Homeಕರ್ನಾಟಕಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಟಿಪ್ಪುವಿನ ಚಿತ್ರವನ್ನು ವಿಕಾರಗೊಳಿಸಿದ ಮುಖಪುಟದೊಂದಿಗೆ ಅಯೋಧ್ಯಾ ಪ್ರಕಾಶನ ಪ್ರಕಟಿಸಿರುವ, ರಾಷ್ಟ್ರೋತ್ಥಾನ ಪರಿಷತ್ ಮುದ್ರಿಸಿರುವ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ‘ಟಿಪ್ಪು ನಿಜಕನಸುಗಳು’ ಕೃತಿಯ ಮಾರಾಟಕ್ಕೆ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ನಗರದ 14ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

“ಪುಸ್ತಕದಲ್ಲಿ ಸಂಪೂರ್ಣ ತಪ್ಪು ಮಾಹಿತಿ ನೀಡಲಾಗಿದೆ. ಲೇಖಕರು ದಾಖಲಿಸಿರುವ ಅಂಶಗಳಿಗೆ ಯಾವುದೇ ಪುರಾವೆಗಳಿಲ್ಲ. ತಾನು ಬರೆದಿರುವ ಅಂಶಗಳನ್ನು ಎಲ್ಲಿಂದ ಪಡೆದುಕೊಳ್ಳಲಾಗಿದೆ ಎಂಬುದಕ್ಕೆ ದಾಖಲೆಗಳನ್ನು ಒದಗಿಸಿಲ್ಲ. ಅಝಾನ್ ಅನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದ್ದು, ತುರುಕರು ಎಂಬ ಪದವನ್ನು ಬಳಕೆ ಮಾಡಿದ್ದಾರೆ. ಈ ಪುಸ್ತಕ ಜನರಿಗೆ ತಲುಪಿದಲ್ಲಿ ಸಮಾಜದಲ್ಲಿ ಅಶಾಂತಿ ಉಂಟಾಗಲು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ತಡೆಯಾಜ್ಞೆ ನೀಡಬೇಕು” ಎಂದು ಅರ್ಜಿದಾರ ಪರ ವಕೀಲರು ಕೋರಿದ್ದರು.

ಪುಸ್ತಕ ಮಾರಾಟಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯವು ಪ್ರತಿವಾದಿಗಳಾದ ಲೇಖಕರು, ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕೃತಿಯಲ್ಲಿ ಏನಿದೆ?

“ಟಿಪ್ಪು ಸುಲ್ತಾನ್‌ ತನ್ನ ಜೀವತಾವಧಿಯಲ್ಲಿ ಮತಾಂತರವನ್ನಲ್ಲದೆ ಬೇರೆನನ್ನೂ ಮಾಡಲಿಲ್ಲ. ಇಸ್ಲಾಮಿಕ್ ಸ್ಟೇಟ್‌ ಸ್ಥಾಪಿಸುವುದೇ ಆತನ ಗುರಿಯಾಗಿತ್ತು. ಆತ ಕನ್ನಡ ವಿರೋಧಿಯಾಗಿದ್ದ ಎಂಬಂತೆ ಚಿತ್ರಿಸಲಾಗಿದೆ. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಗುಂಡಿಕ್ಕಿ ಕೊಂದರು” ಎಂಬ ಕಾಲ್ಪನಿಕ ಸಂಗತಿಗಳನ್ನೆಲ್ಲ ಅಡ್ಡಂಡ ಕಾರ್ಯಪ್ಪ ಅವರು ತಮ್ಮ ಕೃತಿಯಲ್ಲಿ ಬರೆದಿದ್ದಾರೆ.

ಟಿಪ್ಪುವನ್ನು ಸೋಲಿಸಲು ಕೊಡವರು, ಮರಾಠರು, ಕೇರಳದ ನಾಯರ್‌ಗಳು, ಹೈದ್ರಾಬಾದ್‌ ನಿಜಾಮರೆಲ್ಲರೂ ಬ್ರಿಟಿಷರಿಗೆ ಬೆಂಬಲ ನೀಡಿದರು. ಇದಕ್ಕೆ ಟಿಪ್ಪುವಿನ ಹಿಂದೂ ವಿರೋಧಿ ನೀತಿಯೇ ಕಾರಣವಾಗಿತ್ತು ಎಂಬಂತೆ ಬರೆಯಲಾಗಿದೆ. ಇದನ್ನೂ ಇತಿಹಾಸತಜ್ಞರು ಅಲ್ಲಗಳೆದಿದ್ದಾರೆ.

ಆ ಕಾಲದಲ್ಲಿ ಎಲ್ಲ ರಾಜರು ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸುತ್ತಿದ್ದರು. ಆದರೂ ಟಿಪ್ಪು ಮಾತ್ರವೇ ಅದನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಕನ್ನಡಕ್ಕೆ ದ್ರೋಹ ಬಗೆದ ಎಂಬಂತೆ ನಿರೂಪಿಸಲಾಗಿದೆ. ಸಹಜವಾಗಿ ಸಾವನ್ನಪ್ಪಿದ ಕೊಡಗು ರಾಜರನ್ನು ಟಿಪ್ಪುವೇ ಕೊಂದನೆಂಬಂತೆ ಚಿತ್ರಿಸಲಾಗಿದೆ ಎಂದು ಇತಿಹಾಸತಜ್ಞರು ಹೇಳುತ್ತಿದ್ದಾರೆ.

ಬ್ರಿಟಿಷರಿಗೆ ಗೂಢಾಚಾರಿಕೆ ಮಾಡಿದ ಅಯ್ಯಂಗಾರಿ ಬ್ರಾಹ್ಮಣರನ್ನು ಕೊಲ್ಲಲಾಯಿತು. ಆದರೆ ಏಕೆ ಕೊಲ್ಲಲಾಯಿತು ಎಂಬುದನ್ನು ಮುಚ್ಚಿಟ್ಟು ಕೃತಿಯನ್ನು ರಚಿಸಲಾಗಿದೆ. ಶೃಂಗೇರಿ ಮಠಕ್ಕೆ ಟಿಪ್ಪು ಬರೆದ ಪತ್ರಗಳ ಕಾಲಘಟ್ಟವನ್ನೇ ತಿರುಚಿ ಉಲ್ಲೇಖಿಸಲಾಗಿದೆ ಎಂಬ ಆರೋಪಗಳು ಬಂದಿವೆ.

ಇದನ್ನೂ ಓದಿರಿ: ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

ದಿವಾನ್‌ ಪೂರ್ಣಯ್ಯ ಕೊನೆಗಳಿಗೆಯಲ್ಲಿ ಹಿಂದೂವಾದಿಯಾಗಿ ಇತಿಹಾಸಕಾರ ಹುಸೇನ್‌ ಆಲಿ ಕೀರ್ಮಾನಿಗೆ ಬೋಧನೆ ಮಾಡಿದ. ದಿವಾನ್ ಪೂರ್ಣಯ್ಯನ ಆಶಯಗಳಿಗೆ ವಿರುದ್ಧವಾಗಿ ಹುಸೇನ್‌ ಆಲಿ ಕೀರ್ಮಾನಿ ಇತಿಹಾಸದಲ್ಲಿ ಸುಳ್ಳುಗಳನ್ನು ದಾಖಲಿಸಿದ. ಅದಕ್ಕೆ ದಿವಾನ್‌ ಪೂರ್ಣಯ್ಯ ತಕರಾರು ತೆಗೆದಿದ್ದರು ಎಂಬಂತೆ ಚಿತ್ರಿಸಲಾಗಿದೆ. ಆದರೆ ಇದಕ್ಕೂ ಪುರಾವೆ ಇಲ್ಲ ಎನ್ನಲಾಗುತ್ತಿದೆ.

ಟಿಪ್ಪು ತನ್ನ ಅಧಿಕಾರವಧಿಯ ಪೂರ್ತಿ ಮತಾಂತರ ಮಾಡುತ್ತಲೇ ಇದ್ದ. ಆತನಿಗೆ ಬೇರೆ ಕೆಲಸ ಇರಲಿಲ್ಲ. ಸಿಂಹಾಸನಕ್ಕೆ ಏರಿದ ಕೂಡಲೇ ಊರಿನ ಹೆಸರುಗಳನ್ನು ಬದಲಿಸಲು ಆಜ್ಞೆ ಮಾಡಿದ. ಹೆದ್ದೆಯ ಹೆಸರುಗಳನ್ನು ಪರ್ಷಿಯನ್‌ ಹೆಸರುಗಳಿಂದ ನಮೂದಿಸಲು ಸೂಚಿಸಿದ. ಹಿಂದೂಗಳಿಗೆ ಹೆದರಿ ದೇವರಾಜಮ್ಮಣ್ಣಿಯವರನ್ನು ಕೊಲ್ಲದೆ ಬಿಟ್ಟ. ಟಿಪ್ಪು ಹತನಾದಾಗ ದೇವರಾಜಮ್ಮಣ್ಣಿ ಖುಷಿಪಟ್ಟರು ಎಂಬಿತ್ಯಾದಿ ಕಪೋಲಕಲ್ಪಿತ ಸಂಗತಿಗಳನ್ನು ಕೃತಿಯೊಳಗೆ ಸೇರಿಸಲಾಗಿದೆ ಎಂದು ಆಕ್ಷೇಪಗಳು ಬಂದಿವೆ.

(ಈ ವಾರದ ‘ನ್ಯಾಯಪಥ’ದಲ್ಲಿ ‘ಟಿಪ್ಪು ನಿಜಕನಸುಗಳು’ ಕೃತಿ ಕುರಿತ ವಿಮರ್ಶೆಗಳನ್ನು ಓದಬಹುದು. ಚಂದಾದಾರರಾಗಲು ಸಂಪರ್ಕಿಸಿ- 98454 35790)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...