Homeಮುಖಪುಟ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

- Advertisement -
- Advertisement -

ಮಧ್ಯಪ್ರದೇಶ ಹೈಕೋರ್ಟಿನ ‘ರಾಖಿ-ಜಾಮೀನು’ ಆದೇಶವನ್ನು ಬದಿಗೆ ಸರಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಲ್ಲಿ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

‘ಜಾಮೀನು ನೀಡಲು ರಾಖಿ ಕಟ್ಟುವುದನ್ನು ಒಂದು ನಿರ್ಬಂಧವಾಗಿ ಮಾಡಿದರೆ, ಕಿರುಕುಳ ನೀಡಿದ ವ್ಯಕ್ತಿ ಸಹೋದರನಾಗಿ ಪರಿವರ್ತನೆ ಆಗುತ್ತಾನೆ. ಇದು ಸಂಪೂರ್ಣವಾಗಿ ಸಮ್ಮತವಲ್ಲ. ಇದು ಲೈಂಗಿಕಸ ದೌರ್ಜನ್ಯದ ಪ್ರಕರಣವನ್ನು ನಾಶ ಮಾಡುತ್ತದೆ ಅಥವಾ ದುರ್ಬಲಗೊಳಿಸುತ್ತದೆ. ಇದು ಸಂತ್ರಸ್ತರಿಗೆ ಅನ್ಯಾಯ ಮಾಡುತ್ತದೆ. ಕ್ಷಮೆ ಯಾಚಿಸುವಿಕೆ, ಸಮುದಾಯ ಸೇವೆಯ ಆಶ್ವಾಸನೆ, ರಾಖಿ ಕಟ್ಟುವುದು, ಸಂತ್ರಸ್ತೆಗೆ ಕಾಣಿಕೆ ನೀಡುವುದು ಅಥವಾ ಮದುವೆಯಾಗುವುದಾಗಿ ಒಪ್ಪಿಕೊಳ್ಳುವುದು-ಇವು ಯಾವುದರ ಮೂಲಕವೂ ಅಪರಾಧವನ್ನು ನಗಣ್ಯ ಮಾಡುವ ಹಾಗಿಲ್ಲ. ಈ ಕಾನೂನು ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದು’ ಎಂದು ನ್ಯಾಯಾಧೀಶರಾದ ರವೀಂದ್ರಭಟ್ ಮತ್ತು ಖಾನ್ವಿಲ್ಕರ್ ಅವರ ಪೀಠ ತೀರ್ಪು ನೀಡಿದೆ.

“ಅಪರಾಧವನ್ನು ಕಡಿಮೆ ಮಾಡುವ ಮತ್ತು ಸಂತ್ರಸ್ತರನ್ನು ಕ್ಷುಲ್ಲಕಗೊಳಿಸುವ ಪ್ರವೃತ್ತಿಯ ತಾರ್ಕಿಕ / ಭಾಷೆಯ ಬಳಕೆಯನ್ನು ಎಲ್ಲಾ ಸಂದರ್ಭಗಳ ಅಡಿಯಲ್ಲಿ ತಪ್ಪಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಈ ಮೊದಲು ಸಂತ್ರಸ್ತ ಮಹಿಳೆ ಇತರರ ಜೊತೆ ಸಲುಗೆ ಹೊಂದಿದ್ದಳು ಎಂಬುದಾಗಲಿ, ಆರೋಪಿಗೆ ತನ್ನ ಉಡುಪು ಧರಿಸುವಿಕೆ ಮೂಲಕ ಪ್ರಚೋದಿಸಿದ್ದಳು ಎಂಬುದಾಗಲಿ ಇಲ್ಲಿ ಪರಿಗಣನೆ ಆಗಕೂಡದು ಎಂದು ತೀರ್ಪು ಹೇಳಿದೆ. ಆಕೆ ‘ಭಾರತೀಯ’ ಮಹಿಳೆಯಂತೆ ವರ್ತಿಸಲಿಲ್ಲ ಎಂಬುದೂ ಅಸಂಬದ್ಧ ಎಂದು ಪೀಠ ಹೇಳಿದೆ.

‘ಅಂತಹ ವರ್ತನೆಗಳು ನ್ಯಾಯಾಂಗೀಯ ವ್ಯಾಪ್ತಿಯಲ್ಲಿ ಪರಿಗಣನೆ ಆಗುವುದಿಲ್ಲ ಮತ್ತು ಆರೋಪಿಗೆ ಜಾಮೀನು ನೀಡಲು ಇವನ್ನು ಕಾರಣವಾಗಿ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಮೇಲೆ ಉಲ್ಲೇಖಿಸಲಾದ ಸಂದರ್ಭಗಳ ಮೂಲಕ ಸಂತ್ರಸ್ತೆಯನ್ನು ಒಪ್ಪಿಕೊಳ್ಳುವಂತೆ ಮಾಡುವ ಪ್ರಕ್ರಿಯೆಯೂ ನ್ಯಾಯಬದ್ಧವಲ್ಲ’ ಎಂದು ತೀರ್ಪು ಹೇಳಿದೆ.

ನ್ಯಾಯಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

(ಎ) ಜಾಮೀನು ಷರತ್ತುಗಳು ಆರೋಪಿ ಮತ್ತು ಸಂತ್ರಸ್ತರ ನಡುವೆ ಸಂಪರ್ಕವಿತ್ತು ಎಂಬುದನ್ನು ಕಡ್ಡಾಯಗೊಳಿಸಬಾರದು. ಅದು ಅಗತ್ಯವಿಲ್ಲ ಅಥವಾ ಅನುಮತಿಸಬಾರದು. ಅಂತಹ ಷರತ್ತುಗಳು ದೂರುದಾರರನ್ನು ಯಾವುದೇ ಕಿರುಕುಳದಿಂದ ರಕ್ಷಿಸಲು ಪ್ರಯತ್ನಿಸಬೇಕು.

ಬಿ) ಸಂತ್ರಸ್ತೆಗೆ ಕಿರುಕುಳದ ಸಂಭವನೀಯ ಬೆದರಿಕೆ ಇರಬಹುದು ಎಂದು ನ್ಯಾಯಾಲಯವು ನಂಬುವ ಸಂದರ್ಭಗಳು ಅಸ್ತಿತ್ವದಲ್ಲಿವೆ, ಅಥವಾ ಆತಂಕ ವ್ಯಕ್ತಪಡಿಸಿದ ನಂತರ, ಪೊಲೀಸರಿಂದ ವರದಿಗಳನ್ನು ಪಡೆದ ನಂತರ, ರಕ್ಷಣೆಯ ಸ್ವರೂಪವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಇದರ ಆಧಾರದ ಮೇಲೆ ಸೂಕ್ತ ಆದೇಶವನ್ನು ಮಾಡಬೇಕು. ಸಂತ್ರಸ್ತೆಯೊಂದಿಗೆ ಯಾವುದೇ ಸಂಪರ್ಕವನ್ನು ಮಾಡದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

ಸಿ) ಜಾಮೀನು ಮಂಜೂರು ಮಾಡಿದ ಎಲ್ಲಾ ಪ್ರಕರಣಗಳಲ್ಲಿ, ಎರಡು ದಿನಗಳೊಳಗೆ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ದೂರುದಾರರಿಗೆ ತಕ್ಷಣ ತಿಳಿಸಬೇಕು.

ಡಿ) ಜಾಮೀನು ಪರಿಸ್ಥಿತಿಗಳು ಮತ್ತು ಆದೇಶಗಳು ಮಹಿಳೆಯರ ಬಗ್ಗೆ ಮತ್ತು ಸಮಾಜದಲ್ಲಿ ಅವರ ಸ್ಥಾನದ ಬಗ್ಗೆ ರೂಢಿಗತ ಅಥವಾ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರತಿಬಿಂಬಿಸುವುದನ್ನು ತಪ್ಪಿಸಬೇಕು. ಇದೆಲ್ಲ ಸಿಆರ್‌ಪಿಸಿ ಸೆಕ್ಷನ್ ಅವಶ್ಯಕತೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿರಬೇಕು. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಂತ್ರಸ್ತರ ಉಡುಗೆ, ನಡವಳಿಕೆ ಅಥವಾ ಹಿಂದಿನ “ನಡವಳಿಕೆ” ಅಥವಾ “ನೈತಿಕತೆಗಳ” ಬಗೆಗಿನ ಚರ್ಚೆ, ಇವೆಲ್ಲ ಜಾಮೀನು ನೀಡುವ ತೀರ್ಪಿನಲ್ಲಿ ನಮೂದಿತವಾಗಬಾರದು.

(ಕೃಪೆ: ಲೈವ್ ಲಾ)


ಇದನ್ನೂ ಓದಿ; ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...