Homeಮುಖಪುಟಅತೀಕ್ ಅಹ್ಮದ್ ಹತ್ಯೆ: ಯೋಗಿ ಸರಕಾರಕ್ಕೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅತೀಕ್ ಅಹ್ಮದ್ ಹತ್ಯೆ: ಯೋಗಿ ಸರಕಾರಕ್ಕೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಮಾಜಿ ಲೋಕಸಭಾ ಸದಸ್ಯ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇದರ ಜೊತೆಗೆ 2017 ರಿಂದ ನಡೆದ 183 “ಪೊಲೀಸ್ ಎನ್‌ಕೌಂಟರ್‌ಗಳ”  ಬಗ್ಗೆ ವರದಿಯನ್ನು ರಾಜ್ಯ ಸರ್ಕಾರದಿಂದ ಕೇಳಿದೆ.

ರಾಜ್ಯ ಪೊಲೀಸರ ಪ್ರಕಾರ, ಯೋಗಿ ಆದಿತ್ಯನಾಥ್ ಸರ್ಕಾರವು ಮಾರ್ಚ್ 2017 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಪೊಲೀಸ್ ಎನ್‌ಕೌಂಟರ್‌ಗಳಲ್ಲಿ 183 ಜನರು ಸಾವನ್ನಪ್ಪಿದ್ದಾರೆ.

ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ಅರವಿಂದ್ ಕುಮಾರ್ ಅವರ ಪೀಠವು ಎನ್‌ಕೌಂಟರ್‌ಗಳ ವಿವರಗಳು, ತನಿಖೆಯ ಸ್ಥಿತಿ, ಸಲ್ಲಿಸಿದ ಚಾರ್ಜ್‌ಶೀಟ್‌ಗಳು ಮತ್ತು ವಿಚಾರಣೆಯ ಸ್ಥಿತಿಯ ವಿವರಗಳನ್ನು ನೀಡಿ ಆರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

5 ರಿಂದ 10 ಮಂದಿ  ಅತೀಕ್ ಗೆ ಕಾವಲು ಕಾಯುತ್ತಿದ್ದರು…ಯಾರೋ ಸುಮ್ಮನೆ ಬಂದು ಗುಂಡು ಹಾರಿಸುವುದು ಹೇಗೆ? ಇದು ಹೇಗೆ ಆಗುತ್ತದೆ? ಯಾರೋ  ಶಾಮೀಲಾಗಿದ್ದಾರೆ ಎಂದು ಪೀಠವು ಈ ವಿಚಾರದಲ್ಲಿ ಗಮನಿಸಿದೆ.

ಅತೀಕ್ ಅಹ್ಮದ್‌  ಸಹೋದರಿ ಆಯಿಷಾ ನೂರಿ ತನ್ನ ಸಹೋದರನ ಹತ್ಯೆಯ ಸಮಗ್ರ ತನಿಖೆಗೆ ನಿರ್ದೇಶನವನ್ನು ಕೋರಿ ಮಾಡಿದ ಮನವಿಯ ಮೇರೆಗೆ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.

ಆದರೆ  ಪೊಲೀಸ್ ಎನ್ ಕೌಂಟರ್ ಗಳ ಕುರಿತು ತನಿಖೆ ನಡೆಸಲು ಸ್ವತಂತ್ರ ನ್ಯಾಯಾಂಗ ತನಿಖಾ ಸಂಸ್ಥೆ ಸ್ಥಾಪಿಸಬೇಕೆಂಬ ವಿಶಾಲ್ ತಿವಾರಿ ಅವರ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ಅಂತಹ ಆಯೋಗವನ್ನು ರಚಿಸಿದೆ ಎಂದು ಹೇಳಿದೆ.

ಅತೀಕ್ ಹತ್ಯೆ ಕುರಿತು ತನಿಖೆ ನಡೆಸಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತನಿಖಾ ಆಯೋಗವನ್ನು ರಚಿಸುವಂತೆ ಕೋರಿ ಅತೀಕ್ ಸಹೋದರಿ  ಆಯಿಷಾ ನೂರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಇದರ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಯನ್ನು ನೀಡಿದೆ.

ಮಾಜಿ ಸಂಸದ ಅತೀಕ್ ಅಹ್ಮದ್ (60) ಮತ್ತು ಸಹೋದರ ಅಶ್ರಫ್ ಅವರನ್ನು ಏಪ್ರಿಲ್ 15 ರಂದು  ಪರೀಕ್ಷೆಗಾಗಿ ವೈದ್ಯಕೀಯ ಕಾಲೇಜಿಗೆ ಪೊಲೀಸ್ ಸಿಬ್ಬಂದಿ ಕರೆದೊಯ್ಯುತ್ತಿದ್ದಾಗ  ಪೊಲೀಸರ ಸಮ್ಮುಖದಲ್ಲೇ ಪತ್ರಕರ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಘಟನೆಯ ಲೈವ್ ದೃಶ್ಯಗಳು ಸಂಪೂರ್ಣ ಮಾದ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಪ್ರಕರಣ ದೇಶದಲ್ಲಿ ಭಾರೀ ಸಂಚಲನವನ್ನು ಮೂಡಿಸಿತ್ತು.

ಇದನ್ನು ಓದಿ:ತೆಲಂಗಾಣ: ಎತ್ತು ಹೊಲಕ್ಕೆ ನುಗ್ಗಿದ್ದಕ್ಕೆ ದಂಡವಾಗಿ ದಲಿತನನ್ನು ಕಂಬಕ್ಕೆ ಕಟ್ಟಿ ಥಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...