Homeಕರ್ನಾಟಕಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

ಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

- Advertisement -
- Advertisement -

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು SITತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಶುಕ್ರವಾರ (ಜು.28) ಬೆಳಿಗ್ಗೆ11ರಂದು ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಕರೆ ಕೊಟ್ಟಿದೆ.

ಈ ಕುರಿತು ಸಮಿತಿಯು ಪ್ರಕಟಣೆ ಹೊರಡಿಸಿದ್ದು, ”2012ರ ಆಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಂಗಳದ ವಿದ್ಯಾರ್ಥಿನಿ ಸೌಜನ್ಯ ಎಂಬ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಂತ ಘೋರವಾದ ಅತ್ಯಾಚಾರವನ್ನು ನಡೆಸಿ, ಆಕೆಯನ್ನು ಕೊಲೆ ಮಾಡಲಾಗಿತ್ತು, ಅದನ್ನು ಮುಚ್ಚಿ ಹಾಕಲು ಯತ್ನಿಸಿದ ಶಕ್ತಿಗಳ ವಿರುದ್ಧ ಬೆಳ್ತಂಗಡಿ, ಮಂಗಳೂರು ಹಾಗೂ ಬೆಂಗಳೂರು ಸೇರಿದಂತೆ ಇಡೀ ರಾಜ್ಯಾದ್ಯಂತ ನಡೆಸಿದ ನಿರಂತರ ಹೋರಾಟ ಹಾಗೂ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಹತ್ತು ದಿನ ನಡೆಸಿದ ಅನಿರ್ದಿಷ್ಟಾವಧಿ ಹೋರಾಟಗಳ ಫಲವಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು” ಎಂದು ತಿಳಿಸಿದೆ.

”ಈ ಪ್ರಕರಣದ ಕುರಿತು 11 ವರ್ಷಗಳ ಕಾಲ ದೀರ್ಘ ತನಿಖೆ ನಡೆಸಿದ ಸಿ.ಬಿ.ಐನ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿ ಎಂದು ಗುರುತಿಸಲಾಗಿದ್ದ ಸಂತೋಷ್ ರಾವ್‌ರನ್ನು ದೋಷಮುಕ್ತಗೊಳಿಸಿ, ಈ ತನಿಖೆಯು ಲೋಪ-ದೋಷಗಳಿಂದ ಕೂಡಿದ್ದು, ಆ ಕಾರಣದಿಂದ ಈ ಪ್ರಕರಣವು ಮುಂದುವರಿದೆ ತನಿಖೆಗೆ ಅರ್ಹ ಪ್ರಕರಣವಾಗಿದೆ ಎಂದೂ ಹೇಳಿದ ಸಿಬಿಐ ತನಿಖೆಯ ಲೋಪಗಳನ್ನು ಪಟ್ಟಿ ಮಾಡಿರುವ ವಿಶೇಷ ನ್ಯಾಯಾಲಯವು ‘ಸಿಬಿಐನ ತನಿಖೆಯು ಸರಿಯಾದ ದಿಕ್ಕಿನಲ್ಲಿ ನಡೆದಿಲ್ಲ’ ಎಂದು ಬೊಟ್ಟು ಮಾಡಿದೆ, ಮತ್ತು ನಿರ್ದೋ ಸಂತೋಷ್ ರಾವ್ ಅವರಿಗೆ ಕಾನೂನು ಪರಿಹಾರ ನೀಡಬೇಕೆಂದು ಆದೇಶಿಸಿದೆ” ಎಂದು ಹೇಳಿದೆ.

ಸೌಜನ್ಯಳ ಮೇಲೆ ನಡೆದದ್ದು “ಅತ್ಯಂತ ಕ್ರೂರ ಅತ್ಯಾಚಾರ ಮತ್ತು ಕೊಲೆ” ಎಂದು ಪರಿಗಣಿಸಿದ್ದ ವಿಶೇಷ ನ್ಯಾಯಾಲಯವು ಇದನ್ನು ಆದ್ಯತೆಯಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರಂಭದಲ್ಲಿಯೇ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶಿಸಿತ್ತು. ಆದರೆ, ಈ ವಿಶೇಷ ನ್ಯಾಯಾಲಯದ ನಿರ್ದೇಶನವನ್ನು ನಿರ್ಲಕ್ಷಿಸಿದ ಸಿ.ಬಿ.ಐ. ರಾಜಕೀಯ ಪ್ರಭಾವದಿಂದ ತನಿಖೆ ನಡೆಸಿ ನಿಜವಾದ ತಪ್ಪಿತಸ್ಥರನ್ನು ರಕ್ಷಿಸಿ ನಿರಪರಾಧಿಯೊಬ್ಬರನ್ನು ಬಲಿ ಹಾಕಿದ್ದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಸೌಜನ್ಯ ಪ್ರಕರಣ: ವೀರೇಂದ್ರ ಹೆಗ್ಗಡೆ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಜನಪರ ಸಂಘಟನೆಗಳು ಆರಂಭದಿಂದಲೂ ಎತ್ತಿತೋರಿಸಿರುವ ಲೋಪಗಳು ಹೀಗಿವೆ:

1) ತನಿಖೆ ನಡೆಯಬೇಕಿದ್ದ ಸುವರ್ಣಾವಧಿಯಲ್ಲಿ ಸರಿಯಾದ ತನಿಖೆ ನಡೆದಿಲ್ಲ.

2) ಮರಣೋತ್ತರ ಪರೀಕ್ಷೆಯನ್ನು ಅವೈಜ್ಞಾನಿಕವಾಗಿ ಮತ್ತು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು ಕಂಡುಬಂದಿರುತ್ತದೆ. ಅದರಲ್ಲೂ ಬೆಳ್ತಂಗಡಿಯ ಸರ್ಕಾರಿ ಆಸತ್ರೆಯಲ್ಲಿ ಅಗತ್ಯ ಬೆಳಕು ಇಲ್ಲದ ವಾತಾವರಣದಲ್ಲಿ ಮಾಡಿರುವುದನ್ನೂ ಪ್ರಶ್ನಿಸಲಾಗಿಲ್ಲ.

3) ಅತ್ಯಾಚಾರ ನಡೆದ ಸ್ಥಳದಲ್ಲಿ ಬೆರಳು ಮತ್ತು ಹೆಜ್ಜೆ ಗುರುತುಗಳನ್ನು ಸಂಗ್ರಹಿಸಿಲ್ಲ.

4) ನಗ್ನ ಸ್ಥಿತಿಯಲ್ಲಿದ್ದ ಸೌಜನ್ಯ ಹಾಕಿಕೊಂಡಿದ್ದ ಬಟ್ಟೆಗಳು ಸಿಗದ ಕಾರಣ ಸ್ಥಳೀಯ ಪೊಲೀಸರು ಸೌಜನ್ಯಾ ಮನೆಯಿಂದ ಬಟ್ಟೆ ಸಂಗ್ರಹಿಸಿ ಸಾಕ್ಷ್ಯವೆಂದು ತೋರಿಸಲಾಗಿದೆ.

5) ಸೌಜನ್ಯಾಳ ಖಾಸಗಿ ಅಂಗಕ್ಕೆ ಮಣ್ಣು ತುಂಬಿಸಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿರುವುದು, ಮಣ್ಣಿನ DNA ಪರೀಕ್ಷೆ ಆಗಬೇಕು.

6) ಸೌಜನ್ಯಳ ಗೆಳತಿಯನ್ನು ವಿಚಾರಣೆ ಮಾಡದಿರುವುದು.

7) ಒಬ್ಬನೇ ವ್ಯಕ್ತಿ ಈ ಕೃತ್ಯವನ್ನು ನಡೆಸಲಾಗದು ಎಂಬ ಅಂಶವನ್ನು ಕಡೆಗಣಿಸಿರುವುದು.

8) ಸ್ಥಳೀಯ ಸಾಕ್ಷಿಗಳು ಹೇಳಿದ ವ್ಯಕ್ತಿಗಳನ್ನು ಗಂಭೀರ ವಿಚಾರಣೆಗೆ ಒಳಪಡಿಸದೇ ಮಾನಸಿಕ ಚಿಕಿತ್ಸೆಯಲ್ಲಿದ್ದ ಸಂತೋಷ್ ರಾವ್‌ಗೆ ಇಡೀ ತನಿಖೆಯನ್ನು ಕೇಂದ್ರೀಕರಿಸಿರುವುದು.

9) ಘಟನೆ ನಡೆದ ದಿನ ಮತ್ತು ಸ್ಥಳದಲ್ಲಿ ಸಂತೋಷ್ ರಾವ್ ಇದ್ದುದನ್ನು ನೋಡಿದ ಯಾವುದೇ ಸಾಕ್ಷ್ಯಗಳು ಸಿಗದಿರುವುದು.

10) ಸಂತೋಷ್ ರಾವ್ ವಿರುದ್ಧ ಮಾಡಲಾದ ಚಾರ್ಜ್ ಶೀಟ್‌ನ ಆರೋಪಗಳನ್ನು ಸಾಬೀತು ಮಾಡಲಾಗದೆ ವಿಫಲವಾಗಿರುವುದು..

11) ವಿಡಿಯೋ ಮಾಡುವ ನಿಪುಣತೆ ಇಲ್ಲದ ಪೊಲೀಸ್ ಸಿಬ್ಬಂದಿಯನ್ನು ವಿಡಿಯೋ ಮಾಡಲು ನಿಯೋಜಿಸಿರುವುದು

12) ಪ್ರಮುಖ ಸಾಕ್ಷಿಯಾಗಿದ್ದ ಧರ್ಮಸ್ಥಳದ ಬಾಡ್‌ನ ರೂಮ್ ಬಾಂಡ್ ರವಿಪೂಜಾರಿಯ ಆತ್ಮಹತ್ಯೆಯನ್ನೂ ಹಾಗೂ ಮತ್ತೊಬ್ಬ ಸಾಕ್ಷಿ ರೂಮ್ ಬಾಯ್ ಗೋಪಾಲಕೃಷ್ಣಗೌಡರ ಅಸಹಜ ಸಾವನ್ನು ಪರಿಗಣಿಸದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತದೆ.

13) ನೇಚರ್ ಕ್ಯೂರ್ ಸೆಂಟರ್‌ನ ಸಿಸಿ ಕ್ಯಾಮೆರಾದ ರೆಕಾಡಿರ್ಂಗ್‌ಗಳನ್ನು ಉದ್ದೇಶಪೂರ್ವಕವಾಗಿ ಸೆಕ್ಯೂರ್ ಮಾಡದಿರುವುದು ಸಂಶಯಕ್ಕೆ ಎಡೆ ಮಾಡಿಕೊಡುತ್ತದೆ. ಹೀಗೆ. ಆರಂಭದ ಸ್ಥಳೀಯ ಪೊಲೀಸರ ತನಿಖೆ, ನಂತರ ರಾಜ್ಯದ ಸಿಐಡಿ ತನಿಖೆ, ಅನಂತರದ ಸಿಬಿಐ ತನಿಖೆಯೂ ಸೇರಿ ಈ 11 ವರ್ಷಗಳ ಕಾಲಾವಧಿಯಲ್ಲಿ ನಡೆದ ಎಲ್ಲ ತನಿಖೆಗಳು ತಪ್ಪಿತಸ್ಥರನ್ನು ರಕ್ಷಿಸುವ ಕೊಡೆಯ ಅಡಿಯಲ್ಲೇ ನಡೆದಂತಿವೆ.

ಹಾಗಾದರೆ, ಆತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರು?

ನಿಜವಾದ ಅತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಪತ್ತೆ ಮಾಡಿ ಶಿಕ್ಷಿಸಬೇಕೆಂದು ಆಗ್ರಹಿಸಿ ನಾವಿಂದು ಮತ್ತೆ ಹೋರಾಟಕ್ಕೆ ಇಳಿದಿದ್ದೇವೆ ಎಂದು ಹೋರಾಟ ಸಮಿತಿ ಹೇಳಿದೆ.

1 ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ SIT ತನಿಖೆ ಆಗಬೇಕು. ವಿಶೇಷ ನ್ಯಾಯಾಲಯವು ಗುರುತಿಸಿರುವ ಲೋಪಗಳ ಆಧಾರದಲ್ಲಿ ತನಿಖೆ ನಡೆಯಬೇಕು, ಅದಕ್ಕಾಗಿ ವಿಶೇಷ ತನಿಖಾ ದಳವನ್ನು ರಚನೆ ಮಾಡಬೇಕು. ವಿಶೇಷ ನ್ಯಾಯಾಲಯವು ಗುರುತಿಸಿರುವಂತೆ ಮೂಲ ತನಿಖೆ ನಡೆಸಿದ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ತನಿಖೆಯ ದಿಕ್ಕು ತಪ್ಪಿಸಿದ ಕಾಣದ ಕೈಗಳನ್ನು ಸಹ ಆರೋಪಿಗಳೆಂದು ಪರಿಗಣಿಸಬೇಕು.

2. ಈ ಪ್ರಕರಣಕ್ಕೂ ಹಿಂದೆ ಧರ್ಮಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿರುವ ಸರಿಸುಮಾರು 462 ಆಸಹಜ ಸಾವಿನ ಪ್ರಕರಣಗಳ ಕುರಿತೂ ಸಮಗ್ರ ತನಿಖೆಗೆ ಆದೇಶಿಸಬೇಕು. ಆ ಮೂಲಕ ಅಸಹಾಯಕ ಜನರ ಅಸಹಜ ಸಾವಿಗೆ ಸರಣಿಗೆ ಕೊನೆ ಹಾಕಬೇಕು,

3. ಇದರಲ್ಲಿ ಸುಮಾರು 90 ಸಾವುಗಳು ಮಹಿಳೆಯರು ಮತ್ತು ಮಕ್ಕಳದಾಗಿವೆ ಎನ್ನುವುದು ಗಮನಾರ್ಹ. ಹಾಗಾಗಿ ರಾಜ್ಯ ಮಹಿಳಾ ಆಯೋಗ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗಗಳೂ ಈ ಬಗ್ಗೆ ತುರ್ತು ಗಮನ ಹರಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...