Homeನೂರರ ನೋಟಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

ಕ್ರಿಮಿನಲ್ ಎಂಪಿ, ಎಂಎಲ್‌ಎಗಳ ವಿರುದ್ಧ ನ್ಯಾಯಾಲಯ ಸೆಟೆದು ನಿಲ್ಲಲಿ: ಎಚ್.ಎಸ್ ದೊರೆಸ್ವಾಮಿ

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಇವೆ.

- Advertisement -
- Advertisement -

2014 ರಲ್ಲಿ ಸರ್ವೋಚ್ಚ ನ್ಯಾಯಾಲಯ ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವ ಎಂಪಿಗಳು ಮತ್ತು ಎಂಎಲ್‌ಎಗಳ ಮೇಲೆ ಕೇಸುಗಳು ದಾಖಲಾದರೆ, ಅದರ ಚಾರ್ಜ್ ಶೀಟ್ ಹಾಕಿದ ನಂತರ, ವಿಚಾರಣೆಯನ್ನು ಒಂದು ವರ್ಷಗಳ ಒಳಗಾಗಿ ಪೂರೈಸಬೇಕೆಂದೂ, ಕೋರ್ಟ್ ಕಲಾಪಗಳನ್ನು ವಿಚಾರಣೆ ಮುಗಿಯುವವರೆಗೂ ಪ್ರತಿದಿನವೂ ನಡೆಸಬೇಕೆಂದು ಆಜ್ಞೆ ಮಾಡಿತು. ಈ ಆಜ್ಞೆ ದೂರಗಾಮಿ ಫಲವನ್ನು ನೀಡುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು. ಈ ಮೂಲಕ ರಾಜಕೀಯ ಪಕ್ಷಗಳು ಕ್ರಿಮಿನಲ್‌ಗಳನ್ನು ಉಮೇದುದಾರರನ್ನಾಗಿ ನಿಲ್ಲಿಸುವ ದುಷ್ಟನೀತಿ ತಪ್ಪೀತೆಂದು ನ್ಯಾಯಾಲಯ ಆಶಿಸಿತು. ಯಾರಿಗೆ ನಂಬರ್‌ಗೇಮ್‌ನಲ್ಲಿ ಆಸಕ್ತಿ ಇದೆಯೋ ಯಾರಿಗೆ ಅಧಿಕಾರ ಹಿಡಿಯುವುದರಲ್ಲಿ ಆಸಕ್ತಿ ಇದೆಯೋ ಅಂತಹವರು ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಡುವುದಕ್ಕೆ ಹಿಂಜರಿಯಬಹುದು.

ಈ ಕೇಸು ದಾಖಲಿಸಿದ್ದ ಎನ್‌ಜಿಒ ಸಂಸ್ಥೆ 4 ಬೇಡಿಕೆಗಳನ್ನಿಟ್ಟಿದ್ದವು. 1) ದಾರುಣವಾದ ಕ್ರಿಮಿನಲ್ ಅಪರಾಧಗಳನ್ನು ಎಸಗಿದ ಚಾರ್ಜ್‌ಗಳನ್ನು ಎದುರಿಸುತ್ತಿರುವವರು ಚುನಾವಣೆಗೆ ನಿಲ್ಲದಂತೆ ಮಾರ್ಗಸೂಚಿಯನ್ನು ರೂಪಿಸಿ. 2) ಯಾವ ಕ್ರಿಮಿನಲ್‌ಗಳ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆಯೋ ಅಂತಹವನ ಬಗೆಗೆ ಆರು ತಿಂಗಳೊಳಗಾಗಿ ನ್ಯಾಯಾಲಯ ತನ್ನ ತೀರ್ಪನ್ನು ನೀಡಬೇಕು. 3) ಯಾರ ಮೇಲೆ ಗುರುತರವಾದ ಕ್ರಿಮಿನಲ್ ಅಪರಾಧಗಳನ್ನು ಹೊರಿಸಲಾಗಿದೆಯೋ ಅಂತಹವರನ್ನು ಲೋಕಸಭೆ, ವಿಧಾನಸಭೆಗಳ ಸದಸ್ಯತ್ವದಿಂದ ತೆಗೆದುಹಾಕುವ ಕಾನೂನುಗಳನ್ನು ರಚಿಸಬೇಕು. 4) 1951ರ Representation of the Peopleನ ಸೆಕ್ಷನ್ 8(4)ನ್ನು (ಟ್ರಯಲ್ ನ್ಯಾಯಾಲಯದಲ್ಲಿ ತಪ್ಪಿತಸ್ಥ ಎಂಬ ತೀರ್ಪು ನೀಡಲಾಗಿದ್ದರೂ, ಅದರ ವಿರುದ್ಧ ತಪ್ಪಿತಸ್ಥ ಎಂಪಿ, ಎಂಎಲ್‌ಎ ಅಥವಾ ಎಂಎಲ್‌ಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೆ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ) ರಾಜ್ಯಾಂಗ ವಿರೋಧಿ ಎಂದು ಘೋಷಿಸಬೇಕು.

ಚುನಾವಣಾ ಕಮಿಷನ್ ಈ ನಾಲ್ಕು ಸಲಹೆಗಳನ್ನು ಒಪ್ಪಿಕೊಂಡಿತಾದರೂ ಕೇಂದ್ರ ಸರ್ಕಾರ ಇದಕ್ಕೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿತು. ಇದು policy matter ಆಗಿದ್ದೂ ಪಾರ್ಲಿಮೆಂಟ್‌ನಿಂದ ಕಾನೂನು ರಚನೆಯಾಗಬೇಕಾಗಿರುವುದರಿಂದ ಈ ಕುರಿತು ಸರ್ವೋಚ್ಚ ನ್ಯಾಯಾಲಯ ವಿಚಾರಣೆ ಮಾಡುವಂತಿಲ್ಲ ಎಂದು ಮನವಿ ಮಾಡಿತು. ಆದರೆ ಸರ್ವೋಚ್ಚ ನ್ಯಾಯಾಲಯ ಸರ್ಕಾರದ ಈ ವಾದವನ್ನು ತಳ್ಳಿಹಾಕಿ ಈ ವಿಚಾರದಲ್ಲಿ ಲಾಕಮಿಷನ್‌ನ ಶಿಫಾರಸ್ಸು ಏನೆಂದು ಕೇಳಿತು.

2009ರ ಲೋಕಸಭೆಯಲ್ಲಿ ಇದ್ದ 542 ಸದಸ್ಯರ ಪೈಕಿ 162 ಸದಸ್ಯರ ವಿರುದ್ಧ ದಾರುಣವಾದ ಕ್ರಿಮಿನಲ್ ಕೇಸುಗಳಿದ್ದವು. ಕೊಲೆ, ಕೊಲೆ ಪ್ರಯತ್ನ, ವ್ಯಕ್ತಿಗಳ ಅಪಹರಣ, ದರೋಡೆ ಮತ್ತು ಅತ್ಯಾಚಾರ ಕೇಸುಗಳು ಅವರ ವಿರುದ್ಧ ಇವೆ. ಇವರ ವಿರುದ್ಧದ ಖಟ್ಳೆಗಳು 7 ವರ್ಷಗಳಷ್ಟು ಹಳೆಯದಾದರೂ ಇನ್ನೂ ಕೋರ್ಟ್ ವಿಚಾರಣೆ ಮುಗಿದಿಲ್ಲ ಎಂದು ಲಾಕಮಿಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಈ ಕೇಸುಗಳು ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವುದಕ್ಕೆ ಸಂಬಂಧಪಟ್ಟವು.

9 ಎಂಪಿಗಳ ಕೇಸುಗಳು 20 ವರ್ಷದಷ್ಟು ಹಳೆಯವಾದರೂ ಇನ್ನೂ ವಿಚಾರಣೆ ಮುಗಿದಿಲ್ಲ. ಹಣದ ಪ್ರಭಾವ, ಅಧಿಕಾರ ಪ್ರಭಾವ ಈ ಕ್ಯಾನ್ಸರ್ ಹರಡುವುದರಲ್ಲಿ ಪ್ರಮುಖ ಪಾತ್ರ ವಹಿಸಿವೆ. ಅಷ್ಟೆ ಅಲ್ಲದೆ ಕೇಸನ್ನು ಮುಂದಕ್ಕೆ ತಳ್ಳಲು ಇದೇ ಪ್ರಭಾವವನ್ನು ಬಳಸಲಾಗಿದೆ. 1951ರ ರಾಜ್ಯಾಂಗದ RPI Actನ ಸೆಕ್ಷನ್ 8(4), ಬೆಂಕಿಗೆ ತುಪ್ಪ ಸುರಿದಂತೆ ನ್ಯಾಯದಾನಕ್ಕೆ ಅಡ್ಡಗಾಲು ಹಾಕಿದೆ. 2013 ರಲ್ಲಿ ಸರ್ವೋಚ್ಚ ನ್ಯಾಯಾಲಯ ಸೆಕ್ಷನ್ 8(4)ನ್ನು ರಾಜ್ಯಾಂಗ ವಿರೋಧಿ ಸೆಕ್ಷನ್ ಎಂದು ತೀರ್ಪಿತ್ತಿತು. ಆದರೆ ಪಾರ್ಲಿಮೆಂಟ್ ಇದುವರೆಗೆ ರಾಜ್ಯಾಂಗದಿಂದ ಈ ಸೆಕ್ಷನ್ ತೆಗೆದುಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ವೋಚ್ಚ ನ್ಯಾಯಾಲಯ ರಾಜ್ಯಾಂಗ ವಿರೋಧಿ ಎಂದು ಹೇಳಿ ಕೇಂದ್ರ ಸರ್ಕಾರ ಪಾರ್ಲಿಮೆಂಟಿನಲ್ಲಿ ಈ ವಿಷಯವನ್ನು ಮಂಡಿಸಿ ಆ ಸೆಕ್ಷನ್ ಕಿತ್ತು ಹಾಕಲು ಮೀನಾಮೇಷ ಎಣಿಸುತ್ತಿದೆ. ಹತ್ತಾರು ವರ್ಷಗಳ ಹಿಂದೆ ಕೋರ್ಟು ಆ ಸೆಕ್ಷನ್ನುಗಳನ್ನು ಕಿತ್ತು ಹಾಕಲು ಸರ್ಕಾರಕ್ಕೆ ತಿಳಿಸಿದ್ದರೂ ಈ ಕ್ರಿಮಿನಲ್ ಎಂಪಿಗಳನ್ನು ರಕ್ಷಿಸಿಕೊಂಡೇ ಬಂದಿದೆ.

ಆದ್ದರಿಂದ ಸರ್ವೋಚ್ಚ ನ್ಯಾಯಾಲಯ ಸರ್ಕಾರಕ್ಕೆ ಇಂತಿಷ್ಟು ತಿಂಗಳುಗಳಲ್ಲಿ ರಾಜ್ಯಾಂಗದಲ್ಲಿ ತಿದ್ದುಪಡಿ ತಂದು ಹಾಲಿ ಇರುವ ಕಳಂಕಿತ ಎಂಪಿ, ಎಂಎಲ್‌ಎಗಳನ್ನು ಹೊರದೂಡಬೇಕೆಂದೂ, ಕಳಂಕಿತ ಮಾಜಿ ಎಂಪಿಗಳು, ಎಂಎಲ್‌ಎಗಳ ಮೇಲೂ ಕ್ರಿಮಿನಲ್ ಕೇಸುಗಳನ್ನು ಹಾಕಬೇಕೆಂದೂ ಆಜ್ಞೆ ಮಾಡಬೇಕು. ಇಂತಹ ಒತ್ತಡ ನ್ಯಾಯಾಲಯದಿಂದ ಬರದಿದ್ದರೆ ಈ ಭಂಡಸರ್ಕಾರ ತನ್ನ ದುರ್ನೀತಿಯನ್ನು ಮುಂದುವರೆಸುತ್ತಲೇ ಹೋಗುತ್ತದೆ.


ಇದನ್ನೂ ಓದಿ: ಸರ್ಕಾರಿ ನೌಕರರ ರಾಜಕೀಯ ಒಲವಿನ ಬಗ್ಗೆ ಸರ್ಕಾರದ ನಿರ್ಬಂಧ ತಪ್ಪು: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...