬುದನ್ನು ಮುಚ್ಚಿಟ್ಟು ಕೃತಿಯನ್ನು ರಚಿಸಲಾಗಿದೆ. ಶೃಂಗೇರಿ ಮಠಕ್ಕೆ ಟಿಪ್ಪು ಬರೆದ ಪತ್ರಗಳ ಕಾಲಘಟ್ಟವನ್ನೇ ತಿರುಚಿ ಉಲ್ಲೇಖಿಸಲಾಗಿದೆ ಎಂಬ ಆರೋಪಗಳು ಬಂದಿವೆ.

ಇದನ್ನೂ ಓದಿರಿ: ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

ದಿವಾನ್‌ ಪೂರ್ಣಯ್ಯ ಕೊನೆಗಳಿಗೆಯಲ್ಲಿ ಹಿಂದೂವಾದಿಯಾಗಿ ಇತಿಹಾಸಕಾರ ಹುಸೇನ್‌ ಆಲಿ ಕೀರ್ಮಾನಿಗೆ ಬೋಧನೆ ಮಾಡಿದ. ದಿವಾನ್ ಪೂರ್ಣಯ್ಯನ ಆಶಯಗಳಿಗೆ ವಿರುದ್ಧವಾಗಿ ಹುಸೇನ್‌ ಆಲಿ ಕೀರ್ಮಾನಿ ಇತಿಹಾಸದಲ್ಲಿ ಸುಳ್ಳುಗಳನ್ನು ದಾಖಲಿಸಿದ. ಅದಕ್ಕೆ ದಿವಾನ್‌ ಪೂರ್ಣಯ್ಯ ತಕರಾರು ತೆಗೆದಿದ್ದರು ಎಂಬಂತೆ ಚಿತ್ರಿಸಲಾಗಿದೆ. ಆದರೆ ಇದಕ್ಕೂ ಪುರಾವೆ ಇಲ್ಲ ಎನ್ನಲಾಗುತ್ತಿದೆ.

ಟಿಪ್ಪು ತನ್ನ ಅಧಿಕಾರವಧಿಯ ಪೂರ್ತಿ ಮತಾಂತರ ಮಾಡುತ್ತಲೇ ಇದ್ದ. ಆತನಿಗೆ ಬೇರೆ ಕೆಲಸ ಇರಲಿಲ್ಲ. ಸಿಂಹಾಸನಕ್ಕೆ ಏರಿದ ಕೂಡಲೇ ಊರಿನ ಹೆಸರುಗಳನ್ನು ಬದಲಿಸಲು ಆಜ್ಞೆ ಮಾಡಿದ. ಹೆದ್ದೆಯ ಹೆಸರುಗಳನ್ನು ಪರ್ಷಿಯನ್‌ ಹೆಸರುಗಳಿಂದ ನಮೂದಿಸಲು ಸೂಚಿಸಿದ. ಹಿಂದೂಗಳಿಗೆ ಹೆದರಿ ದೇವರಾಜಮ್ಮಣ್ಣಿಯವರನ್ನು ಕೊಲ್ಲದೆ ಬಿಟ್ಟ. ಟಿಪ್ಪು ಹತನಾದಾಗ ದೇವರಾಜಮ್ಮಣ್ಣಿ ಖುಷಿಪಟ್ಟರು ಎಂಬಿತ್ಯಾದಿ ಕಪೋಲಕಲ್ಪಿತ ಸಂಗತಿಗಳನ್ನು ಕೃತಿಯೊಳಗೆ ಸೇರಿಸಲಾಗಿದೆ ಎಂದು ಆಕ್ಷೇಪಗಳು ಬಂದಿವೆ.

(ಈ ವಾರದ ‘ನ್ಯಾಯಪಥ’ದಲ್ಲಿ ‘ಟಿಪ್ಪು ನಿಜಕನಸುಗಳು’ ಕೃತಿ ಕುರಿತ ವಿಮರ್ಶೆಗಳನ್ನು ಓದಬಹುದು. ಚಂದಾದಾರರಾಗಲು ಸಂಪರ್ಕಿಸಿ- 98454 35790)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...