Homeಮುಖಪುಟ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

- Advertisement -
- Advertisement -

ಮಧ್ಯಪ್ರದೇಶ ಹೈಕೋರ್ಟಿನ ‘ರಾಖಿ-ಜಾಮೀನು’ ಆದೇಶವನ್ನು ಬದಿಗೆ ಸರಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಲ್ಲಿ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

‘ಜಾಮೀನು ನೀಡಲು ರಾಖಿ ಕಟ್ಟುವುದನ್ನು ಒಂದು ನಿರ್ಬಂಧವಾಗಿ ಮಾಡಿದರೆ, ಕಿರುಕುಳ ನೀಡಿದ ವ್ಯಕ್ತಿ ಸಹೋದರನಾಗಿ ಪರಿವರ್ತನೆ ಆಗುತ್ತಾನೆ. ಇದು ಸಂಪೂರ್ಣವಾಗಿ ಸಮ್ಮತವಲ್ಲ. ಇದು ಲೈಂಗಿಕಸ ದೌರ್ಜನ್ಯದ ಪ್ರಕರಣವನ್ನು ನಾಶ ಮಾಡುತ್ತದೆ ಅಥವಾ ದುರ್ಬಲಗೊಳಿಸುತ್ತದೆ. ಇದು ಸಂತ್ರಸ್ತರಿಗೆ ಅನ್ಯಾಯ ಮಾಡುತ್ತದೆ. ಕ್ಷಮೆ ಯಾಚಿಸುವಿಕೆ, ಸಮುದಾಯ ಸೇವೆಯ ಆಶ್ವಾಸನೆ, ರಾಖಿ ಕಟ್ಟುವುದು, ಸಂತ್ರಸ್ತೆಗೆ ಕಾಣಿಕೆ ನೀಡುವುದು ಅಥವಾ ಮದುವೆಯಾಗುವುದಾಗಿ ಒಪ್ಪಿಕೊಳ್ಳುವುದು-ಇವು ಯಾವುದರ ಮೂಲಕವೂ ಅಪರಾಧವನ್ನು ನಗಣ್ಯ ಮಾಡುವ ಹಾಗಿಲ್ಲ. ಈ ಕಾನೂನು ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದು’ ಎಂದು ನ್ಯಾಯಾಧೀಶರಾದ ರವೀಂದ್ರಭಟ್ ಮತ್ತು ಖಾನ್ವಿಲ್ಕರ್ ಅವರ ಪೀಠ ತೀರ್ಪು ನೀಡಿದೆ.

“ಅಪರಾಧವನ್ನು ಕಡಿಮೆ ಮಾಡುವ ಮತ್ತು ಸಂತ್ರಸ್ತರನ್ನು ಕ್ಷುಲ್ಲಕಗೊಳಿಸುವ ಪ್ರವೃತ್ತಿಯ ತಾರ್ಕಿಕ / ಭಾಷೆಯ ಬಳಕೆಯನ್ನು ಎಲ್ಲಾ ಸಂದರ್ಭಗಳ ಅಡಿಯಲ್ಲಿ ತಪ್ಪಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಈ ಮೊದಲು ಸಂತ್ರಸ್ತ ಮಹಿಳೆ ಇತರರ ಜೊತೆ ಸಲುಗೆ ಹೊಂದಿದ್ದಳು ಎಂಬುದಾಗಲಿ, ಆರೋಪಿಗೆ ತನ್ನ ಉಡುಪು ಧರಿಸುವಿಕೆ ಮೂಲಕ ಪ್ರಚೋದಿಸಿದ್ದಳು ಎಂಬುದಾಗಲಿ ಇಲ್ಲಿ ಪರಿಗಣನೆ ಆಗಕೂಡದು ಎಂದು ತೀರ್ಪು ಹೇಳಿದೆ. ಆಕೆ ‘ಭಾರತೀಯ’ ಮಹಿಳೆಯಂತೆ ವರ್ತಿಸಲಿಲ್ಲ ಎಂಬುದೂ ಅಸಂಬದ್ಧ ಎಂದು ಪೀಠ ಹೇಳಿದೆ.

‘ಅಂತಹ ವರ್ತನೆಗಳು ನ್ಯಾಯಾಂಗೀಯ ವ್ಯಾಪ್ತಿಯಲ್ಲಿ ಪರಿಗಣನೆ ಆಗುವುದಿಲ್ಲ ಮತ್ತು ಆರೋಪಿಗೆ ಜಾಮೀನು ನೀಡಲು ಇವನ್ನು ಕಾರಣವಾಗಿ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಮೇಲೆ ಉಲ್ಲೇಖಿಸಲಾದ ಸಂದರ್ಭಗಳ ಮೂಲಕ ಸಂತ್ರಸ್ತೆಯನ್ನು ಒಪ್ಪಿಕೊಳ್ಳುವಂತೆ ಮಾಡುವ ಪ್ರಕ್ರಿಯೆಯೂ ನ್ಯಾಯಬದ್ಧವಲ್ಲ’ ಎಂದು ತೀರ್ಪು ಹೇಳಿದೆ.

ನ್ಯಾಯಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

(ಎ) ಜಾಮೀನು ಷರತ್ತುಗಳು ಆರೋಪಿ ಮತ್ತು ಸಂತ್ರಸ್ತರ ನಡುವೆ ಸಂಪರ್ಕವಿತ್ತು ಎಂಬುದನ್ನು ಕಡ್ಡಾಯಗೊಳಿಸಬಾರದು. ಅದು ಅಗತ್ಯವಿಲ್ಲ ಅಥವಾ ಅನುಮತಿಸಬಾರದು. ಅಂತಹ ಷರತ್ತುಗಳು ದೂರುದಾರರನ್ನು ಯಾವುದೇ ಕಿರುಕುಳದಿಂದ ರಕ್ಷಿಸಲು ಪ್ರಯತ್ನಿಸಬೇಕು.

ಬಿ) ಸಂತ್ರಸ್ತೆಗೆ ಕಿರುಕುಳದ ಸಂಭವನೀಯ ಬೆದರಿಕೆ ಇರಬಹುದು ಎಂದು ನ್ಯಾಯಾಲಯವು ನಂಬುವ ಸಂದರ್ಭಗಳು ಅಸ್ತಿತ್ವದಲ್ಲಿವೆ, ಅಥವಾ ಆತಂಕ ವ್ಯಕ್ತಪಡಿಸಿದ ನಂತರ, ಪೊಲೀಸರಿಂದ ವರದಿಗಳನ್ನು ಪಡೆದ ನಂತರ, ರಕ್ಷಣೆಯ ಸ್ವರೂಪವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಇದರ ಆಧಾರದ ಮೇಲೆ ಸೂಕ್ತ ಆದೇಶವನ್ನು ಮಾಡಬೇಕು. ಸಂತ್ರಸ್ತೆಯೊಂದಿಗೆ ಯಾವುದೇ ಸಂಪರ್ಕವನ್ನು ಮಾಡದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

ಸಿ) ಜಾಮೀನು ಮಂಜೂರು ಮಾಡಿದ ಎಲ್ಲಾ ಪ್ರಕರಣಗಳಲ್ಲಿ, ಎರಡು ದಿನಗಳೊಳಗೆ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ದೂರುದಾರರಿಗೆ ತಕ್ಷಣ ತಿಳಿಸಬೇಕು.

ಡಿ) ಜಾಮೀನು ಪರಿಸ್ಥಿತಿಗಳು ಮತ್ತು ಆದೇಶಗಳು ಮಹಿಳೆಯರ ಬಗ್ಗೆ ಮತ್ತು ಸಮಾಜದಲ್ಲಿ ಅವರ ಸ್ಥಾನದ ಬಗ್ಗೆ ರೂಢಿಗತ ಅಥವಾ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರತಿಬಿಂಬಿಸುವುದನ್ನು ತಪ್ಪಿಸಬೇಕು. ಇದೆಲ್ಲ ಸಿಆರ್‌ಪಿಸಿ ಸೆಕ್ಷನ್ ಅವಶ್ಯಕತೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿರಬೇಕು. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಂತ್ರಸ್ತರ ಉಡುಗೆ, ನಡವಳಿಕೆ ಅಥವಾ ಹಿಂದಿನ “ನಡವಳಿಕೆ” ಅಥವಾ “ನೈತಿಕತೆಗಳ” ಬಗೆಗಿನ ಚರ್ಚೆ, ಇವೆಲ್ಲ ಜಾಮೀನು ನೀಡುವ ತೀರ್ಪಿನಲ್ಲಿ ನಮೂದಿತವಾಗಬಾರದು.

(ಕೃಪೆ: ಲೈವ್ ಲಾ)


ಇದನ್ನೂ ಓದಿ; ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...