Homeಕರ್ನಾಟಕಸೌಜನ್ಯ ಕೇಸ್: 'ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ': ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?

ಸೌಜನ್ಯ ಕೇಸ್: ‘ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ’: ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?

- Advertisement -
- Advertisement -

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸೋದರನ ಮಗ ನಿಶ್ಚಲ್ ಜೈನ್ ಮತ್ತು ಆತನ ಸ್ನೇಹಿತರ ಮೇಲೆ ಸೌಜನ್ಯ ಕುಟುಂಬ ಮೊದಲಿನಿಂದಲೂ ಶಂಕೆ ವ್ಯಕ್ತಪಡಿಸಿದ್ದು, ಈದೀಗ ಅವರನ್ನು ವಿಚಾರಣೆಗೆ ಒಳಪಡಿಸಲೇಬೇಕು ಎಂದು ಅನೇಕ ಪ್ರಗತಿಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಮತ್ತೊಂದೆಡೆ ವೀರೇಂದ್ರ ಹೆಗ್ಗಡೆ ಬೆದರಿಕೆಯ ದಾಟಿಯಲ್ಲಿ ಮಾತನಾಡಿದ್ದಾರೆ.

ಈ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದ ಬಳಿಕ ಸೌಜನ್ಯ ಕುಟುಂಬ ಶಂಕೆ ವ್ಯಕ್ತಪಡಿಸಿದವರನ್ನು ವಿಚಾರಣೆ ಮಾಡಬೇಕು ಎಂದು ಅನೇಕ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಇದೀಗ ಮೈಸೂರಿನ ಒಡನಾಡಿ ಸಂಸ್ಥೆ ಹೋರಾಟದ ನೇತೃತ್ವ ವಹಿಸಿಕೊಂಡಿದೆ.

ಈ ವರೆಗೂ ಮೌನವಾಗಿದ್ದ ವೀರೇಂದ್ರ ಹೆಗ್ಗಡೆ, ಇದೀಗ ಮೌನ ಮುರಿದಿದ್ದಾರೆ. ”ನಮ್ಮ ಅಭಿಮಾನಿಗಳು ಏನನ್ನಾದರೂ ಮಾಡಲು ಸಿದ್ದರಿದ್ದಾರೆ. ಅದನ್ನು ಬೇಡವೆಂದು ಹೇಳಿದ್ದೇವೆ” ಎಂದು ಬೆದರಿಕೆಯೊಡ್ಡುವ ಮಾತುಗಳನ್ನಾಡಿದ್ದಾರೆ.

”ಧರ್ಮಸ್ಥಳ ಕ್ಷೇತ್ರದ ಸಾಧನೆ ಕಂಡು ದ್ವೇಷ ಮಾಡುತ್ತಿರುವ ಕೆಲವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ನಮಗೆ ಯಾವುದೇ ಭಯವಿಲ್ಲ. ಸಿಬಿಐ ಸಹಿತ ಯಾವುದೇ ತನಿಖೆ ಮಾಡಿದರೂ ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

”ಕೆಲವರು ನಮ್ಮ ಮೌನವನ್ನೇ ದೌರ್ಬಲ್ಯವೆಂದು ಭಾವಿಸಿದ್ದಾರೆ. ಏನೇನೋ ಮಾತನಾಡುತ್ತಿದ್ಧಾರೆ. ನಾವು ಸುಮ್ಮನಿದ್ದೇವೆ ಎಂದರೆ ತಪ್ಪು ಮಾಡಿದ್ದೇವೆ ಎಂದರ್ಥವಲ್ಲ. ಚರ್ಚೆಗೆ ಅವಕಾಶ ಮಾಡಿಕೊಟ್ಟು ಅನಾಹುತಕ್ಕೆ ದಾರಿ ಮಾಡಿಕೊಡಬಾರದು ಎಂಬುದು ನಮ್ಮ ಉದ್ದೇಶ” ಎಂದಿದ್ದಾರೆ.

”ಈಗ ಕೆಲವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ಈ ವಿಚಾರದಲ್ಲಿ ತನಿಖೆ ಮಾಡಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಅವರು ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

11ವರ್ಷಗಳ ಹಿಂದೆ ಅಂದರೆ 2012ರ ಅಕ್ಟೋಬರ್ 9ರಂದು ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಳನನ್ನು ಅಪಹರಿಸಿ, ಅತ್ಯಾಚಾರಗೈದು, ಕೊಲೆ ಮಾಡಲಾಗಿತ್ತು. ಇದು ರಾಜ್ಯಾದ್ಯಾಂತ ಭಾರೀ ಸದ್ದು ಮಾಡಿತ್ತು.

ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದಾಗ ಅಮಾಯಕ ಸಂತೋಷ್‌ ರಾವ್‌ನನ್ನು ಬಂಧಿಸಿದ್ದರು. ಆಬಳಿಕ ಅವನಿಗೆ ತಾನೇ ಕೃತ್ಯ ಎಸಗಿದ್ದೇನೆಂದು ಒಪ್ಪಿಕೊಳ್ಳುವಂತೆ ದೌರ್ಜನ್ಯ ಮಾಡಲಾಗಿತ್ತು. 2013ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಂತೋಷ್‌ ರಾವ್ ಸುತ್ತಲೇ ತನಿಖೆ ನಡೆಸಿದ ಸಿಬಿಐ, ಆತ ಕೃತ್ಯ ಎಸಗಿದ್ದಾನೆ ಎಂಬುದನ್ನು ಸಾಬೀತು ಮಾಡುವಲ್ಲಿ ವಿಫಲವಾಯಿತು.

ಇತ್ತೀಚೆಗೆ ಸಿಬಿಐ ಕೋರ್ಟ್‌ ಆಮಾಯಕ ಸಂತೋಷ್‌ನನ್ನು ನಿರ್ದೋಷಿ ಎಂದು ತೀರ್ಪು ನೀಡಿತು. ಇದೀಗ, ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ರಾಜ್ಯದ ಕೆಲವಡೆ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...