Homeಕರ್ನಾಟಕಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

ಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

- Advertisement -
- Advertisement -

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು SITತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಶುಕ್ರವಾರ (ಜು.28) ಬೆಳಿಗ್ಗೆ11ರಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಕರೆ ಕೊಟ್ಟಿದೆ.

ಈ ಕುರಿತು ಸಮಿತಿಯು ಪ್ರಕಟಣೆ ಹೊರಡಿಸಿದ್ದು, ”2012ರ ಆಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಂಗಳದ ವಿದ್ಯಾರ್ಥಿನಿ ಸೌಜನ್ಯ ಎಂಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಂತ ಘೋರವಾದ ಅತ್ಯಾಚಾರವನ್ನು ನಡೆಸಿ, ಆಕೆಯನ್ನು ಕೊಲೆ ಮಾಡಲಾಗಿತ್ತು, ಅದನ್ನು ಮುಚ್ಚಿ ಹಾಕಲು ಯತ್ನಿಸಿದ ಶಕ್ತಿಗಳ ವಿರುದ್ಧ ಬೆಳ್ತಂಗಡಿ, ಮಂಗಳೂರು ಹಾಗೂ ಬೆಂಗಳೂರು ಸೇರಿದಂತೆ ಇಡೀ ರಾಜ್ಯಾದ್ಯಂತ ನಡೆಸಿದ ನಿರಂತರ ಹೋರಾಟ ಹಾಗೂ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಹತ್ತು ದಿನ ನಡೆಸಿದ ಅನಿರ್ದಿಷ್ಟಾವಧಿ ಹೋರಾಟಗಳ ಫಲವಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು” ಎಂದು ತಿಳಿಸಿದೆ.

”ಈ ಪ್ರಕರಣದ ಕುರಿತು 11 ವರ್ಷಗಳ ಕಾಲ ದೀರ್ಘ ತನಿಖೆ ನಡೆಸಿದ ಸಿ.ಬಿ.ಐನ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿ ಎಂದು ಗುರುತಿಸಲಾಗಿದ್ದ ಸಂತೋಷ್ ರಾವ್‌ರನ್ನು ದೋಷಮುಕ್ತಗೊಳಿಸಿ, ಈ ತನಿಖೆಯು ಲೋಪ-ದೋಷಗಳಿಂದ ಕೂಡಿದ್ದು, ಆ ಕಾರಣದಿಂದ ಈ ಪ್ರಕರಣವು ಮುಂದುವರಿದೆ ತನಿಖೆಗೆ ಅರ್ಹ ಪ್ರಕರಣವಾಗಿದೆ ಎಂದೂ ಹೇಳಿದ ಸಿಬಿಐ ತನಿಖೆಯ ಲೋಪಗಳನ್ನು ಪಟ್ಟಿ ಮಾಡಿರುವ ವಿಶೇಷ ನ್ಯಾಯಾಲಯವು ‘ಸಿಬಿಐನ ತನಿಖೆಯು ಸರಿಯಾದ ದಿಕ್ಕಿನಲ್ಲಿ ನಡೆದಿಲ್ಲ’ ಎಂದು ಬೊಟ್ಟು ಮಾಡಿದೆ, ಮತ್ತು ನಿರ್ದೋ ಸಂತೋಷ್ ರಾವ್ ಅವರಿಗೆ ಕಾನೂನು ಪರಿಹಾರ ನೀಡಬೇಕೆಂದು ಆದೇಶಿಸಿದೆ” ಎಂದು ಹೇಳಿದೆ.

ಸೌಜನ್ಯಳ ಮೇಲೆ ನಡೆದದ್ದು “ಅತ್ಯಂತ ಕ್ರೂರ ಅತ್ಯಾಚಾರ ಮತ್ತು ಕೊಲೆ” ಎಂದು ಪರಿಗಣಿಸಿದ್ದ ವಿಶೇಷ ನ್ಯಾಯಾಲಯವು ಇದನ್ನು ಆದ್ಯತೆಯಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರಂಭದಲ್ಲಿಯೇ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶಿಸಿತ್ತು. ಆದರೆ, ಈ ವಿಶೇಷ ನ್ಯಾಯಾಲಯದ ನಿರ್ದೇಶನವನ್ನು ನಿರ್ಲಕ್ಷಿಸಿದ ಸಿ.ಬಿ.ಐ. ರಾಜಕೀಯ ಪ್ರಭಾವದಿಂದ ತನಿಖೆ ನಡೆಸಿ ನಿಜವಾದ ತಪ್ಪಿತಸ್ಥರನ್ನು ರಕ್ಷಿಸಿ ನಿರಪರಾಧಿಯೊಬ್ಬರನ್ನು ಬಲಿ ಹಾಕಿದ್ದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಸೌಜನ್ಯ ಪ್ರಕರಣ: ವೀರೇಂದ್ರ ಹೆಗ್ಗಡೆ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಜನಪರ ಸಂಘಟನೆಗಳು ಆರಂಭದಿಂದಲೂ ಎತ್ತಿತೋರಿಸಿರುವ ಲೋಪಗಳು ಹೀಗಿವೆ:

1) ತನಿಖೆ ನಡೆಯಬೇಕಿದ್ದ ಸುವರ್ಣಾವಧಿಯಲ್ಲಿ ಸರಿಯಾದ ತನಿಖೆ ನಡೆದಿಲ್ಲ.

2) ಮರಣೋತ್ತರ ಪರೀಕ್ಷೆಯನ್ನು ಅವೈಜ್ಞಾನಿಕವಾಗಿ ಮತ್ತು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು ಕಂಡುಬಂದಿರುತ್ತದೆ. ಅದರಲ್ಲೂ ಬೆಳ್ತಂಗಡಿಯ ಸರ್ಕಾರಿ ಆಸತ್ರೆಯಲ್ಲಿ ಅಗತ್ಯ ಬೆಳಕು ಇಲ್ಲದ ವಾತಾವರಣದಲ್ಲಿ ಮಾಡಿರುವುದನ್ನೂ ಪ್ರಶ್ನಿಸಲಾಗಿಲ್ಲ.

3) ಅತ್ಯಾಚಾರ ನಡೆದ ಸ್ಥಳದಲ್ಲಿ ಬೆರಳು ಮತ್ತು ಹೆಜ್ಜೆ ಗುರುತುಗಳನ್ನು ಸಂಗ್ರಹಿಸಿಲ್ಲ.

4) ನಗ್ನ ಸ್ಥಿತಿಯಲ್ಲಿದ್ದ ಸೌಜನ್ಯ ಹಾಕಿಕೊಂಡಿದ್ದ ಬಟ್ಟೆಗಳು ಸಿಗದ ಕಾರಣ ಸ್ಥಳೀಯ ಪೊಲೀಸರು ಸೌಜನ್ಯಾ ಮನೆಯಿಂದ ಬಟ್ಟೆ ಸಂಗ್ರಹಿಸಿ ಸಾಕ್ಷ್ಯವೆಂದು ತೋರಿಸಲಾಗಿದೆ.

5) ಸೌಜನ್ಯಾಳ ಖಾಸಗಿ ಅಂಗಕ್ಕೆ ಮಣ್ಣು ತುಂಬಿಸಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿರುವುದು, ಮಣ್ಣಿನ DNA ಪರೀಕ್ಷೆ ಆಗಬೇಕು.

6) ಸೌಜನ್ಯಳ ಗೆಳತಿಯನ್ನು ವಿಚಾರಣೆ ಮಾಡದಿರುವುದು.

7) ಒಬ್ಬನೇ ವ್ಯಕ್ತಿ ಈ ಕೃತ್ಯವನ್ನು ನಡೆಸಲಾಗದು ಎಂಬ ಅಂಶವನ್ನು ಕಡೆಗಣಿಸಿರುವುದು.

8) ಸ್ಥಳೀಯ ಸಾಕ್ಷಿಗಳು ಹೇಳಿದ ವ್ಯಕ್ತಿಗಳನ್ನು ಗಂಭೀರ ವಿಚಾರಣೆಗೆ ಒಳಪಡಿಸದೇ ಮಾನಸಿಕ ಚಿಕಿತ್ಸೆಯಲ್ಲಿದ್ದ ಸಂತೋಷ್ ರಾವ್‌ಗೆ ಇಡೀ ತನಿಖೆಯನ್ನು ಕೇಂದ್ರೀಕರಿಸಿರುವುದು.

9) ಘಟನೆ ನಡೆದ ದಿನ ಮತ್ತು ಸ್ಥಳದಲ್ಲಿ ಸಂತೋಷ್ ರಾವ್ ಇದ್ದುದನ್ನು ನೋಡಿದ ಯಾವುದೇ ಸಾಕ್ಷ್ಯಗಳು ಸಿಗದಿರುವುದು.

10) ಸಂತೋಷ್ ರಾವ್ ವಿರುದ್ಧ ಮಾಡಲಾದ ಚಾರ್ಜ್ ಶೀಟ್‌ನ ಆರೋಪಗಳನ್ನು ಸಾಬೀತು ಮಾಡಲಾಗದೆ ವಿಫಲವಾಗಿರುವುದು..

11) ವಿಡಿಯೋ ಮಾಡುವ ನಿಪುಣತೆ ಇಲ್ಲದ ಪೊಲೀಸ್ ಸಿಬ್ಬಂದಿಯನ್ನು ವಿಡಿಯೋ ಮಾಡಲು ನಿಯೋಜಿಸಿರುವುದು

12) ಪ್ರಮುಖ ಸಾಕ್ಷಿಯಾಗಿದ್ದ ಧರ್ಮಸ್ಥಳದ ಬಾಡ್‌ನ ರೂಮ್ ಬಾಂಡ್ ರವಿಪೂಜಾರಿಯ ಆತ್ಮಹತ್ಯೆಯನ್ನೂ ಹಾಗೂ ಮತ್ತೊಬ್ಬ ಸಾಕ್ಷಿ ರೂಮ್ ಬಾಯ್ ಗೋಪಾಲಕೃಷ್ಣಗೌಡರ ಅಸಹಜ ಸಾವನ್ನು ಪರಿಗಣಿಸದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತದೆ.

13) ನೇಚರ್ ಕ್ಯೂರ್ ಸೆಂಟರ್‌ನ ಸಿಸಿ ಕ್ಯಾಮೆರಾದ ರೆಕಾಡಿರ್ಂಗ್‌ಗಳನ್ನು ಉದ್ದೇಶಪೂರ್ವಕವಾಗಿ ಸೆಕ್ಯೂರ್ ಮಾಡದಿರುವುದು ಸಂಶಯಕ್ಕೆ ಎಡೆ ಮಾಡಿಕೊಡುತ್ತದೆ. ಹೀಗೆ. ಆರಂಭದ ಸ್ಥಳೀಯ ಪೊಲೀಸರ ತನಿಖೆ, ನಂತರ ರಾಜ್ಯದ ಸಿಐಡಿ ತನಿಖೆ, ಅನಂತರದ ಸಿಬಿಐ ತನಿಖೆಯೂ ಸೇರಿ ಈ 11 ವರ್ಷಗಳ ಕಾಲಾವಧಿಯಲ್ಲಿ ನಡೆದ ಎಲ್ಲ ತನಿಖೆಗಳು ತಪ್ಪಿತಸ್ಥರನ್ನು ರಕ್ಷಿಸುವ ಕೊಡೆಯ ಅಡಿಯಲ್ಲೇ ನಡೆದಂತಿವೆ.

ಹಾಗಾದರೆ, ಆತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರು?

ನಿಜವಾದ ಅತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಪತ್ತೆ ಮಾಡಿ ಶಿಕ್ಷಿಸಬೇಕೆಂದು ಆಗ್ರಹಿಸಿ ನಾವಿಂದು ಮತ್ತೆ ಹೋರಾಟಕ್ಕೆ ಇಳಿದಿದ್ದೇವೆ ಎಂದು ಹೋರಾಟ ಸಮಿತಿ ಹೇಳಿದೆ.

1 ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ SIT ತನಿಖೆ ಆಗಬೇಕು. ವಿಶೇಷ ನ್ಯಾಯಾಲಯವು ಗುರುತಿಸಿರುವ ಲೋಪಗಳ ಆಧಾರದಲ್ಲಿ ತನಿಖೆ ನಡೆಯಬೇಕು, ಅದಕ್ಕಾಗಿ ವಿಶೇಷ ತನಿಖಾ ದಳವನ್ನು ರಚನೆ ಮಾಡಬೇಕು. ವಿಶೇಷ ನ್ಯಾಯಾಲಯವು ಗುರುತಿಸಿರುವಂತೆ ಮೂಲ ತನಿಖೆ ನಡೆಸಿದ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ತನಿಖೆಯ ದಿಕ್ಕು ತಪ್ಪಿಸಿದ ಕಾಣದ ಕೈಗಳನ್ನು ಸಹ ಆರೋಪಿಗಳೆಂದು ಪರಿಗಣಿಸಬೇಕು.

2. ಈ ಪ್ರಕರಣಕ್ಕೂ ಹಿಂದೆ ಧರ್ಮಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿರುವ ಸರಿಸುಮಾರು 462 ಆಸಹಜ ಸಾವಿನ ಪ್ರಕರಣಗಳ ಕುರಿತೂ ಸಮಗ್ರ ತನಿಖೆಗೆ ಆದೇಶಿಸಬೇಕು. ಆ ಮೂಲಕ ಅಸಹಾಯಕ ಜನರ ಅಸಹಜ ಸಾವಿಗೆ ಸರಣಿಗೆ ಕೊನೆ ಹಾಕಬೇಕು,

3. ಇದರಲ್ಲಿ ಸುಮಾರು 90 ಸಾವುಗಳು ಮಹಿಳೆಯರು ಮತ್ತು ಮಕ್ಕಳದಾಗಿವೆ ಎನ್ನುವುದು ಗಮನಾರ್ಹ. ಹಾಗಾಗಿ ರಾಜ್ಯ ಮಹಿಳಾ ಆಯೋಗ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಗಳೂ ಈ ಬಗ್ಗೆ ತುರ್ತು ಗಮನ ಹರಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...