Homeಮುಖಪುಟ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

- Advertisement -
- Advertisement -

ಮಧ್ಯಪ್ರದೇಶ ಹೈಕೋರ್ಟಿನ ‘ರಾಖಿ-ಜಾಮೀನು’ ಆದೇಶವನ್ನು ಬದಿಗೆ ಸರಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಲ್ಲಿ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

‘ಜಾಮೀನು ನೀಡಲು ರಾಖಿ ಕಟ್ಟುವುದನ್ನು ಒಂದು ನಿರ್ಬಂಧವಾಗಿ ಮಾಡಿದರೆ, ಕಿರುಕುಳ ನೀಡಿದ ವ್ಯಕ್ತಿ ಸಹೋದರನಾಗಿ ಪರಿವರ್ತನೆ ಆಗುತ್ತಾನೆ. ಇದು ಸಂಪೂರ್ಣವಾಗಿ ಸಮ್ಮತವಲ್ಲ. ಇದು ಲೈಂಗಿಕಸ ದೌರ್ಜನ್ಯದ ಪ್ರಕರಣವನ್ನು ನಾಶ ಮಾಡುತ್ತದೆ ಅಥವಾ ದುರ್ಬಲಗೊಳಿಸುತ್ತದೆ. ಇದು ಸಂತ್ರಸ್ತರಿಗೆ ಅನ್ಯಾಯ ಮಾಡುತ್ತದೆ. ಕ್ಷಮೆ ಯಾಚಿಸುವಿಕೆ, ಸಮುದಾಯ ಸೇವೆಯ ಆಶ್ವಾಸನೆ, ರಾಖಿ ಕಟ್ಟುವುದು, ಸಂತ್ರಸ್ತೆಗೆ ಕಾಣಿಕೆ ನೀಡುವುದು ಅಥವಾ ಮದುವೆಯಾಗುವುದಾಗಿ ಒಪ್ಪಿಕೊಳ್ಳುವುದು-ಇವು ಯಾವುದರ ಮೂಲಕವೂ ಅಪರಾಧವನ್ನು ನಗಣ್ಯ ಮಾಡುವ ಹಾಗಿಲ್ಲ. ಈ ಕಾನೂನು ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದು’ ಎಂದು ನ್ಯಾಯಾಧೀಶರಾದ ರವೀಂದ್ರಭಟ್ ಮತ್ತು ಖಾನ್ವಿಲ್ಕರ್ ಅವರ ಪೀಠ ತೀರ್ಪು ನೀಡಿದೆ.

“ಅಪರಾಧವನ್ನು ಕಡಿಮೆ ಮಾಡುವ ಮತ್ತು ಸಂತ್ರಸ್ತರನ್ನು ಕ್ಷುಲ್ಲಕಗೊಳಿಸುವ ಪ್ರವೃತ್ತಿಯ ತಾರ್ಕಿಕ / ಭಾಷೆಯ ಬಳಕೆಯನ್ನು ಎಲ್ಲಾ ಸಂದರ್ಭಗಳ ಅಡಿಯಲ್ಲಿ ತಪ್ಪಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಈ ಮೊದಲು ಸಂತ್ರಸ್ತ ಮಹಿಳೆ ಇತರರ ಜೊತೆ ಸಲುಗೆ ಹೊಂದಿದ್ದಳು ಎಂಬುದಾಗಲಿ, ಆರೋಪಿಗೆ ತನ್ನ ಉಡುಪು ಧರಿಸುವಿಕೆ ಮೂಲಕ ಪ್ರಚೋದಿಸಿದ್ದಳು ಎಂಬುದಾಗಲಿ ಇಲ್ಲಿ ಪರಿಗಣನೆ ಆಗಕೂಡದು ಎಂದು ತೀರ್ಪು ಹೇಳಿದೆ. ಆಕೆ ‘ಭಾರತೀಯ’ ಮಹಿಳೆಯಂತೆ ವರ್ತಿಸಲಿಲ್ಲ ಎಂಬುದೂ ಅಸಂಬದ್ಧ ಎಂದು ಪೀಠ ಹೇಳಿದೆ.

‘ಅಂತಹ ವರ್ತನೆಗಳು ನ್ಯಾಯಾಂಗೀಯ ವ್ಯಾಪ್ತಿಯಲ್ಲಿ ಪರಿಗಣನೆ ಆಗುವುದಿಲ್ಲ ಮತ್ತು ಆರೋಪಿಗೆ ಜಾಮೀನು ನೀಡಲು ಇವನ್ನು ಕಾರಣವಾಗಿ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಮೇಲೆ ಉಲ್ಲೇಖಿಸಲಾದ ಸಂದರ್ಭಗಳ ಮೂಲಕ ಸಂತ್ರಸ್ತೆಯನ್ನು ಒಪ್ಪಿಕೊಳ್ಳುವಂತೆ ಮಾಡುವ ಪ್ರಕ್ರಿಯೆಯೂ ನ್ಯಾಯಬದ್ಧವಲ್ಲ’ ಎಂದು ತೀರ್ಪು ಹೇಳಿದೆ.

ನ್ಯಾಯಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

(ಎ) ಜಾಮೀನು ಷರತ್ತುಗಳು ಆರೋಪಿ ಮತ್ತು ಸಂತ್ರಸ್ತರ ನಡುವೆ ಸಂಪರ್ಕವಿತ್ತು ಎಂಬುದನ್ನು ಕಡ್ಡಾಯಗೊಳಿಸಬಾರದು. ಅದು ಅಗತ್ಯವಿಲ್ಲ ಅಥವಾ ಅನುಮತಿಸಬಾರದು. ಅಂತಹ ಷರತ್ತುಗಳು ದೂರುದಾರರನ್ನು ಯಾವುದೇ ಕಿರುಕುಳದಿಂದ ರಕ್ಷಿಸಲು ಪ್ರಯತ್ನಿಸಬೇಕು.

ಬಿ) ಸಂತ್ರಸ್ತೆಗೆ ಕಿರುಕುಳದ ಸಂಭವನೀಯ ಬೆದರಿಕೆ ಇರಬಹುದು ಎಂದು ನ್ಯಾಯಾಲಯವು ನಂಬುವ ಸಂದರ್ಭಗಳು ಅಸ್ತಿತ್ವದಲ್ಲಿವೆ, ಅಥವಾ ಆತಂಕ ವ್ಯಕ್ತಪಡಿಸಿದ ನಂತರ, ಪೊಲೀಸರಿಂದ ವರದಿಗಳನ್ನು ಪಡೆದ ನಂತರ, ರಕ್ಷಣೆಯ ಸ್ವರೂಪವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಇದರ ಆಧಾರದ ಮೇಲೆ ಸೂಕ್ತ ಆದೇಶವನ್ನು ಮಾಡಬೇಕು. ಸಂತ್ರಸ್ತೆಯೊಂದಿಗೆ ಯಾವುದೇ ಸಂಪರ್ಕವನ್ನು ಮಾಡದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

ಸಿ) ಜಾಮೀನು ಮಂಜೂರು ಮಾಡಿದ ಎಲ್ಲಾ ಪ್ರಕರಣಗಳಲ್ಲಿ, ಎರಡು ದಿನಗಳೊಳಗೆ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ದೂರುದಾರರಿಗೆ ತಕ್ಷಣ ತಿಳಿಸಬೇಕು.

ಡಿ) ಜಾಮೀನು ಪರಿಸ್ಥಿತಿಗಳು ಮತ್ತು ಆದೇಶಗಳು ಮಹಿಳೆಯರ ಬಗ್ಗೆ ಮತ್ತು ಸಮಾಜದಲ್ಲಿ ಅವರ ಸ್ಥಾನದ ಬಗ್ಗೆ ರೂಢಿಗತ ಅಥವಾ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರತಿಬಿಂಬಿಸುವುದನ್ನು ತಪ್ಪಿಸಬೇಕು. ಇದೆಲ್ಲ ಸಿಆರ್‌ಪಿಸಿ ಸೆಕ್ಷನ್ ಅವಶ್ಯಕತೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿರಬೇಕು. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಂತ್ರಸ್ತರ ಉಡುಗೆ, ನಡವಳಿಕೆ ಅಥವಾ ಹಿಂದಿನ “ನಡವಳಿಕೆ” ಅಥವಾ “ನೈತಿಕತೆಗಳ” ಬಗೆಗಿನ ಚರ್ಚೆ, ಇವೆಲ್ಲ ಜಾಮೀನು ನೀಡುವ ತೀರ್ಪಿನಲ್ಲಿ ನಮೂದಿತವಾಗಬಾರದು.

(ಕೃಪೆ: ಲೈವ್ ಲಾ)


ಇದನ್ನೂ ಓದಿ; ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...