Homeಕರ್ನಾಟಕಸೌಜನ್ಯ ಪ್ರಕರಣ: ಧರ್ಮಾಧಿಕಾರಿಯ ಮಂಪರು ಪರೀಕ್ಷೆಗೆ ಮಾಡೋದ್ರಲ್ಲಿ ತಪ್ಪೇನಿದೆ?; ಪ್ರಕಾಶ್ ರಾಜ್ ಪ್ರಶ್ನೆ

ಸೌಜನ್ಯ ಪ್ರಕರಣ: ಧರ್ಮಾಧಿಕಾರಿಯ ಮಂಪರು ಪರೀಕ್ಷೆಗೆ ಮಾಡೋದ್ರಲ್ಲಿ ತಪ್ಪೇನಿದೆ?; ಪ್ರಕಾಶ್ ರಾಜ್ ಪ್ರಶ್ನೆ

- Advertisement -
- Advertisement -

11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು ಎನ್ನುವ ಕೂಗು ರಾಜ್ಯದೆಲ್ಲೆಡೆ ಜೋರಾಗಿದೆ. ಈ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಮತ್ತೆ ಹೋರಾಟಗಳು ಆರಂಭವಾಗಿವೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮತ್ತೆ ಹೋರಾಟಗಳು ಆರಂಭವಾಗಿವೆ. ಈ ಪ್ರಕರಣ ಸಂಬಂಧ 11 ವರ್ಷಗಳ ಹಿಂದೆ ಬಂಧಿತನಾಗಿದ್ದ ಸಂತೋಷ್‌ ರಾವ್‌, ದೋಷಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಮತ್ತೆ ಸೌಜನ್ಯ ಪ್ರಕರಣ ಮುನ್ನೆಲೆಗೆ ಬಂದಿದೆ.‌

ಶಿವಮೊಗ್ಗ ನಗರದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ”ಧರ್ಮದ ಸೋಗಿನವರು ತಪ್ಪು ಮಾಡಿದರೆ ಅದನ್ನು ತನಿಖೆ ಮಾಡುವುದು ಸರಿಯಾಗಿಯೇ ಇದೆ” ಎಂದು  ಹೇಳಿದ್ದಾರೆ.

”ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ? ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ” ಎಂದು ಹೇಳಿದ್ದಾರೆ.

ಧರ್ಮಾಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹ ಕೇಳಿ ಬರುತ್ತಿದೆ. ಇದು ತನಿಖೆಯ ಭಾಗವಾಗಿದ್ದರೆ, ನಿಜಾಂಶ ತಿಳಿಯುವ ಅವಶ್ಯಕತೆ ಇದ್ದರೆ ಮಾಡಲಿ.  ಈ ಬಗ್ಗೆ ನನ್ನ ಆಕ್ಷೇಪವೇನೂ ಇಲ್ಲ. ಧರ್ಮಸ್ಥಳ, ಧರ್ಮ ಬಿಡಿ ಎಂದು ನಾನು ಹೇಳಲು ಬರುವುದಿಲ್ಲ. ಆದರೆ, ಕೊನೆಯದಾಗಿ ಧರ್ಮ ಉಳಿಯಬೇಕು” ಎಂದಿದ್ದಾರೆ.

ಇತ್ತೀಚೆಗೆ ಕನ್ನಡ ಚಿತ್ರರಂಗದ ಕೆಲವು ನಟರು ಕೂಡ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಮಾಡಿದ್ದಾರೆ. ದುನಿಯಾ ವಿಜಯ್ ಹಾಗೂ ಕನ್ನಡ ಖ್ಯಾತ ನಟ ದಿವಂಗತ ಟೈಗರ್​ ಪ್ರಭಾಕಾರ್ ಅವರ​ ಮಗ ನಟ ವಿನೋದ್​ ಟೈಗರ್​ ಪ್ರಭಾಕರ್​ ​ಅವರು ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ಧರ್ಮಸ್ಥಳಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗುವುದಿಲ್ಲ: ನಟ ವಿನೋದ್​ ಟೈಗರ್​ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...