Homeಕರ್ನಾಟಕಸೌಜನ್ಯ ಕೇಸ್: 'ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ': ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?

ಸೌಜನ್ಯ ಕೇಸ್: ‘ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ’: ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?

- Advertisement -
- Advertisement -

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸೋದರನ ಮಗ ನಿಶ್ಚಲ್ ಜೈನ್ ಮತ್ತು ಆತನ ಸ್ನೇಹಿತರ ಮೇಲೆ ಸೌಜನ್ಯ ಕುಟುಂಬ ಮೊದಲಿನಿಂದಲೂ ಶಂಕೆ ವ್ಯಕ್ತಪಡಿಸಿದ್ದು, ಈದೀಗ ಅವರನ್ನು ವಿಚಾರಣೆಗೆ ಒಳಪಡಿಸಲೇಬೇಕು ಎಂದು ಅನೇಕ ಪ್ರಗತಿಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಮತ್ತೊಂದೆಡೆ ವೀರೇಂದ್ರ ಹೆಗ್ಗಡೆ ಬೆದರಿಕೆಯ ದಾಟಿಯಲ್ಲಿ ಮಾತನಾಡಿದ್ದಾರೆ.

ಈ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದ ಬಳಿಕ ಸೌಜನ್ಯ ಕುಟುಂಬ ಶಂಕೆ ವ್ಯಕ್ತಪಡಿಸಿದವರನ್ನು ವಿಚಾರಣೆ ಮಾಡಬೇಕು ಎಂದು ಅನೇಕ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಇದೀಗ ಮೈಸೂರಿನ ಒಡನಾಡಿ ಸಂಸ್ಥೆ ಹೋರಾಟದ ನೇತೃತ್ವ ವಹಿಸಿಕೊಂಡಿದೆ.

ಈ ವರೆಗೂ ಮೌನವಾಗಿದ್ದ ವೀರೇಂದ್ರ ಹೆಗ್ಗಡೆ, ಇದೀಗ ಮೌನ ಮುರಿದಿದ್ದಾರೆ. ”ನಮ್ಮ ಅಭಿಮಾನಿಗಳು ಏನನ್ನಾದರೂ ಮಾಡಲು ಸಿದ್ದರಿದ್ದಾರೆ. ಅದನ್ನು ಬೇಡವೆಂದು ಹೇಳಿದ್ದೇವೆ” ಎಂದು ಬೆದರಿಕೆಯೊಡ್ಡುವ ಮಾತುಗಳನ್ನಾಡಿದ್ದಾರೆ.

”ಧರ್ಮಸ್ಥಳ ಕ್ಷೇತ್ರದ ಸಾಧನೆ ಕಂಡು ದ್ವೇಷ ಮಾಡುತ್ತಿರುವ ಕೆಲವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ನಮಗೆ ಯಾವುದೇ ಭಯವಿಲ್ಲ. ಸಿಬಿಐ ಸಹಿತ ಯಾವುದೇ ತನಿಖೆ ಮಾಡಿದರೂ ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

”ಕೆಲವರು ನಮ್ಮ ಮೌನವನ್ನೇ ದೌರ್ಬಲ್ಯವೆಂದು ಭಾವಿಸಿದ್ದಾರೆ. ಏನೇನೋ ಮಾತನಾಡುತ್ತಿದ್ಧಾರೆ. ನಾವು ಸುಮ್ಮನಿದ್ದೇವೆ ಎಂದರೆ ತಪ್ಪು ಮಾಡಿದ್ದೇವೆ ಎಂದರ್ಥವಲ್ಲ. ಚರ್ಚೆಗೆ ಅವಕಾಶ ಮಾಡಿಕೊಟ್ಟು ಅನಾಹುತಕ್ಕೆ ದಾರಿ ಮಾಡಿಕೊಡಬಾರದು ಎಂಬುದು ನಮ್ಮ ಉದ್ದೇಶ” ಎಂದಿದ್ದಾರೆ.

”ಈಗ ಕೆಲವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ಈ ವಿಚಾರದಲ್ಲಿ ತನಿಖೆ ಮಾಡಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಅವರು ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

11ವರ್ಷಗಳ ಹಿಂದೆ ಅಂದರೆ 2012ರ ಅಕ್ಟೋಬರ್ 9ರಂದು ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಳನನ್ನು ಅಪಹರಿಸಿ, ಅತ್ಯಾಚಾರಗೈದು, ಕೊಲೆ ಮಾಡಲಾಗಿತ್ತು. ಇದು ರಾಜ್ಯಾದ್ಯಾಂತ ಭಾರೀ ಸದ್ದು ಮಾಡಿತ್ತು.

ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದಾಗ ಅಮಾಯಕ ಸಂತೋಷ್‌ ರಾವ್‌ನನ್ನು ಬಂಧಿಸಿದ್ದರು. ಆಬಳಿಕ ಅವನಿಗೆ ತಾನೇ ಕೃತ್ಯ ಎಸಗಿದ್ದೇನೆಂದು ಒಪ್ಪಿಕೊಳ್ಳುವಂತೆ ದೌರ್ಜನ್ಯ ಮಾಡಲಾಗಿತ್ತು. 2013ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಂತೋಷ್‌ ರಾವ್ ಸುತ್ತಲೇ ತನಿಖೆ ನಡೆಸಿದ ಸಿಬಿಐ, ಆತ ಕೃತ್ಯ ಎಸಗಿದ್ದಾನೆ ಎಂಬುದನ್ನು ಸಾಬೀತು ಮಾಡುವಲ್ಲಿ ವಿಫಲವಾಯಿತು.

ಇತ್ತೀಚೆಗೆ ಸಿಬಿಐ ಕೋರ್ಟ್‌ ಆಮಾಯಕ ಸಂತೋಷ್‌ನನ್ನು ನಿರ್ದೋಷಿ ಎಂದು ತೀರ್ಪು ನೀಡಿತು. ಇದೀಗ, ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ರಾಜ್ಯದ ಕೆಲವಡೆ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...