Homeಮುಖಪುಟ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

- Advertisement -
- Advertisement -

ಮಧ್ಯಪ್ರದೇಶ ಹೈಕೋರ್ಟಿನ ‘ರಾಖಿ-ಜಾಮೀನು’ ಆದೇಶವನ್ನು ಬದಿಗೆ ಸರಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಲ್ಲಿ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

‘ಜಾಮೀನು ನೀಡಲು ರಾಖಿ ಕಟ್ಟುವುದನ್ನು ಒಂದು ನಿರ್ಬಂಧವಾಗಿ ಮಾಡಿದರೆ, ಕಿರುಕುಳ ನೀಡಿದ ವ್ಯಕ್ತಿ ಸಹೋದರನಾಗಿ ಪರಿವರ್ತನೆ ಆಗುತ್ತಾನೆ. ಇದು ಸಂಪೂರ್ಣವಾಗಿ ಸಮ್ಮತವಲ್ಲ. ಇದು ಲೈಂಗಿಕಸ ದೌರ್ಜನ್ಯದ ಪ್ರಕರಣವನ್ನು ನಾಶ ಮಾಡುತ್ತದೆ ಅಥವಾ ದುರ್ಬಲಗೊಳಿಸುತ್ತದೆ. ಇದು ಸಂತ್ರಸ್ತರಿಗೆ ಅನ್ಯಾಯ ಮಾಡುತ್ತದೆ. ಕ್ಷಮೆ ಯಾಚಿಸುವಿಕೆ, ಸಮುದಾಯ ಸೇವೆಯ ಆಶ್ವಾಸನೆ, ರಾಖಿ ಕಟ್ಟುವುದು, ಸಂತ್ರಸ್ತೆಗೆ ಕಾಣಿಕೆ ನೀಡುವುದು ಅಥವಾ ಮದುವೆಯಾಗುವುದಾಗಿ ಒಪ್ಪಿಕೊಳ್ಳುವುದು-ಇವು ಯಾವುದರ ಮೂಲಕವೂ ಅಪರಾಧವನ್ನು ನಗಣ್ಯ ಮಾಡುವ ಹಾಗಿಲ್ಲ. ಈ ಕಾನೂನು ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದು’ ಎಂದು ನ್ಯಾಯಾಧೀಶರಾದ ರವೀಂದ್ರಭಟ್ ಮತ್ತು ಖಾನ್ವಿಲ್ಕರ್ ಅವರ ಪೀಠ ತೀರ್ಪು ನೀಡಿದೆ.

“ಅಪರಾಧವನ್ನು ಕಡಿಮೆ ಮಾಡುವ ಮತ್ತು ಸಂತ್ರಸ್ತರನ್ನು ಕ್ಷುಲ್ಲಕಗೊಳಿಸುವ ಪ್ರವೃತ್ತಿಯ ತಾರ್ಕಿಕ / ಭಾಷೆಯ ಬಳಕೆಯನ್ನು ಎಲ್ಲಾ ಸಂದರ್ಭಗಳ ಅಡಿಯಲ್ಲಿ ತಪ್ಪಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಈ ಮೊದಲು ಸಂತ್ರಸ್ತ ಮಹಿಳೆ ಇತರರ ಜೊತೆ ಸಲುಗೆ ಹೊಂದಿದ್ದಳು ಎಂಬುದಾಗಲಿ, ಆರೋಪಿಗೆ ತನ್ನ ಉಡುಪು ಧರಿಸುವಿಕೆ ಮೂಲಕ ಪ್ರಚೋದಿಸಿದ್ದಳು ಎಂಬುದಾಗಲಿ ಇಲ್ಲಿ ಪರಿಗಣನೆ ಆಗಕೂಡದು ಎಂದು ತೀರ್ಪು ಹೇಳಿದೆ. ಆಕೆ ‘ಭಾರತೀಯ’ ಮಹಿಳೆಯಂತೆ ವರ್ತಿಸಲಿಲ್ಲ ಎಂಬುದೂ ಅಸಂಬದ್ಧ ಎಂದು ಪೀಠ ಹೇಳಿದೆ.

‘ಅಂತಹ ವರ್ತನೆಗಳು ನ್ಯಾಯಾಂಗೀಯ ವ್ಯಾಪ್ತಿಯಲ್ಲಿ ಪರಿಗಣನೆ ಆಗುವುದಿಲ್ಲ ಮತ್ತು ಆರೋಪಿಗೆ ಜಾಮೀನು ನೀಡಲು ಇವನ್ನು ಕಾರಣವಾಗಿ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಮೇಲೆ ಉಲ್ಲೇಖಿಸಲಾದ ಸಂದರ್ಭಗಳ ಮೂಲಕ ಸಂತ್ರಸ್ತೆಯನ್ನು ಒಪ್ಪಿಕೊಳ್ಳುವಂತೆ ಮಾಡುವ ಪ್ರಕ್ರಿಯೆಯೂ ನ್ಯಾಯಬದ್ಧವಲ್ಲ’ ಎಂದು ತೀರ್ಪು ಹೇಳಿದೆ.

ನ್ಯಾಯಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

(ಎ) ಜಾಮೀನು ಷರತ್ತುಗಳು ಆರೋಪಿ ಮತ್ತು ಸಂತ್ರಸ್ತರ ನಡುವೆ ಸಂಪರ್ಕವಿತ್ತು ಎಂಬುದನ್ನು ಕಡ್ಡಾಯಗೊಳಿಸಬಾರದು. ಅದು ಅಗತ್ಯವಿಲ್ಲ ಅಥವಾ ಅನುಮತಿಸಬಾರದು. ಅಂತಹ ಷರತ್ತುಗಳು ದೂರುದಾರರನ್ನು ಯಾವುದೇ ಕಿರುಕುಳದಿಂದ ರಕ್ಷಿಸಲು ಪ್ರಯತ್ನಿಸಬೇಕು.

ಬಿ) ಸಂತ್ರಸ್ತೆಗೆ ಕಿರುಕುಳದ ಸಂಭವನೀಯ ಬೆದರಿಕೆ ಇರಬಹುದು ಎಂದು ನ್ಯಾಯಾಲಯವು ನಂಬುವ ಸಂದರ್ಭಗಳು ಅಸ್ತಿತ್ವದಲ್ಲಿವೆ, ಅಥವಾ ಆತಂಕ ವ್ಯಕ್ತಪಡಿಸಿದ ನಂತರ, ಪೊಲೀಸರಿಂದ ವರದಿಗಳನ್ನು ಪಡೆದ ನಂತರ, ರಕ್ಷಣೆಯ ಸ್ವರೂಪವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಇದರ ಆಧಾರದ ಮೇಲೆ ಸೂಕ್ತ ಆದೇಶವನ್ನು ಮಾಡಬೇಕು. ಸಂತ್ರಸ್ತೆಯೊಂದಿಗೆ ಯಾವುದೇ ಸಂಪರ್ಕವನ್ನು ಮಾಡದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

ಸಿ) ಜಾಮೀನು ಮಂಜೂರು ಮಾಡಿದ ಎಲ್ಲಾ ಪ್ರಕರಣಗಳಲ್ಲಿ, ಎರಡು ದಿನಗಳೊಳಗೆ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ದೂರುದಾರರಿಗೆ ತಕ್ಷಣ ತಿಳಿಸಬೇಕು.

ಡಿ) ಜಾಮೀನು ಪರಿಸ್ಥಿತಿಗಳು ಮತ್ತು ಆದೇಶಗಳು ಮಹಿಳೆಯರ ಬಗ್ಗೆ ಮತ್ತು ಸಮಾಜದಲ್ಲಿ ಅವರ ಸ್ಥಾನದ ಬಗ್ಗೆ ರೂಢಿಗತ ಅಥವಾ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರತಿಬಿಂಬಿಸುವುದನ್ನು ತಪ್ಪಿಸಬೇಕು. ಇದೆಲ್ಲ ಸಿಆರ್‌ಪಿಸಿ ಸೆಕ್ಷನ್ ಅವಶ್ಯಕತೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿರಬೇಕು. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಂತ್ರಸ್ತರ ಉಡುಗೆ, ನಡವಳಿಕೆ ಅಥವಾ ಹಿಂದಿನ “ನಡವಳಿಕೆ” ಅಥವಾ “ನೈತಿಕತೆಗಳ” ಬಗೆಗಿನ ಚರ್ಚೆ, ಇವೆಲ್ಲ ಜಾಮೀನು ನೀಡುವ ತೀರ್ಪಿನಲ್ಲಿ ನಮೂದಿತವಾಗಬಾರದು.

(ಕೃಪೆ: ಲೈವ್ ಲಾ)


ಇದನ್ನೂ ಓದಿ; ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...