Homeನೂರರ ನೋಟಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

ಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಇವೆ.

- Advertisement -
- Advertisement -

2014 ರಲ್ಲಿ ಸರ್ವೋಚ್ಚ ನ್ಯಾಯಾಲಯ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವ ಎಂಪಿಗಳು ಮತ್ತು ಎಂಎಲ್‌ಎಗಳ ಮೇಲೆ ಕೇಸುಗಳು ದಾಖಲಾದರೆ, ಅದರ ಚಾರ್ಜ್ ಶೀಟ್ ಹಾಕಿದ ನಂತರ, ವಿಚಾರಣೆಯನ್ನು ಒಂದು ವರ್ಷಗಳ ಒಳಗಾಗಿ ಪೂರೈಸಬೇಕೆಂದೂ, ಕೋರ್ಟ್ ಕಲಾಪಗಳನ್ನು ವಿಚಾರಣೆ ಮುಗಿಯುವವರೆಗೂ ಪ್ರತಿದಿನವೂ ನಡೆಸಬೇಕೆಂದು ಆಜ್ಞೆ ಮಾಡಿತು. ಈ ಆಜ್ಞೆ ದೂರಗಾಮಿ ಫಲವನ್ನು ನೀಡುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು. ಈ ಮೂಲಕ ರಾಜಕೀಯ ಪಕ್ಷಗಳು ಕ್ರಿಮಿನಲ್‌ಗಳನ್ನು ಉಮೇದುದಾರರನ್ನಾಗಿ ನಿಲ್ಲಿಸುವ ದುಷ್ಟನೀತಿ ತಪ್ಪೀತೆಂದು ನ್ಯಾಯಾಲಯ ಆಶಿಸಿತು. ಯಾರಿಗೆ ನಂಬರ್‌ಗೇಮ್‌ನಲ್ಲಿ ಆಸಕ್ತಿ ಇದೆಯೋ ಯಾರಿಗೆ ಅಧಿಕಾರ ಹಿಡಿಯುವುದರಲ್ಲಿ ಆಸಕ್ತಿ ಇದೆಯೋ ಅಂತಹವರು ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುವುದಕ್ಕೆ ಹಿಂಜರಿಯಬಹುದು.

ಈ ಕೇಸು ದಾಖಲಿಸಿದ್ದ ಎನ್‌ಜಿಒ ಸಂಸ್ಥೆ 4 ಬೇಡಿಕೆಗಳನ್ನಿಟ್ಟಿದ್ದವು. 1) ದಾರುಣವಾದ ಕ್ರಿಮಿನಲ್ ಅಪರಾಧಗಳನ್ನು ಎಸಗಿದ ಚಾರ್ಜ್‌ಗಳನ್ನು ಎದುರಿಸುತ್ತಿರುವವರು ಚುನಾವಣೆಗೆ ನಿಲ್ಲದಂತೆ ಮಾರ್ಗಸೂಚಿಯನ್ನು ರೂಪಿಸಿ. 2) ಯಾವ ಕ್ರಿಮಿನಲ್‌ಗಳ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆಯೋ ಅಂತಹವನ ಬಗೆಗೆ ಆರು ತಿಂಗಳೊಳಗಾಗಿ ನ್ಯಾಯಾಲಯ ತನ್ನ ತೀರ್ಪನ್ನು ನೀಡಬೇಕು. 3) ಯಾರ ಮೇಲೆ ಗುರುತರವಾದ ಕ್ರಿಮಿನಲ್ ಅಪರಾಧಗಳನ್ನು ಹೊರಿಸಲಾಗಿದೆಯೋ ಅಂತಹವರನ್ನು ಲೋಕಸಭೆ, ವಿಧಾನಸಭೆಗಳ ಸದಸ್ಯತ್ವದಿಂದ ತೆಗೆದುಹಾಕುವ ಕಾನೂನುಗಳನ್ನು ರಚಿಸಬೇಕು. 4) 1951ರ Representation of the Peopleನ ಸೆಕ್ಷನ್ 8(4)ನ್ನು (ಟ್ರಯಲ್ ನ್ಯಾಯಾಲಯದಲ್ಲಿ ತಪ್ಪಿತಸ್ಥ ಎಂಬ ತೀರ್ಪು ನೀಡಲಾಗಿದ್ದರೂ, ಅದರ ವಿರುದ್ಧ ತಪ್ಪಿತಸ್ಥ ಎಂಪಿ, ಎಂಎಲ್‌ಎ ಅಥವಾ ಎಂಎಲ್‌ಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೆ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ) ರಾಜ್ಯಾಂಗ ವಿರೋಧಿ ಎಂದು ಘೋಷಿಸಬೇಕು.

ಚುನಾವಣಾ ಕಮಿಷನ್ ಈ ನಾಲ್ಕು ಸಲಹೆಗಳನ್ನು ಒಪ್ಪಿಕೊಂಡಿತಾದರೂ ಕೇಂದ್ರ ಸರ್ಕಾರ ಇದಕ್ಕೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿತು. ಇದು policy matter ಆಗಿದ್ದೂ ಪಾರ್ಲಿಮೆಂಟ್‌ನಿಂದ ಕಾನೂನು ರಚನೆಯಾಗಬೇಕಾಗಿರುವುದರಿಂದ ಈ ಕುರಿತು ಸರ್ವೋಚ್ಚ ನ್ಯಾಯಾಲಯ ವಿಚಾರಣೆ ಮಾಡುವಂತಿಲ್ಲ ಎಂದು ಮನವಿ ಮಾಡಿತು. ಆದರೆ ಸರ್ವೋಚ್ಚ ನ್ಯಾಯಾಲಯ ಸರ್ಕಾರದ ಈ ವಾದವನ್ನು ತಳ್ಳಿಹಾಕಿ ಈ ವಿಚಾರದಲ್ಲಿ ಲಾಕಮಿಷನ್‌ನ ಶಿಫಾರಸ್ಸು ಏನೆಂದು ಕೇಳಿತು.

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ದಾರುಣವಾದ ಕ್ರಿಮಿನಲ್ ಕೇಸುಗಳಿದ್ದವು. ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಅವರ ವಿರುದ್ಧ ಇವೆ. ಇವರ ವಿರುದ್ಧದ ಖಟ್ಳೆಗಳು 7 ವರ್ಷಗಳಷ್ಟು ಹಳೆಯದಾದರೂ ಇನ್ನೂ ಕೋರ್ಟ್ ವಿಚಾರಣೆ ಮುಗಿದಿಲ್ಲ ಎಂದು ಲಾಕಮಿಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಈ ಕೇಸುಗಳು ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವುದಕ್ಕೆ ಸಂಬಂಧಪಟ್ಟವು.

9 ಎಂಪಿಗಳ ಕೇಸುಗಳು 20 ವರ್ಷದಷ್ಟು ಹಳೆಯವಾದರೂ ಇನ್ನೂ ವಿಚಾರಣೆ ಮುಗಿದಿಲ್ಲ. ಹಣದ ಪ್ರಭಾವ, ಅಧಿಕಾರ ಪ್ರಭಾವ ಈ ಕ್ಯಾನ್ಸರ್ ಹರಡುವುದರಲ್ಲಿ ಪ್ರಮುಖ ಪಾತ್ರ ವಹಿಸಿವೆ. ಅಷ್ಟೆ ಅಲ್ಲದೆ ಕೇಸನ್ನು ಮುಂದಕ್ಕೆ ತಳ್ಳಲು ಇದೇ ಪ್ರಭಾವವನ್ನು ಬಳಸಲಾಗಿದೆ. 1951ರ ರಾಜ್ಯಾಂಗದ RPI Actನ ಸೆಕ್ಷನ್ 8(4), ಬೆಂಕಿಗೆ ತುಪ್ಪ ಸುರಿದಂತೆ ನ್ಯಾಯದಾನಕ್ಕೆ ಅಡ್ಡಗಾಲು ಹಾಕಿದೆ. 2013 ರಲ್ಲಿ ಸರ್ವೋಚ್ಚ ನ್ಯಾಯಾಲಯ ಸೆಕ್ಷನ್ 8(4)ನ್ನು ರಾಜ್ಯಾಂಗ ವಿರೋಧಿ ಸೆಕ್ಷನ್ ಎಂದು ತೀರ್ಪಿತ್ತಿತು. ಆದರೆ ಪಾರ್ಲಿಮೆಂಟ್ ಇದುವರೆಗೆ ರಾಜ್ಯಾಂಗದಿಂದ ಈ ಸೆಕ್ಷನ್ ತೆಗೆದುಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ವೋಚ್ಚ ನ್ಯಾಯಾಲಯ ರಾಜ್ಯಾಂಗ ವಿರೋಧಿ ಎಂದು ಹೇಳಿ ಕೇಂದ್ರ ಸರ್ಕಾರ ಪಾರ್ಲಿಮೆಂಟಿನಲ್ಲಿ ಈ ವಿಷಯವನ್ನು ಮಂಡಿಸಿ ಆ ಸೆಕ್ಷನ್ ಕಿತ್ತು ಹಾಕಲು ಮೀನಾಮೇಷ ಎಣಿಸುತ್ತಿದೆ. ಹತ್ತಾರು ವರ್ಷಗಳ ಹಿಂದೆ ಕೋರ್ಟು ಆ ಸೆಕ್ಷನ್ನುಗಳನ್ನು ಕಿತ್ತು ಹಾಕಲು ಸರ್ಕಾರಕ್ಕೆ ತಿಳಿಸಿದ್ದರೂ ಈ ಕ್ರಿಮಿನಲ್ ಎಂಪಿಗಳನ್ನು ರಕ್ಷಿಸಿಕೊಂಡೇ ಬಂದಿದೆ.

ಆದ್ದರಿಂದ ಸರ್ವೋಚ್ಚ ನ್ಯಾಯಾಲಯ ಸರ್ಕಾರಕ್ಕೆ ಇಂತಿಷ್ಟು ತಿಂಗಳುಗಳಲ್ಲಿ ರಾಜ್ಯಾಂಗದಲ್ಲಿ ತಿದ್ದುಪಡಿ ತಂದು ಹಾಲಿ ಇರುವ ಕಳಂಕಿತ ಎಂಪಿ, ಎಂಎಲ್‌ಎಗಳನ್ನು ಹೊರದೂಡಬೇಕೆಂದೂ, ಕಳಂಕಿತ ಮಾಜಿ ಎಂಪಿಗಳು, ಎಂಎಲ್‌ಎಗಳ ಮೇಲೂ ಕ್ರಿಮಿನಲ್ ಕೇಸುಗಳನ್ನು ಹಾಕಬೇಕೆಂದೂ ಆಜ್ಞೆ ಮಾಡಬೇಕು. ಇಂತಹ ಒತ್ತಡ ನ್ಯಾಯಾಲಯದಿಂದ ಬರದಿದ್ದರೆ ಈ ಭಂಡಸರ್ಕಾರ ತನ್ನ ದುರ್ನೀತಿಯನ್ನು ಮುಂದುವರೆಸುತ್ತಲೇ ಹೋಗುತ್ತದೆ.


ಇದನ್ನೂ ಓದಿ: ಸರ್ಕಾರಿ ನೌಕರರ ರಾಜಕೀಯ ಒಲವಿನ ಬಗ್ಗೆ ಸರ್ಕಾರದ ನಿರ್ಬಂಧ ತಪ್ಪು: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...