Homeಮುಖಪುಟಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

- Advertisement -
- Advertisement -

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ.

ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರ ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.

ಜಾಮೀನು ಅವಧಿಯಲ್ಲಿ ಸಂತ್ರಸ್ತೆಯ ಮನೆಯ 5 ಕಿಲೋಮೀಟರ್ ವ್ಯಾಪ್ತಿಯೊಳಗೆ ಹೋಗಬಾರದು. ಜಾಮೀನು ರದ್ದಾಗುವವರೆ ದೆಹಲಿಯಲ್ಲೇ ಇರಬೇಕು ಹಾಗೂ ಪ್ರತಿ ಸೋಮವಾರ ಪೊಲೀಸ್ ಠಾಣೆಗೆ ಹಾಜರಾಗಿ ವರದಿ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

“ಯಾವುದೇ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದಾಗುತ್ತದೆ” ಎಂದು ನ್ಯಾಯಾಲಯ ಎಚ್ಚರಿಸಿದೆ.

17 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂ. ದಂಡ ವಿಧಿಸಿ ವಿಚಾರಣಾ ನ್ಯಾಯಾಲ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸೆಂಗಾರ್‌ ಮೇಲ್ಮನವಿ ಸಲ್ಲಿಸಿದ್ದಾರೆ.

ಸೆಂಗಾರ್ 17 ವರ್ಷದ ಬಾಲಕಿಯನ್ನು ಅಪಹರಿಸಿ 2017ರ ಜೂನ್ 11ರಿಂದ 20 ನಡುವೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಆಕೆಯನ್ನು 60 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದ. ಕೊನೆಗೆ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದರು.

ಈ ನಡುವೆ ಸೆಂಗಾರ್‌ನ ಅನತಿಯಂತೆ ಪೊಲೀಸರು ಬಾಲಕಿಗೆ ನಿರಂತರ ಬೆದರಿಕೆ ಹಾಕಿದ್ದರು. ದೌರ್ಜನ್ಯದ ವಿರುದ್ದ ಮಾತನಾಡದಂತೆ ಬಾಯಿ ಮುಚ್ಚಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಅಂತಿಮವಾಗಿ ಅಲಹಾಬಾದ್ ಹೈಕೋರ್ಟ್‌ನ ಆದೇಶದ ಬಳಿಕ ಪೊಲೀಸರು ಸೆಂಗಾರ್ ವಿರುದ್ದ ಅಪಹರಣ, ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಆಗಸ್ಟ್ 2019ರಲ್ಲಿ, ಘಟನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೆಹಲಿಗೆ ವರ್ಗಾಯಿಸಿ, ದಿನನಿತ್ಯದ ವಿಚಾರಣೆ ನಡೆಸಿ 45 ದಿನಗಳಲ್ಲಿ ಪೂರ್ಣಗೊಳಿಸಬೇಕೆಂದು ಆದೇಶಿಸಿತ್ತು.

ಡಿಸೆಂಬರ್ 2019ರಲ್ಲಿ, ವಿಚಾರಣಾ ನ್ಯಾಯಾಲಯವು ಸೆಂಗಾರ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತು. ಅಲ್ಲದೆ, ಕುಟುಂಬ ಬಯಸಿದರೆ ಸುರಕ್ಷಿತ ಮನೆ ಮತ್ತು ಗುರುತಿನ ಬದಲಾವಣೆಯ ಮೂಲಕ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಜೀವನ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಲು ಸಿಬಿಐ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯವು ನಿರ್ದೇಶಿಸಿತು.

ಸೆಂಗಾರ್‌ಗೆ ಗರಿಷ್ಠ ಶಿಕ್ಷೆ ವಿಧಿಸುವಾಗ, ವಿಚಾರಣಾ ನ್ಯಾಯಾಲಯವು ಆತನಿಗೆ ಶಿಕ್ಷೆ ಕಡಿತಗೊಳಿಸುವ ಯಾವುದೇ ಅಗತ್ಯತೆ ಇಲ್ಲ ಎಂದಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಸೇವಕನಾಗಿದ್ದ ಸೆಂಗಾರ್ ಜನರ ನಂಬಿಕೆಗೆ ದ್ರೋಹ ಎಸಗಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು.

ನ್ಯಾಯಾಲಯ ಸೆಂಗಾರ್‌ಗೆ ಶಿಕ್ಷೆ ವಿಧಿಸುವ ಮುನ್ನ, ನಂಬರ್ ಪ್ಲೇಟ್ ಇಲ್ಲದ ಲಾರಿಯೊಂದು ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಸಂತ್ರಸ್ತೆ ಮತ್ತು ಆಕೆಯ ವಕೀಲರು ಗಂಭೀರವಾಗಿ ಗಾಯಗೊಂಡಿದ್ದರು. ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನ್ನಪ್ಪಿದ್ದರು.

ಈ ಸಂಬಂಧ ಸೆಂಗಾರ್ ವಿರುದ್ದ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಆದರೆ, ಡಿಸೆಂಬರ್ 2021ರಲ್ಲಿ, ಅಪಘಾತವನ್ನು ಸೆಂಗಾರ್ ಅವರೇ ಆಯೋಜಿಸಿದ್ದಾರೆ ಎಂಬುದಕ್ಕೆ ಯಾವುದೇ ಪ್ರಾಥಮಿಕ ಪುರಾವೆಗಳು ದೊರೆಯದ ಕಾರಣ ದೆಹಲಿ ನ್ಯಾಯಾಲಯವು ಅವರನ್ನು ಈ ಪ್ರಕರಣದಿಂದ ಬಿಡುಗಡೆ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...