Homeನೂರರ ನೋಟಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

ಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಇವೆ.

- Advertisement -
- Advertisement -

2014 ರಲ್ಲಿ ಸರ್ವೋಚ್ಚ ನ್ಯಾಯಾಲಯ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವ ಎಂಪಿಗಳು ಮತ್ತು ಎಂಎಲ್‌ಎಗಳ ಮೇಲೆ ಕೇಸುಗಳು ದಾಖಲಾದರೆ, ಅದರ ಚಾರ್ಜ್ ಶೀಟ್ ಹಾಕಿದ ನಂತರ, ವಿಚಾರಣೆಯನ್ನು ಒಂದು ವರ್ಷಗಳ ಒಳಗಾಗಿ ಪೂರೈಸಬೇಕೆಂದೂ, ಕೋರ್ಟ್ ಕಲಾಪಗಳನ್ನು ವಿಚಾರಣೆ ಮುಗಿಯುವವರೆಗೂ ಪ್ರತಿದಿನವೂ ನಡೆಸಬೇಕೆಂದು ಆಜ್ಞೆ ಮಾಡಿತು. ಈ ಆಜ್ಞೆ ದೂರಗಾಮಿ ಫಲವನ್ನು ನೀಡುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು. ಈ ಮೂಲಕ ರಾಜಕೀಯ ಪಕ್ಷಗಳು ಕ್ರಿಮಿನಲ್‌ಗಳನ್ನು ಉಮೇದುದಾರರನ್ನಾಗಿ ನಿಲ್ಲಿಸುವ ದುಷ್ಟನೀತಿ ತಪ್ಪೀತೆಂದು ನ್ಯಾಯಾಲಯ ಆಶಿಸಿತು. ಯಾರಿಗೆ ನಂಬರ್‌ಗೇಮ್‌ನಲ್ಲಿ ಆಸಕ್ತಿ ಇದೆಯೋ ಯಾರಿಗೆ ಅಧಿಕಾರ ಹಿಡಿಯುವುದರಲ್ಲಿ ಆಸಕ್ತಿ ಇದೆಯೋ ಅಂತಹವರು ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುವುದಕ್ಕೆ ಹಿಂಜರಿಯಬಹುದು.

ಈ ಕೇಸು ದಾಖಲಿಸಿದ್ದ ಎನ್‌ಜಿಒ ಸಂಸ್ಥೆ 4 ಬೇಡಿಕೆಗಳನ್ನಿಟ್ಟಿದ್ದವು. 1) ದಾರುಣವಾದ ಕ್ರಿಮಿನಲ್ ಅಪರಾಧಗಳನ್ನು ಎಸಗಿದ ಚಾರ್ಜ್‌ಗಳನ್ನು ಎದುರಿಸುತ್ತಿರುವವರು ಚುನಾವಣೆಗೆ ನಿಲ್ಲದಂತೆ ಮಾರ್ಗಸೂಚಿಯನ್ನು ರೂಪಿಸಿ. 2) ಯಾವ ಕ್ರಿಮಿನಲ್‌ಗಳ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆಯೋ ಅಂತಹವನ ಬಗೆಗೆ ಆರು ತಿಂಗಳೊಳಗಾಗಿ ನ್ಯಾಯಾಲಯ ತನ್ನ ತೀರ್ಪನ್ನು ನೀಡಬೇಕು. 3) ಯಾರ ಮೇಲೆ ಗುರುತರವಾದ ಕ್ರಿಮಿನಲ್ ಅಪರಾಧಗಳನ್ನು ಹೊರಿಸಲಾಗಿದೆಯೋ ಅಂತಹವರನ್ನು ಲೋಕಸಭೆ, ವಿಧಾನಸಭೆಗಳ ಸದಸ್ಯತ್ವದಿಂದ ತೆಗೆದುಹಾಕುವ ಕಾನೂನುಗಳನ್ನು ರಚಿಸಬೇಕು. 4) 1951ರ Representation of the Peopleನ ಸೆಕ್ಷನ್ 8(4)ನ್ನು (ಟ್ರಯಲ್ ನ್ಯಾಯಾಲಯದಲ್ಲಿ ತಪ್ಪಿತಸ್ಥ ಎಂಬ ತೀರ್ಪು ನೀಡಲಾಗಿದ್ದರೂ, ಅದರ ವಿರುದ್ಧ ತಪ್ಪಿತಸ್ಥ ಎಂಪಿ, ಎಂಎಲ್‌ಎ ಅಥವಾ ಎಂಎಲ್‌ಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೆ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ) ರಾಜ್ಯಾಂಗ ವಿರೋಧಿ ಎಂದು ಘೋಷಿಸಬೇಕು.

ಚುನಾವಣಾ ಕಮಿಷನ್ ಈ ನಾಲ್ಕು ಸಲಹೆಗಳನ್ನು ಒಪ್ಪಿಕೊಂಡಿತಾದರೂ ಕೇಂದ್ರ ಸರ್ಕಾರ ಇದಕ್ಕೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿತು. ಇದು policy matter ಆಗಿದ್ದೂ ಪಾರ್ಲಿಮೆಂಟ್‌ನಿಂದ ಕಾನೂನು ರಚನೆಯಾಗಬೇಕಾಗಿರುವುದರಿಂದ ಈ ಕುರಿತು ಸರ್ವೋಚ್ಚ ನ್ಯಾಯಾಲಯ ವಿಚಾರಣೆ ಮಾಡುವಂತಿಲ್ಲ ಎಂದು ಮನವಿ ಮಾಡಿತು. ಆದರೆ ಸರ್ವೋಚ್ಚ ನ್ಯಾಯಾಲಯ ಸರ್ಕಾರದ ಈ ವಾದವನ್ನು ತಳ್ಳಿಹಾಕಿ ಈ ವಿಚಾರದಲ್ಲಿ ಲಾಕಮಿಷನ್‌ನ ಶಿಫಾರಸ್ಸು ಏನೆಂದು ಕೇಳಿತು.

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ದಾರುಣವಾದ ಕ್ರಿಮಿನಲ್ ಕೇಸುಗಳಿದ್ದವು. ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಅವರ ವಿರುದ್ಧ ಇವೆ. ಇವರ ವಿರುದ್ಧದ ಖಟ್ಳೆಗಳು 7 ವರ್ಷಗಳಷ್ಟು ಹಳೆಯದಾದರೂ ಇನ್ನೂ ಕೋರ್ಟ್ ವಿಚಾರಣೆ ಮುಗಿದಿಲ್ಲ ಎಂದು ಲಾಕಮಿಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಈ ಕೇಸುಗಳು ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವುದಕ್ಕೆ ಸಂಬಂಧಪಟ್ಟವು.

9 ಎಂಪಿಗಳ ಕೇಸುಗಳು 20 ವರ್ಷದಷ್ಟು ಹಳೆಯವಾದರೂ ಇನ್ನೂ ವಿಚಾರಣೆ ಮುಗಿದಿಲ್ಲ. ಹಣದ ಪ್ರಭಾವ, ಅಧಿಕಾರ ಪ್ರಭಾವ ಈ ಕ್ಯಾನ್ಸರ್ ಹರಡುವುದರಲ್ಲಿ ಪ್ರಮುಖ ಪಾತ್ರ ವಹಿಸಿವೆ. ಅಷ್ಟೆ ಅಲ್ಲದೆ ಕೇಸನ್ನು ಮುಂದಕ್ಕೆ ತಳ್ಳಲು ಇದೇ ಪ್ರಭಾವವನ್ನು ಬಳಸಲಾಗಿದೆ. 1951ರ ರಾಜ್ಯಾಂಗದ RPI Actನ ಸೆಕ್ಷನ್ 8(4), ಬೆಂಕಿಗೆ ತುಪ್ಪ ಸುರಿದಂತೆ ನ್ಯಾಯದಾನಕ್ಕೆ ಅಡ್ಡಗಾಲು ಹಾಕಿದೆ. 2013 ರಲ್ಲಿ ಸರ್ವೋಚ್ಚ ನ್ಯಾಯಾಲಯ ಸೆಕ್ಷನ್ 8(4)ನ್ನು ರಾಜ್ಯಾಂಗ ವಿರೋಧಿ ಸೆಕ್ಷನ್ ಎಂದು ತೀರ್ಪಿತ್ತಿತು. ಆದರೆ ಪಾರ್ಲಿಮೆಂಟ್ ಇದುವರೆಗೆ ರಾಜ್ಯಾಂಗದಿಂದ ಈ ಸೆಕ್ಷನ್ ತೆಗೆದುಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ವೋಚ್ಚ ನ್ಯಾಯಾಲಯ ರಾಜ್ಯಾಂಗ ವಿರೋಧಿ ಎಂದು ಹೇಳಿ ಕೇಂದ್ರ ಸರ್ಕಾರ ಪಾರ್ಲಿಮೆಂಟಿನಲ್ಲಿ ಈ ವಿಷಯವನ್ನು ಮಂಡಿಸಿ ಆ ಸೆಕ್ಷನ್ ಕಿತ್ತು ಹಾಕಲು ಮೀನಾಮೇಷ ಎಣಿಸುತ್ತಿದೆ. ಹತ್ತಾರು ವರ್ಷಗಳ ಹಿಂದೆ ಕೋರ್ಟು ಆ ಸೆಕ್ಷನ್ನುಗಳನ್ನು ಕಿತ್ತು ಹಾಕಲು ಸರ್ಕಾರಕ್ಕೆ ತಿಳಿಸಿದ್ದರೂ ಈ ಕ್ರಿಮಿನಲ್ ಎಂಪಿಗಳನ್ನು ರಕ್ಷಿಸಿಕೊಂಡೇ ಬಂದಿದೆ.

ಆದ್ದರಿಂದ ಸರ್ವೋಚ್ಚ ನ್ಯಾಯಾಲಯ ಸರ್ಕಾರಕ್ಕೆ ಇಂತಿಷ್ಟು ತಿಂಗಳುಗಳಲ್ಲಿ ರಾಜ್ಯಾಂಗದಲ್ಲಿ ತಿದ್ದುಪಡಿ ತಂದು ಹಾಲಿ ಇರುವ ಕಳಂಕಿತ ಎಂಪಿ, ಎಂಎಲ್‌ಎಗಳನ್ನು ಹೊರದೂಡಬೇಕೆಂದೂ, ಕಳಂಕಿತ ಮಾಜಿ ಎಂಪಿಗಳು, ಎಂಎಲ್‌ಎಗಳ ಮೇಲೂ ಕ್ರಿಮಿನಲ್ ಕೇಸುಗಳನ್ನು ಹಾಕಬೇಕೆಂದೂ ಆಜ್ಞೆ ಮಾಡಬೇಕು. ಇಂತಹ ಒತ್ತಡ ನ್ಯಾಯಾಲಯದಿಂದ ಬರದಿದ್ದರೆ ಈ ಭಂಡಸರ್ಕಾರ ತನ್ನ ದುರ್ನೀತಿಯನ್ನು ಮುಂದುವರೆಸುತ್ತಲೇ ಹೋಗುತ್ತದೆ.


ಇದನ್ನೂ ಓದಿ: ಸರ್ಕಾರಿ ನೌಕರರ ರಾಜಕೀಯ ಒಲವಿನ ಬಗ್ಗೆ ಸರ್ಕಾರದ ನಿರ್ಬಂಧ ತಪ್ಪು: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...