Homeನೂರರ ನೋಟಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

ಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಇವೆ.

- Advertisement -
- Advertisement -

2014 ರಲ್ಲಿ ಸರ್ವೋಚ್ಚ ನ್ಯಾಯಾಲಯ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವ ಎಂಪಿಗಳು ಮತ್ತು ಎಂಎಲ್‌ಎಗಳ ಮೇಲೆ ಕೇಸುಗಳು ದಾಖಲಾದರೆ, ಅದರ ಚಾರ್ಜ್ ಶೀಟ್ ಹಾಕಿದ ನಂತರ, ವಿಚಾರಣೆಯನ್ನು ಒಂದು ವರ್ಷಗಳ ಒಳಗಾಗಿ ಪೂರೈಸಬೇಕೆಂದೂ, ಕೋರ್ಟ್ ಕಲಾಪಗಳನ್ನು ವಿಚಾರಣೆ ಮುಗಿಯುವವರೆಗೂ ಪ್ರತಿದಿನವೂ ನಡೆಸಬೇಕೆಂದು ಆಜ್ಞೆ ಮಾಡಿತು. ಈ ಆಜ್ಞೆ ದೂರಗಾಮಿ ಫಲವನ್ನು ನೀಡುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು. ಈ ಮೂಲಕ ರಾಜಕೀಯ ಪಕ್ಷಗಳು ಕ್ರಿಮಿನಲ್‌ಗಳನ್ನು ಉಮೇದುದಾರರನ್ನಾಗಿ ನಿಲ್ಲಿಸುವ ದುಷ್ಟನೀತಿ ತಪ್ಪೀತೆಂದು ನ್ಯಾಯಾಲಯ ಆಶಿಸಿತು. ಯಾರಿಗೆ ನಂಬರ್‌ಗೇಮ್‌ನಲ್ಲಿ ಆಸಕ್ತಿ ಇದೆಯೋ ಯಾರಿಗೆ ಅಧಿಕಾರ ಹಿಡಿಯುವುದರಲ್ಲಿ ಆಸಕ್ತಿ ಇದೆಯೋ ಅಂತಹವರು ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುವುದಕ್ಕೆ ಹಿಂಜರಿಯಬಹುದು.

ಈ ಕೇಸು ದಾಖಲಿಸಿದ್ದ ಎನ್‌ಜಿಒ ಸಂಸ್ಥೆ 4 ಬೇಡಿಕೆಗಳನ್ನಿಟ್ಟಿದ್ದವು. 1) ದಾರುಣವಾದ ಕ್ರಿಮಿನಲ್ ಅಪರಾಧಗಳನ್ನು ಎಸಗಿದ ಚಾರ್ಜ್‌ಗಳನ್ನು ಎದುರಿಸುತ್ತಿರುವವರು ಚುನಾವಣೆಗೆ ನಿಲ್ಲದಂತೆ ಮಾರ್ಗಸೂಚಿಯನ್ನು ರೂಪಿಸಿ. 2) ಯಾವ ಕ್ರಿಮಿನಲ್‌ಗಳ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆಯೋ ಅಂತಹವನ ಬಗೆಗೆ ಆರು ತಿಂಗಳೊಳಗಾಗಿ ನ್ಯಾಯಾಲಯ ತನ್ನ ತೀರ್ಪನ್ನು ನೀಡಬೇಕು. 3) ಯಾರ ಮೇಲೆ ಗುರುತರವಾದ ಕ್ರಿಮಿನಲ್ ಅಪರಾಧಗಳನ್ನು ಹೊರಿಸಲಾಗಿದೆಯೋ ಅಂತಹವರನ್ನು ಲೋಕಸಭೆ, ವಿಧಾನಸಭೆಗಳ ಸದಸ್ಯತ್ವದಿಂದ ತೆಗೆದುಹಾಕುವ ಕಾನೂನುಗಳನ್ನು ರಚಿಸಬೇಕು. 4) 1951ರ Representation of the Peopleನ ಸೆಕ್ಷನ್ 8(4)ನ್ನು (ಟ್ರಯಲ್ ನ್ಯಾಯಾಲಯದಲ್ಲಿ ತಪ್ಪಿತಸ್ಥ ಎಂಬ ತೀರ್ಪು ನೀಡಲಾಗಿದ್ದರೂ, ಅದರ ವಿರುದ್ಧ ತಪ್ಪಿತಸ್ಥ ಎಂಪಿ, ಎಂಎಲ್‌ಎ ಅಥವಾ ಎಂಎಲ್‌ಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೆ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ) ರಾಜ್ಯಾಂಗ ವಿರೋಧಿ ಎಂದು ಘೋಷಿಸಬೇಕು.

ಚುನಾವಣಾ ಕಮಿಷನ್ ಈ ನಾಲ್ಕು ಸಲಹೆಗಳನ್ನು ಒಪ್ಪಿಕೊಂಡಿತಾದರೂ ಕೇಂದ್ರ ಸರ್ಕಾರ ಇದಕ್ಕೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿತು. ಇದು policy matter ಆಗಿದ್ದೂ ಪಾರ್ಲಿಮೆಂಟ್‌ನಿಂದ ಕಾನೂನು ರಚನೆಯಾಗಬೇಕಾಗಿರುವುದರಿಂದ ಈ ಕುರಿತು ಸರ್ವೋಚ್ಚ ನ್ಯಾಯಾಲಯ ವಿಚಾರಣೆ ಮಾಡುವಂತಿಲ್ಲ ಎಂದು ಮನವಿ ಮಾಡಿತು. ಆದರೆ ಸರ್ವೋಚ್ಚ ನ್ಯಾಯಾಲಯ ಸರ್ಕಾರದ ಈ ವಾದವನ್ನು ತಳ್ಳಿಹಾಕಿ ಈ ವಿಚಾರದಲ್ಲಿ ಲಾಕಮಿಷನ್‌ನ ಶಿಫಾರಸ್ಸು ಏನೆಂದು ಕೇಳಿತು.

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ದಾರುಣವಾದ ಕ್ರಿಮಿನಲ್ ಕೇಸುಗಳಿದ್ದವು. ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಅವರ ವಿರುದ್ಧ ಇವೆ. ಇವರ ವಿರುದ್ಧದ ಖಟ್ಳೆಗಳು 7 ವರ್ಷಗಳಷ್ಟು ಹಳೆಯದಾದರೂ ಇನ್ನೂ ಕೋರ್ಟ್ ವಿಚಾರಣೆ ಮುಗಿದಿಲ್ಲ ಎಂದು ಲಾಕಮಿಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಈ ಕೇಸುಗಳು ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವುದಕ್ಕೆ ಸಂಬಂಧಪಟ್ಟವು.

9 ಎಂಪಿಗಳ ಕೇಸುಗಳು 20 ವರ್ಷದಷ್ಟು ಹಳೆಯವಾದರೂ ಇನ್ನೂ ವಿಚಾರಣೆ ಮುಗಿದಿಲ್ಲ. ಹಣದ ಪ್ರಭಾವ, ಅಧಿಕಾರ ಪ್ರಭಾವ ಈ ಕ್ಯಾನ್ಸರ್ ಹರಡುವುದರಲ್ಲಿ ಪ್ರಮುಖ ಪಾತ್ರ ವಹಿಸಿವೆ. ಅಷ್ಟೆ ಅಲ್ಲದೆ ಕೇಸನ್ನು ಮುಂದಕ್ಕೆ ತಳ್ಳಲು ಇದೇ ಪ್ರಭಾವವನ್ನು ಬಳಸಲಾಗಿದೆ. 1951ರ ರಾಜ್ಯಾಂಗದ RPI Actನ ಸೆಕ್ಷನ್ 8(4), ಬೆಂಕಿಗೆ ತುಪ್ಪ ಸುರಿದಂತೆ ನ್ಯಾಯದಾನಕ್ಕೆ ಅಡ್ಡಗಾಲು ಹಾಕಿದೆ. 2013 ರಲ್ಲಿ ಸರ್ವೋಚ್ಚ ನ್ಯಾಯಾಲಯ ಸೆಕ್ಷನ್ 8(4)ನ್ನು ರಾಜ್ಯಾಂಗ ವಿರೋಧಿ ಸೆಕ್ಷನ್ ಎಂದು ತೀರ್ಪಿತ್ತಿತು. ಆದರೆ ಪಾರ್ಲಿಮೆಂಟ್ ಇದುವರೆಗೆ ರಾಜ್ಯಾಂಗದಿಂದ ಈ ಸೆಕ್ಷನ್ ತೆಗೆದುಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ವೋಚ್ಚ ನ್ಯಾಯಾಲಯ ರಾಜ್ಯಾಂಗ ವಿರೋಧಿ ಎಂದು ಹೇಳಿ ಕೇಂದ್ರ ಸರ್ಕಾರ ಪಾರ್ಲಿಮೆಂಟಿನಲ್ಲಿ ಈ ವಿಷಯವನ್ನು ಮಂಡಿಸಿ ಆ ಸೆಕ್ಷನ್ ಕಿತ್ತು ಹಾಕಲು ಮೀನಾಮೇಷ ಎಣಿಸುತ್ತಿದೆ. ಹತ್ತಾರು ವರ್ಷಗಳ ಹಿಂದೆ ಕೋರ್ಟು ಆ ಸೆಕ್ಷನ್ನುಗಳನ್ನು ಕಿತ್ತು ಹಾಕಲು ಸರ್ಕಾರಕ್ಕೆ ತಿಳಿಸಿದ್ದರೂ ಈ ಕ್ರಿಮಿನಲ್ ಎಂಪಿಗಳನ್ನು ರಕ್ಷಿಸಿಕೊಂಡೇ ಬಂದಿದೆ.

ಆದ್ದರಿಂದ ಸರ್ವೋಚ್ಚ ನ್ಯಾಯಾಲಯ ಸರ್ಕಾರಕ್ಕೆ ಇಂತಿಷ್ಟು ತಿಂಗಳುಗಳಲ್ಲಿ ರಾಜ್ಯಾಂಗದಲ್ಲಿ ತಿದ್ದುಪಡಿ ತಂದು ಹಾಲಿ ಇರುವ ಕಳಂಕಿತ ಎಂಪಿ, ಎಂಎಲ್‌ಎಗಳನ್ನು ಹೊರದೂಡಬೇಕೆಂದೂ, ಕಳಂಕಿತ ಮಾಜಿ ಎಂಪಿಗಳು, ಎಂಎಲ್‌ಎಗಳ ಮೇಲೂ ಕ್ರಿಮಿನಲ್ ಕೇಸುಗಳನ್ನು ಹಾಕಬೇಕೆಂದೂ ಆಜ್ಞೆ ಮಾಡಬೇಕು. ಇಂತಹ ಒತ್ತಡ ನ್ಯಾಯಾಲಯದಿಂದ ಬರದಿದ್ದರೆ ಈ ಭಂಡಸರ್ಕಾರ ತನ್ನ ದುರ್ನೀತಿಯನ್ನು ಮುಂದುವರೆಸುತ್ತಲೇ ಹೋಗುತ್ತದೆ.


ಇದನ್ನೂ ಓದಿ: ಸರ್ಕಾರಿ ನೌಕರರ ರಾಜಕೀಯ ಒಲವಿನ ಬಗ್ಗೆ ಸರ್ಕಾರದ ನಿರ್ಬಂಧ ತಪ್ಪು: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...