Homeನೂರರ ನೋಟಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

ಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಇವೆ.

- Advertisement -
- Advertisement -

2014 ರಲ್ಲಿ ಸರ್ವೋಚ್ಚ ನ್ಯಾಯಾಲಯ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವ ಎಂಪಿಗಳು ಮತ್ತು ಎಂಎಲ್‌ಎಗಳ ಮೇಲೆ ಕೇಸುಗಳು ದಾಖಲಾದರೆ, ಅದರ ಚಾರ್ಜ್ ಶೀಟ್ ಹಾಕಿದ ನಂತರ, ವಿಚಾರಣೆಯನ್ನು ಒಂದು ವರ್ಷಗಳ ಒಳಗಾಗಿ ಪೂರೈಸಬೇಕೆಂದೂ, ಕೋರ್ಟ್ ಕಲಾಪಗಳನ್ನು ವಿಚಾರಣೆ ಮುಗಿಯುವವರೆಗೂ ಪ್ರತಿದಿನವೂ ನಡೆಸಬೇಕೆಂದು ಆಜ್ಞೆ ಮಾಡಿತು. ಈ ಆಜ್ಞೆ ದೂರಗಾಮಿ ಫಲವನ್ನು ನೀಡುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು. ಈ ಮೂಲಕ ರಾಜಕೀಯ ಪಕ್ಷಗಳು ಕ್ರಿಮಿನಲ್‌ಗಳನ್ನು ಉಮೇದುದಾರರನ್ನಾಗಿ ನಿಲ್ಲಿಸುವ ದುಷ್ಟನೀತಿ ತಪ್ಪೀತೆಂದು ನ್ಯಾಯಾಲಯ ಆಶಿಸಿತು. ಯಾರಿಗೆ ನಂಬರ್‌ಗೇಮ್‌ನಲ್ಲಿ ಆಸಕ್ತಿ ಇದೆಯೋ ಯಾರಿಗೆ ಅಧಿಕಾರ ಹಿಡಿಯುವುದರಲ್ಲಿ ಆಸಕ್ತಿ ಇದೆಯೋ ಅಂತಹವರು ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುವುದಕ್ಕೆ ಹಿಂಜರಿಯಬಹುದು.

ಈ ಕೇಸು ದಾಖಲಿಸಿದ್ದ ಎನ್‌ಜಿಒ ಸಂಸ್ಥೆ 4 ಬೇಡಿಕೆಗಳನ್ನಿಟ್ಟಿದ್ದವು. 1) ದಾರುಣವಾದ ಕ್ರಿಮಿನಲ್ ಅಪರಾಧಗಳನ್ನು ಎಸಗಿದ ಚಾರ್ಜ್‌ಗಳನ್ನು ಎದುರಿಸುತ್ತಿರುವವರು ಚುನಾವಣೆಗೆ ನಿಲ್ಲದಂತೆ ಮಾರ್ಗಸೂಚಿಯನ್ನು ರೂಪಿಸಿ. 2) ಯಾವ ಕ್ರಿಮಿನಲ್‌ಗಳ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆಯೋ ಅಂತಹವನ ಬಗೆಗೆ ಆರು ತಿಂಗಳೊಳಗಾಗಿ ನ್ಯಾಯಾಲಯ ತನ್ನ ತೀರ್ಪನ್ನು ನೀಡಬೇಕು. 3) ಯಾರ ಮೇಲೆ ಗುರುತರವಾದ ಕ್ರಿಮಿನಲ್ ಅಪರಾಧಗಳನ್ನು ಹೊರಿಸಲಾಗಿದೆಯೋ ಅಂತಹವರನ್ನು ಲೋಕಸಭೆ, ವಿಧಾನಸಭೆಗಳ ಸದಸ್ಯತ್ವದಿಂದ ತೆಗೆದುಹಾಕುವ ಕಾನೂನುಗಳನ್ನು ರಚಿಸಬೇಕು. 4) 1951ರ Representation of the Peopleನ ಸೆಕ್ಷನ್ 8(4)ನ್ನು (ಟ್ರಯಲ್ ನ್ಯಾಯಾಲಯದಲ್ಲಿ ತಪ್ಪಿತಸ್ಥ ಎಂಬ ತೀರ್ಪು ನೀಡಲಾಗಿದ್ದರೂ, ಅದರ ವಿರುದ್ಧ ತಪ್ಪಿತಸ್ಥ ಎಂಪಿ, ಎಂಎಲ್‌ಎ ಅಥವಾ ಎಂಎಲ್‌ಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೆ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ) ರಾಜ್ಯಾಂಗ ವಿರೋಧಿ ಎಂದು ಘೋಷಿಸಬೇಕು.

ಚುನಾವಣಾ ಕಮಿಷನ್ ಈ ನಾಲ್ಕು ಸಲಹೆಗಳನ್ನು ಒಪ್ಪಿಕೊಂಡಿತಾದರೂ ಕೇಂದ್ರ ಸರ್ಕಾರ ಇದಕ್ಕೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿತು. ಇದು policy matter ಆಗಿದ್ದೂ ಪಾರ್ಲಿಮೆಂಟ್‌ನಿಂದ ಕಾನೂನು ರಚನೆಯಾಗಬೇಕಾಗಿರುವುದರಿಂದ ಈ ಕುರಿತು ಸರ್ವೋಚ್ಚ ನ್ಯಾಯಾಲಯ ವಿಚಾರಣೆ ಮಾಡುವಂತಿಲ್ಲ ಎಂದು ಮನವಿ ಮಾಡಿತು. ಆದರೆ ಸರ್ವೋಚ್ಚ ನ್ಯಾಯಾಲಯ ಸರ್ಕಾರದ ಈ ವಾದವನ್ನು ತಳ್ಳಿಹಾಕಿ ಈ ವಿಚಾರದಲ್ಲಿ ಲಾಕಮಿಷನ್‌ನ ಶಿಫಾರಸ್ಸು ಏನೆಂದು ಕೇಳಿತು.

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ದಾರುಣವಾದ ಕ್ರಿಮಿನಲ್ ಕೇಸುಗಳಿದ್ದವು. ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಅವರ ವಿರುದ್ಧ ಇವೆ. ಇವರ ವಿರುದ್ಧದ ಖಟ್ಳೆಗಳು 7 ವರ್ಷಗಳಷ್ಟು ಹಳೆಯದಾದರೂ ಇನ್ನೂ ಕೋರ್ಟ್ ವಿಚಾರಣೆ ಮುಗಿದಿಲ್ಲ ಎಂದು ಲಾಕಮಿಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಈ ಕೇಸುಗಳು ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವುದಕ್ಕೆ ಸಂಬಂಧಪಟ್ಟವು.

9 ಎಂಪಿಗಳ ಕೇಸುಗಳು 20 ವರ್ಷದಷ್ಟು ಹಳೆಯವಾದರೂ ಇನ್ನೂ ವಿಚಾರಣೆ ಮುಗಿದಿಲ್ಲ. ಹಣದ ಪ್ರಭಾವ, ಅಧಿಕಾರ ಪ್ರಭಾವ ಈ ಕ್ಯಾನ್ಸರ್ ಹರಡುವುದರಲ್ಲಿ ಪ್ರಮುಖ ಪಾತ್ರ ವಹಿಸಿವೆ. ಅಷ್ಟೆ ಅಲ್ಲದೆ ಕೇಸನ್ನು ಮುಂದಕ್ಕೆ ತಳ್ಳಲು ಇದೇ ಪ್ರಭಾವವನ್ನು ಬಳಸಲಾಗಿದೆ. 1951ರ ರಾಜ್ಯಾಂಗದ RPI Actನ ಸೆಕ್ಷನ್ 8(4), ಬೆಂಕಿಗೆ ತುಪ್ಪ ಸುರಿದಂತೆ ನ್ಯಾಯದಾನಕ್ಕೆ ಅಡ್ಡಗಾಲು ಹಾಕಿದೆ. 2013 ರಲ್ಲಿ ಸರ್ವೋಚ್ಚ ನ್ಯಾಯಾಲಯ ಸೆಕ್ಷನ್ 8(4)ನ್ನು ರಾಜ್ಯಾಂಗ ವಿರೋಧಿ ಸೆಕ್ಷನ್ ಎಂದು ತೀರ್ಪಿತ್ತಿತು. ಆದರೆ ಪಾರ್ಲಿಮೆಂಟ್ ಇದುವರೆಗೆ ರಾಜ್ಯಾಂಗದಿಂದ ಈ ಸೆಕ್ಷನ್ ತೆಗೆದುಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ವೋಚ್ಚ ನ್ಯಾಯಾಲಯ ರಾಜ್ಯಾಂಗ ವಿರೋಧಿ ಎಂದು ಹೇಳಿ ಕೇಂದ್ರ ಸರ್ಕಾರ ಪಾರ್ಲಿಮೆಂಟಿನಲ್ಲಿ ಈ ವಿಷಯವನ್ನು ಮಂಡಿಸಿ ಆ ಸೆಕ್ಷನ್ ಕಿತ್ತು ಹಾಕಲು ಮೀನಾಮೇಷ ಎಣಿಸುತ್ತಿದೆ. ಹತ್ತಾರು ವರ್ಷಗಳ ಹಿಂದೆ ಕೋರ್ಟು ಆ ಸೆಕ್ಷನ್ನುಗಳನ್ನು ಕಿತ್ತು ಹಾಕಲು ಸರ್ಕಾರಕ್ಕೆ ತಿಳಿಸಿದ್ದರೂ ಈ ಕ್ರಿಮಿನಲ್ ಎಂಪಿಗಳನ್ನು ರಕ್ಷಿಸಿಕೊಂಡೇ ಬಂದಿದೆ.

ಆದ್ದರಿಂದ ಸರ್ವೋಚ್ಚ ನ್ಯಾಯಾಲಯ ಸರ್ಕಾರಕ್ಕೆ ಇಂತಿಷ್ಟು ತಿಂಗಳುಗಳಲ್ಲಿ ರಾಜ್ಯಾಂಗದಲ್ಲಿ ತಿದ್ದುಪಡಿ ತಂದು ಹಾಲಿ ಇರುವ ಕಳಂಕಿತ ಎಂಪಿ, ಎಂಎಲ್‌ಎಗಳನ್ನು ಹೊರದೂಡಬೇಕೆಂದೂ, ಕಳಂಕಿತ ಮಾಜಿ ಎಂಪಿಗಳು, ಎಂಎಲ್‌ಎಗಳ ಮೇಲೂ ಕ್ರಿಮಿನಲ್ ಕೇಸುಗಳನ್ನು ಹಾಕಬೇಕೆಂದೂ ಆಜ್ಞೆ ಮಾಡಬೇಕು. ಇಂತಹ ಒತ್ತಡ ನ್ಯಾಯಾಲಯದಿಂದ ಬರದಿದ್ದರೆ ಈ ಭಂಡಸರ್ಕಾರ ತನ್ನ ದುರ್ನೀತಿಯನ್ನು ಮುಂದುವರೆಸುತ್ತಲೇ ಹೋಗುತ್ತದೆ.


ಇದನ್ನೂ ಓದಿ: ಸರ್ಕಾರಿ ನೌಕರರ ರಾಜಕೀಯ ಒಲವಿನ ಬಗ್ಗೆ ಸರ್ಕಾರದ ನಿರ್ಬಂಧ ತಪ್ಪು: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...