Homeನೂರರ ನೋಟಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

ಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಇವೆ.

- Advertisement -
- Advertisement -

2014 ರಲ್ಲಿ ಸರ್ವೋಚ್ಚ ನ್ಯಾಯಾಲಯ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವ ಎಂಪಿಗಳು ಮತ್ತು ಎಂಎಲ್‌ಎಗಳ ಮೇಲೆ ಕೇಸುಗಳು ದಾಖಲಾದರೆ, ಅದರ ಚಾರ್ಜ್ ಶೀಟ್ ಹಾಕಿದ ನಂತರ, ವಿಚಾರಣೆಯನ್ನು ಒಂದು ವರ್ಷಗಳ ಒಳಗಾಗಿ ಪೂರೈಸಬೇಕೆಂದೂ, ಕೋರ್ಟ್ ಕಲಾಪಗಳನ್ನು ವಿಚಾರಣೆ ಮುಗಿಯುವವರೆಗೂ ಪ್ರತಿದಿನವೂ ನಡೆಸಬೇಕೆಂದು ಆಜ್ಞೆ ಮಾಡಿತು. ಈ ಆಜ್ಞೆ ದೂರಗಾಮಿ ಫಲವನ್ನು ನೀಡುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು. ಈ ಮೂಲಕ ರಾಜಕೀಯ ಪಕ್ಷಗಳು ಕ್ರಿಮಿನಲ್‌ಗಳನ್ನು ಉಮೇದುದಾರರನ್ನಾಗಿ ನಿಲ್ಲಿಸುವ ದುಷ್ಟನೀತಿ ತಪ್ಪೀತೆಂದು ನ್ಯಾಯಾಲಯ ಆಶಿಸಿತು. ಯಾರಿಗೆ ನಂಬರ್‌ಗೇಮ್‌ನಲ್ಲಿ ಆಸಕ್ತಿ ಇದೆಯೋ ಯಾರಿಗೆ ಅಧಿಕಾರ ಹಿಡಿಯುವುದರಲ್ಲಿ ಆಸಕ್ತಿ ಇದೆಯೋ ಅಂತಹವರು ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುವುದಕ್ಕೆ ಹಿಂಜರಿಯಬಹುದು.

ಈ ಕೇಸು ದಾಖಲಿಸಿದ್ದ ಎನ್‌ಜಿಒ ಸಂಸ್ಥೆ 4 ಬೇಡಿಕೆಗಳನ್ನಿಟ್ಟಿದ್ದವು. 1) ದಾರುಣವಾದ ಕ್ರಿಮಿನಲ್ ಅಪರಾಧಗಳನ್ನು ಎಸಗಿದ ಚಾರ್ಜ್‌ಗಳನ್ನು ಎದುರಿಸುತ್ತಿರುವವರು ಚುನಾವಣೆಗೆ ನಿಲ್ಲದಂತೆ ಮಾರ್ಗಸೂಚಿಯನ್ನು ರೂಪಿಸಿ. 2) ಯಾವ ಕ್ರಿಮಿನಲ್‌ಗಳ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆಯೋ ಅಂತಹವನ ಬಗೆಗೆ ಆರು ತಿಂಗಳೊಳಗಾಗಿ ನ್ಯಾಯಾಲಯ ತನ್ನ ತೀರ್ಪನ್ನು ನೀಡಬೇಕು. 3) ಯಾರ ಮೇಲೆ ಗುರುತರವಾದ ಕ್ರಿಮಿನಲ್ ಅಪರಾಧಗಳನ್ನು ಹೊರಿಸಲಾಗಿದೆಯೋ ಅಂತಹವರನ್ನು ಲೋಕಸಭೆ, ವಿಧಾನಸಭೆಗಳ ಸದಸ್ಯತ್ವದಿಂದ ತೆಗೆದುಹಾಕುವ ಕಾನೂನುಗಳನ್ನು ರಚಿಸಬೇಕು. 4) 1951ರ Representation of the Peopleನ ಸೆಕ್ಷನ್ 8(4)ನ್ನು (ಟ್ರಯಲ್ ನ್ಯಾಯಾಲಯದಲ್ಲಿ ತಪ್ಪಿತಸ್ಥ ಎಂಬ ತೀರ್ಪು ನೀಡಲಾಗಿದ್ದರೂ, ಅದರ ವಿರುದ್ಧ ತಪ್ಪಿತಸ್ಥ ಎಂಪಿ, ಎಂಎಲ್‌ಎ ಅಥವಾ ಎಂಎಲ್‌ಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೆ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ) ರಾಜ್ಯಾಂಗ ವಿರೋಧಿ ಎಂದು ಘೋಷಿಸಬೇಕು.

ಚುನಾವಣಾ ಕಮಿಷನ್ ಈ ನಾಲ್ಕು ಸಲಹೆಗಳನ್ನು ಒಪ್ಪಿಕೊಂಡಿತಾದರೂ ಕೇಂದ್ರ ಸರ್ಕಾರ ಇದಕ್ಕೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿತು. ಇದು policy matter ಆಗಿದ್ದೂ ಪಾರ್ಲಿಮೆಂಟ್‌ನಿಂದ ಕಾನೂನು ರಚನೆಯಾಗಬೇಕಾಗಿರುವುದರಿಂದ ಈ ಕುರಿತು ಸರ್ವೋಚ್ಚ ನ್ಯಾಯಾಲಯ ವಿಚಾರಣೆ ಮಾಡುವಂತಿಲ್ಲ ಎಂದು ಮನವಿ ಮಾಡಿತು. ಆದರೆ ಸರ್ವೋಚ್ಚ ನ್ಯಾಯಾಲಯ ಸರ್ಕಾರದ ಈ ವಾದವನ್ನು ತಳ್ಳಿಹಾಕಿ ಈ ವಿಚಾರದಲ್ಲಿ ಲಾಕಮಿಷನ್‌ನ ಶಿಫಾರಸ್ಸು ಏನೆಂದು ಕೇಳಿತು.

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ದಾರುಣವಾದ ಕ್ರಿಮಿನಲ್ ಕೇಸುಗಳಿದ್ದವು. ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಅವರ ವಿರುದ್ಧ ಇವೆ. ಇವರ ವಿರುದ್ಧದ ಖಟ್ಳೆಗಳು 7 ವರ್ಷಗಳಷ್ಟು ಹಳೆಯದಾದರೂ ಇನ್ನೂ ಕೋರ್ಟ್ ವಿಚಾರಣೆ ಮುಗಿದಿಲ್ಲ ಎಂದು ಲಾಕಮಿಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಈ ಕೇಸುಗಳು ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವುದಕ್ಕೆ ಸಂಬಂಧಪಟ್ಟವು.

9 ಎಂಪಿಗಳ ಕೇಸುಗಳು 20 ವರ್ಷದಷ್ಟು ಹಳೆಯವಾದರೂ ಇನ್ನೂ ವಿಚಾರಣೆ ಮುಗಿದಿಲ್ಲ. ಹಣದ ಪ್ರಭಾವ, ಅಧಿಕಾರ ಪ್ರಭಾವ ಈ ಕ್ಯಾನ್ಸರ್ ಹರಡುವುದರಲ್ಲಿ ಪ್ರಮುಖ ಪಾತ್ರ ವಹಿಸಿವೆ. ಅಷ್ಟೆ ಅಲ್ಲದೆ ಕೇಸನ್ನು ಮುಂದಕ್ಕೆ ತಳ್ಳಲು ಇದೇ ಪ್ರಭಾವವನ್ನು ಬಳಸಲಾಗಿದೆ. 1951ರ ರಾಜ್ಯಾಂಗದ RPI Actನ ಸೆಕ್ಷನ್ 8(4), ಬೆಂಕಿಗೆ ತುಪ್ಪ ಸುರಿದಂತೆ ನ್ಯಾಯದಾನಕ್ಕೆ ಅಡ್ಡಗಾಲು ಹಾಕಿದೆ. 2013 ರಲ್ಲಿ ಸರ್ವೋಚ್ಚ ನ್ಯಾಯಾಲಯ ಸೆಕ್ಷನ್ 8(4)ನ್ನು ರಾಜ್ಯಾಂಗ ವಿರೋಧಿ ಸೆಕ್ಷನ್ ಎಂದು ತೀರ್ಪಿತ್ತಿತು. ಆದರೆ ಪಾರ್ಲಿಮೆಂಟ್ ಇದುವರೆಗೆ ರಾಜ್ಯಾಂಗದಿಂದ ಈ ಸೆಕ್ಷನ್ ತೆಗೆದುಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ವೋಚ್ಚ ನ್ಯಾಯಾಲಯ ರಾಜ್ಯಾಂಗ ವಿರೋಧಿ ಎಂದು ಹೇಳಿ ಕೇಂದ್ರ ಸರ್ಕಾರ ಪಾರ್ಲಿಮೆಂಟಿನಲ್ಲಿ ಈ ವಿಷಯವನ್ನು ಮಂಡಿಸಿ ಆ ಸೆಕ್ಷನ್ ಕಿತ್ತು ಹಾಕಲು ಮೀನಾಮೇಷ ಎಣಿಸುತ್ತಿದೆ. ಹತ್ತಾರು ವರ್ಷಗಳ ಹಿಂದೆ ಕೋರ್ಟು ಆ ಸೆಕ್ಷನ್ನುಗಳನ್ನು ಕಿತ್ತು ಹಾಕಲು ಸರ್ಕಾರಕ್ಕೆ ತಿಳಿಸಿದ್ದರೂ ಈ ಕ್ರಿಮಿನಲ್ ಎಂಪಿಗಳನ್ನು ರಕ್ಷಿಸಿಕೊಂಡೇ ಬಂದಿದೆ.

ಆದ್ದರಿಂದ ಸರ್ವೋಚ್ಚ ನ್ಯಾಯಾಲಯ ಸರ್ಕಾರಕ್ಕೆ ಇಂತಿಷ್ಟು ತಿಂಗಳುಗಳಲ್ಲಿ ರಾಜ್ಯಾಂಗದಲ್ಲಿ ತಿದ್ದುಪಡಿ ತಂದು ಹಾಲಿ ಇರುವ ಕಳಂಕಿತ ಎಂಪಿ, ಎಂಎಲ್‌ಎಗಳನ್ನು ಹೊರದೂಡಬೇಕೆಂದೂ, ಕಳಂಕಿತ ಮಾಜಿ ಎಂಪಿಗಳು, ಎಂಎಲ್‌ಎಗಳ ಮೇಲೂ ಕ್ರಿಮಿನಲ್ ಕೇಸುಗಳನ್ನು ಹಾಕಬೇಕೆಂದೂ ಆಜ್ಞೆ ಮಾಡಬೇಕು. ಇಂತಹ ಒತ್ತಡ ನ್ಯಾಯಾಲಯದಿಂದ ಬರದಿದ್ದರೆ ಈ ಭಂಡಸರ್ಕಾರ ತನ್ನ ದುರ್ನೀತಿಯನ್ನು ಮುಂದುವರೆಸುತ್ತಲೇ ಹೋಗುತ್ತದೆ.


ಇದನ್ನೂ ಓದಿ: ಸರ್ಕಾರಿ ನೌಕರರ ರಾಜಕೀಯ ಒಲವಿನ ಬಗ್ಗೆ ಸರ್ಕಾರದ ನಿರ್ಬಂಧ ತಪ್ಪು: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...