Homeಕರ್ನಾಟಕಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಟಿಪ್ಪುವಿನ ಚಿತ್ರವನ್ನು ವಿಕಾರಗೊಳಿಸಿದ ಮುಖಪುಟದೊಂದಿಗೆ ಅಯೋಧ್ಯಾ ಪ್ರಕಾಶನ ಪ್ರಕಟಿಸಿರುವ, ರಾಷ್ಟ್ರೋತ್ಥಾನ ಪರಿಷತ್ ಮುದ್ರಿಸಿರುವ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ‘ಟಿಪ್ಪು ನಿಜಕನಸುಗಳು’ ಕೃತಿಯ ಮಾರಾಟಕ್ಕೆ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ನಗರದ 14ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

“ಪುಸ್ತಕದಲ್ಲಿ ಸಂಪೂರ್ಣ ತಪ್ಪು ಮಾಹಿತಿ ನೀಡಲಾಗಿದೆ. ಲೇಖಕರು ದಾಖಲಿಸಿರುವ ಅಂಶಗಳಿಗೆ ಯಾವುದೇ ಪುರಾವೆಗಳಿಲ್ಲ. ತಾನು ಬರೆದಿರುವ ಅಂಶಗಳನ್ನು ಎಲ್ಲಿಂದ ಪಡೆದುಕೊಳ್ಳಲಾಗಿದೆ ಎಂಬುದಕ್ಕೆ ದಾಖಲೆಗಳನ್ನು ಒದಗಿಸಿಲ್ಲ. ಅಝಾನ್ ಅನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದ್ದು, ತುರುಕರು ಎಂಬ ಪದವನ್ನು ಬಳಕೆ ಮಾಡಿದ್ದಾರೆ. ಈ ಪುಸ್ತಕ ಜನರಿಗೆ ತಲುಪಿದಲ್ಲಿ ಸಮಾಜದಲ್ಲಿ ಅಶಾಂತಿ ಉಂಟಾಗಲು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ತಡೆಯಾಜ್ಞೆ ನೀಡಬೇಕು” ಎಂದು ಅರ್ಜಿದಾರ ಪರ ವಕೀಲರು ಕೋರಿದ್ದರು.

ಪುಸ್ತಕ ಮಾರಾಟಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯವು ಪ್ರತಿವಾದಿಗಳಾದ ಲೇಖಕರು, ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕೃತಿಯಲ್ಲಿ ಏನಿದೆ?

“ಟಿಪ್ಪು ಸುಲ್ತಾನ್‌ ತನ್ನ ಜೀವತಾವಧಿಯಲ್ಲಿ ಮತಾಂತರವನ್ನಲ್ಲದೆ ಬೇರೆನನ್ನೂ ಮಾಡಲಿಲ್ಲ. ಇಸ್ಲಾಮಿಕ್ ಸ್ಟೇಟ್‌ ಸ್ಥಾಪಿಸುವುದೇ ಆತನ ಗುರಿಯಾಗಿತ್ತು. ಆತ ಕನ್ನಡ ವಿರೋಧಿಯಾಗಿದ್ದ ಎಂಬಂತೆ ಚಿತ್ರಿಸಲಾಗಿದೆ. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಗುಂಡಿಕ್ಕಿ ಕೊಂದರು” ಎಂಬ ಕಾಲ್ಪನಿಕ ಸಂಗತಿಗಳನ್ನೆಲ್ಲ ಅಡ್ಡಂಡ ಕಾರ್ಯಪ್ಪ ಅವರು ತಮ್ಮ ಕೃತಿಯಲ್ಲಿ ಬರೆದಿದ್ದಾರೆ.

ಟಿಪ್ಪುವನ್ನು ಸೋಲಿಸಲು ಕೊಡವರು, ಮರಾಠರು, ಕೇರಳದ ನಾಯರ್‌ಗಳು, ಹೈದ್ರಾಬಾದ್‌ ನಿಜಾಮರೆಲ್ಲರೂ ಬ್ರಿಟಿಷರಿಗೆ ಬೆಂಬಲ ನೀಡಿದರು. ಇದಕ್ಕೆ ಟಿಪ್ಪುವಿನ ಹಿಂದೂ ವಿರೋಧಿ ನೀತಿಯೇ ಕಾರಣವಾಗಿತ್ತು ಎಂಬಂತೆ ಬರೆಯಲಾಗಿದೆ. ಇದನ್ನೂ ಇತಿಹಾಸತಜ್ಞರು ಅಲ್ಲಗಳೆದಿದ್ದಾರೆ.

ಆ ಕಾಲದಲ್ಲಿ ಎಲ್ಲ ರಾಜರು ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸುತ್ತಿದ್ದರು. ಆದರೂ ಟಿಪ್ಪು ಮಾತ್ರವೇ ಅದನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಕನ್ನಡಕ್ಕೆ ದ್ರೋಹ ಬಗೆದ ಎಂಬಂತೆ ನಿರೂಪಿಸಲಾಗಿದೆ. ಸಹಜವಾಗಿ ಸಾವನ್ನಪ್ಪಿದ ಕೊಡಗು ರಾಜರನ್ನು ಟಿಪ್ಪುವೇ ಕೊಂದನೆಂಬಂತೆ ಚಿತ್ರಿಸಲಾಗಿದೆ ಎಂದು ಇತಿಹಾಸತಜ್ಞರು ಹೇಳುತ್ತಿದ್ದಾರೆ.

ಬ್ರಿಟಿಷರಿಗೆ ಗೂಢಾಚಾರಿಕೆ ಮಾಡಿದ ಅಯ್ಯಂಗಾರಿ ಬ್ರಾಹ್ಮಣರನ್ನು ಕೊಲ್ಲಲಾಯಿತು. ಆದರೆ ಏಕೆ ಕೊಲ್ಲಲಾಯಿತು ಎಂಬುದನ್ನು ಮುಚ್ಚಿಟ್ಟು ಕೃತಿಯನ್ನು ರಚಿಸಲಾಗಿದೆ. ಶೃಂಗೇರಿ ಮಠಕ್ಕೆ ಟಿಪ್ಪು ಬರೆದ ಪತ್ರಗಳ ಕಾಲಘಟ್ಟವನ್ನೇ ತಿರುಚಿ ಉಲ್ಲೇಖಿಸಲಾಗಿದೆ ಎಂಬ ಆರೋಪಗಳು ಬಂದಿವೆ.

ಇದನ್ನೂ ಓದಿರಿ: ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

ದಿವಾನ್‌ ಪೂರ್ಣಯ್ಯ ಕೊನೆಗಳಿಗೆಯಲ್ಲಿ ಹಿಂದೂವಾದಿಯಾಗಿ ಇತಿಹಾಸಕಾರ ಹುಸೇನ್‌ ಆಲಿ ಕೀರ್ಮಾನಿಗೆ ಬೋಧನೆ ಮಾಡಿದ. ದಿವಾನ್ ಪೂರ್ಣಯ್ಯನ ಆಶಯಗಳಿಗೆ ವಿರುದ್ಧವಾಗಿ ಹುಸೇನ್‌ ಆಲಿ ಕೀರ್ಮಾನಿ ಇತಿಹಾಸದಲ್ಲಿ ಸುಳ್ಳುಗಳನ್ನು ದಾಖಲಿಸಿದ. ಅದಕ್ಕೆ ದಿವಾನ್‌ ಪೂರ್ಣಯ್ಯ ತಕರಾರು ತೆಗೆದಿದ್ದರು ಎಂಬಂತೆ ಚಿತ್ರಿಸಲಾಗಿದೆ. ಆದರೆ ಇದಕ್ಕೂ ಪುರಾವೆ ಇಲ್ಲ ಎನ್ನಲಾಗುತ್ತಿದೆ.

ಟಿಪ್ಪು ತನ್ನ ಅಧಿಕಾರವಧಿಯ ಪೂರ್ತಿ ಮತಾಂತರ ಮಾಡುತ್ತಲೇ ಇದ್ದ. ಆತನಿಗೆ ಬೇರೆ ಕೆಲಸ ಇರಲಿಲ್ಲ. ಸಿಂಹಾಸನಕ್ಕೆ ಏರಿದ ಕೂಡಲೇ ಊರಿನ ಹೆಸರುಗಳನ್ನು ಬದಲಿಸಲು ಆಜ್ಞೆ ಮಾಡಿದ. ಹೆದ್ದೆಯ ಹೆಸರುಗಳನ್ನು ಪರ್ಷಿಯನ್‌ ಹೆಸರುಗಳಿಂದ ನಮೂದಿಸಲು ಸೂಚಿಸಿದ. ಹಿಂದೂಗಳಿಗೆ ಹೆದರಿ ದೇವರಾಜಮ್ಮಣ್ಣಿಯವರನ್ನು ಕೊಲ್ಲದೆ ಬಿಟ್ಟ. ಟಿಪ್ಪು ಹತನಾದಾಗ ದೇವರಾಜಮ್ಮಣ್ಣಿ ಖುಷಿಪಟ್ಟರು ಎಂಬಿತ್ಯಾದಿ ಕಪೋಲಕಲ್ಪಿತ ಸಂಗತಿಗಳನ್ನು ಕೃತಿಯೊಳಗೆ ಸೇರಿಸಲಾಗಿದೆ ಎಂದು ಆಕ್ಷೇಪಗಳು ಬಂದಿವೆ.

(ಈ ವಾರದ ‘ನ್ಯಾಯಪಥ’ದಲ್ಲಿ ‘ಟಿಪ್ಪು ನಿಜಕನಸುಗಳು’ ಕೃತಿ ಕುರಿತ ವಿಮರ್ಶೆಗಳನ್ನು ಓದಬಹುದು. ಚಂದಾದಾರರಾಗಲು ಸಂಪರ್ಕಿಸಿ- 98454 35790)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...