Homeಮುಖಪುಟ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

- Advertisement -
- Advertisement -

ಮಧ್ಯಪ್ರದೇಶ ಹೈಕೋರ್ಟಿನ ‘ರಾಖಿ-ಜಾಮೀನು’ ಆದೇಶವನ್ನು ಬದಿಗೆ ಸರಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಲ್ಲಿ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

‘ಜಾಮೀನು ನೀಡಲು ರಾಖಿ ಕಟ್ಟುವುದನ್ನು ಒಂದು ನಿರ್ಬಂಧವಾಗಿ ಮಾಡಿದರೆ, ಕಿರುಕುಳ ನೀಡಿದ ವ್ಯಕ್ತಿ ಸಹೋದರನಾಗಿ ಪರಿವರ್ತನೆ ಆಗುತ್ತಾನೆ. ಇದು ಸಂಪೂರ್ಣವಾಗಿ ಸಮ್ಮತವಲ್ಲ. ಇದು ಲೈಂಗಿಕಸ ದೌರ್ಜನ್ಯದ ಪ್ರಕರಣವನ್ನು ನಾಶ ಮಾಡುತ್ತದೆ ಅಥವಾ ದುರ್ಬಲಗೊಳಿಸುತ್ತದೆ. ಇದು ಸಂತ್ರಸ್ತರಿಗೆ ಅನ್ಯಾಯ ಮಾಡುತ್ತದೆ. ಕ್ಷಮೆ ಯಾಚಿಸುವಿಕೆ, ಸಮುದಾಯ ಸೇವೆಯ ಆಶ್ವಾಸನೆ, ರಾಖಿ ಕಟ್ಟುವುದು, ಸಂತ್ರಸ್ತೆಗೆ ಕಾಣಿಕೆ ನೀಡುವುದು ಅಥವಾ ಮದುವೆಯಾಗುವುದಾಗಿ ಒಪ್ಪಿಕೊಳ್ಳುವುದು-ಇವು ಯಾವುದರ ಮೂಲಕವೂ ಅಪರಾಧವನ್ನು ನಗಣ್ಯ ಮಾಡುವ ಹಾಗಿಲ್ಲ. ಈ ಕಾನೂನು ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದು’ ಎಂದು ನ್ಯಾಯಾಧೀಶರಾದ ರವೀಂದ್ರಭಟ್ ಮತ್ತು ಖಾನ್ವಿಲ್ಕರ್ ಅವರ ಪೀಠ ತೀರ್ಪು ನೀಡಿದೆ.

“ಅಪರಾಧವನ್ನು ಕಡಿಮೆ ಮಾಡುವ ಮತ್ತು ಸಂತ್ರಸ್ತರನ್ನು ಕ್ಷುಲ್ಲಕಗೊಳಿಸುವ ಪ್ರವೃತ್ತಿಯ ತಾರ್ಕಿಕ / ಭಾಷೆಯ ಬಳಕೆಯನ್ನು ಎಲ್ಲಾ ಸಂದರ್ಭಗಳ ಅಡಿಯಲ್ಲಿ ತಪ್ಪಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಈ ಮೊದಲು ಸಂತ್ರಸ್ತ ಮಹಿಳೆ ಇತರರ ಜೊತೆ ಸಲುಗೆ ಹೊಂದಿದ್ದಳು ಎಂಬುದಾಗಲಿ, ಆರೋಪಿಗೆ ತನ್ನ ಉಡುಪು ಧರಿಸುವಿಕೆ ಮೂಲಕ ಪ್ರಚೋದಿಸಿದ್ದಳು ಎಂಬುದಾಗಲಿ ಇಲ್ಲಿ ಪರಿಗಣನೆ ಆಗಕೂಡದು ಎಂದು ತೀರ್ಪು ಹೇಳಿದೆ. ಆಕೆ ‘ಭಾರತೀಯ’ ಮಹಿಳೆಯಂತೆ ವರ್ತಿಸಲಿಲ್ಲ ಎಂಬುದೂ ಅಸಂಬದ್ಧ ಎಂದು ಪೀಠ ಹೇಳಿದೆ.

‘ಅಂತಹ ವರ್ತನೆಗಳು ನ್ಯಾಯಾಂಗೀಯ ವ್ಯಾಪ್ತಿಯಲ್ಲಿ ಪರಿಗಣನೆ ಆಗುವುದಿಲ್ಲ ಮತ್ತು ಆರೋಪಿಗೆ ಜಾಮೀನು ನೀಡಲು ಇವನ್ನು ಕಾರಣವಾಗಿ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಮೇಲೆ ಉಲ್ಲೇಖಿಸಲಾದ ಸಂದರ್ಭಗಳ ಮೂಲಕ ಸಂತ್ರಸ್ತೆಯನ್ನು ಒಪ್ಪಿಕೊಳ್ಳುವಂತೆ ಮಾಡುವ ಪ್ರಕ್ರಿಯೆಯೂ ನ್ಯಾಯಬದ್ಧವಲ್ಲ’ ಎಂದು ತೀರ್ಪು ಹೇಳಿದೆ.

ನ್ಯಾಯಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

(ಎ) ಜಾಮೀನು ಷರತ್ತುಗಳು ಆರೋಪಿ ಮತ್ತು ಸಂತ್ರಸ್ತರ ನಡುವೆ ಸಂಪರ್ಕವಿತ್ತು ಎಂಬುದನ್ನು ಕಡ್ಡಾಯಗೊಳಿಸಬಾರದು. ಅದು ಅಗತ್ಯವಿಲ್ಲ ಅಥವಾ ಅನುಮತಿಸಬಾರದು. ಅಂತಹ ಷರತ್ತುಗಳು ದೂರುದಾರರನ್ನು ಯಾವುದೇ ಕಿರುಕುಳದಿಂದ ರಕ್ಷಿಸಲು ಪ್ರಯತ್ನಿಸಬೇಕು.

ಬಿ) ಸಂತ್ರಸ್ತೆಗೆ ಕಿರುಕುಳದ ಸಂಭವನೀಯ ಬೆದರಿಕೆ ಇರಬಹುದು ಎಂದು ನ್ಯಾಯಾಲಯವು ನಂಬುವ ಸಂದರ್ಭಗಳು ಅಸ್ತಿತ್ವದಲ್ಲಿವೆ, ಅಥವಾ ಆತಂಕ ವ್ಯಕ್ತಪಡಿಸಿದ ನಂತರ, ಪೊಲೀಸರಿಂದ ವರದಿಗಳನ್ನು ಪಡೆದ ನಂತರ, ರಕ್ಷಣೆಯ ಸ್ವರೂಪವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಇದರ ಆಧಾರದ ಮೇಲೆ ಸೂಕ್ತ ಆದೇಶವನ್ನು ಮಾಡಬೇಕು. ಸಂತ್ರಸ್ತೆಯೊಂದಿಗೆ ಯಾವುದೇ ಸಂಪರ್ಕವನ್ನು ಮಾಡದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

ಸಿ) ಜಾಮೀನು ಮಂಜೂರು ಮಾಡಿದ ಎಲ್ಲಾ ಪ್ರಕರಣಗಳಲ್ಲಿ, ಎರಡು ದಿನಗಳೊಳಗೆ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ದೂರುದಾರರಿಗೆ ತಕ್ಷಣ ತಿಳಿಸಬೇಕು.

ಡಿ) ಜಾಮೀನು ಪರಿಸ್ಥಿತಿಗಳು ಮತ್ತು ಆದೇಶಗಳು ಮಹಿಳೆಯರ ಬಗ್ಗೆ ಮತ್ತು ಸಮಾಜದಲ್ಲಿ ಅವರ ಸ್ಥಾನದ ಬಗ್ಗೆ ರೂಢಿಗತ ಅಥವಾ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರತಿಬಿಂಬಿಸುವುದನ್ನು ತಪ್ಪಿಸಬೇಕು. ಇದೆಲ್ಲ ಸಿಆರ್‌ಪಿಸಿ ಸೆಕ್ಷನ್ ಅವಶ್ಯಕತೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿರಬೇಕು. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಂತ್ರಸ್ತರ ಉಡುಗೆ, ನಡವಳಿಕೆ ಅಥವಾ ಹಿಂದಿನ “ನಡವಳಿಕೆ” ಅಥವಾ “ನೈತಿಕತೆಗಳ” ಬಗೆಗಿನ ಚರ್ಚೆ, ಇವೆಲ್ಲ ಜಾಮೀನು ನೀಡುವ ತೀರ್ಪಿನಲ್ಲಿ ನಮೂದಿತವಾಗಬಾರದು.

(ಕೃಪೆ: ಲೈವ್ ಲಾ)


ಇದನ್ನೂ ಓದಿ; ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...