Homeಕರೋನಾ ತಲ್ಲಣಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

- Advertisement -
- Advertisement -

ರಾಜಕಾರಣಿಗಳ ವರಸೆಯಲ್ಲಿ ಹಲವು ವಿಜ್ಞಾನಿಗಳು ಕೂಡ ಇದರ ಸಮರ್ಥನೆ ಮಾಡುತ್ತಿರುವುದು, ಒಟ್ಟಿನಲ್ಲಿ ಮೋದಿಯ ’ಆತ್ಮನಿರ್ಭರ್ ಭಾರತ್’ನಲ್ಲಿ ಒಂದು ದೇಸಿ ಲಸಿಕೆ ಅಭಿವೃದ್ಧಿಯಾಗಿತು ಎಂಬುದನ್ನು ತೋರಿಸುವುದಕ್ಕೆ! ಹಾಗಾಗಿ ಇದೊಂದು ಪಾಲಿಟಿಕಲ್ ಜುಮ್ಲಾ ಅಷ್ಟೇ.

ಕೊವ್ಯಾಕ್ಸಿನ್ ಲಸಿಕೆಗೆ ಔಷಧ ನಿಯಂತ್ರಕರು ಅನುಮತಿ ನೀಡಿರುವುದರ ಹಿಂದೆ ವಿಶ್ವಾಸಾರ್ಹವಲ್ಲದ ವೈಜ್ಞಾನಿಕೇತರ ಕಾರಣಗಳಿವೆ. ಈ ಲಸಿಕೆ ಮೂರನೆ ಹಂತದ ಟ್ರಯಲ್ ಪೂರ್ಣಗೊಳಿಸಿಲ್ಲ, ಅದರ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ದತ್ತಾಂಶವನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ರಾಜಕಾರಣಿಗಳು ಮತ್ತು ರಾಜಕೀಯ ವಿಶ್ಲೇಷಕರೇನೋ ತಮ್ಮದೇ ಕಾರಣಗಳಿಗಾಗಿ ಈ ಲಸಿಕೆ ಬಳಕೆಯ ಸಮ್ಮತ್ತಿಯನ್ನು ಸಾರ್ವಜನಿಕ ಆರೋಗ್ಯದ ನೆಪದಲ್ಲಿ ಬೆಂಬಲಿಸುತ್ತಾರೆ. ಆದರೆ ವೈಜ್ಞಾನಿಕ ಸಮುದಾಯದ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವ ಹಲವರು ಕೂಡ ಇದನ್ನು ಕುರುಡಾಗಿ ಬೆಂಬಲಿಸುವುದನ್ನು ನೋಡಿದರೆ, ಮೋದಿಯವರ ಆತ್ಮನಿರ್ಭರ್ ಭಾರತದಲ್ಲಿ ಒಂದು ದೇಸಿ ಲಸಿಕೆ ತಯಾರಾಗಿತು ಎಂದು ಸಾಧಿಸುವ ಹಠವೇ ಎದ್ದು ಕಾಣುತ್ತಿದೆ. ಸೀರಂ ಕಂಪನಿಯ ಕೊವಿಶೀಲ್ಡ್ ಬಳಕೆಗೆ ಅನುಮತಿ ನೀಡುವ ಸಂದರ್ಭದಲ್ಲೇ ಇದಕ್ಕೂ ಅನುಮತಿ ನೀಡಿರುವುದು ಇದೇ ಉದ್ದೇಶಕ್ಕಾಗಿ.

ಭಾರತ ರಿಪಬ್ಲಿಕ್‌ನ ಉನ್ನತ ನ್ಯಾಯಾಂಗವು ಜನ ಪ್ರತಿರೋಧದ ಅಲೆಗಳನ್ನು ತಡೆಯಲು ಹಿಂಜರಿಂಯುತ್ತಿರುವ ಒಳ್ಳೆಯ ಬೆಳವಣಿಗೆಯ ನಡುವೆಯೇ ಔಷಧ ನಿಯಂತ್ರಕರು ’ನಿಯಂತ್ರಿತ ಬಳಕೆ’ ಎಂದು ಭಾಷಾ ನೈಪುಣ್ಯತೆಯ ಹೊದಿಕೆಯಲ್ಲಿ ಈ ಲಸಿಕೆಗೆ ಅನುಮತಿ ನೀಡಿದ್ದಾರೆ.

ಈ ಕ್ರಮದಿಂದ ಅಂತಹ ದೊಡ್ಡ ಪೊಲಿಟಿಕಲ್ ರಿಸ್ಕ್ ಏನೂ ಇಲ್ಲ, ಇದನ್ನು ಮ್ಯಾನೇಜ್ ಮಾಡಬಹುದು ಎಂದು ಮೋದಿ ಸರ್ಕಾರ ಅಂದಾಜಿಸಿರಬಹುದು. ಮೂರನೆ ಹಂತದಲ್ಲಿ ಲಸಿಕೆಯ ಸಮಸ್ಯೆಗಳು ಕಾಣಿಸಿದರೆ, ಅದನ್ನು ಕೈಬಿಡಬೇಕಾಗಬಹುದು. ಸಮಸ್ಯೆಗಳು ನಂತರದಲ್ಲಿ ಗೋಚರಿಸಿದರೆ ಸಾರ್ವಜನಿಕರ ’ಶಾರ್ಟ್ ಮೆಮರಿ’ ಮತ್ತು ಜನರನ್ನು ಬೇರೆ ವಿಷಯಗಳತ್ತ ತಿರುಗಿಸುವ ಸರ್ಕಾರದ ’ಕುಶಲತೆ’ಯಿಂದಾಗಿ ಅದು ಮುಚ್ಚಿಯೂ ಹೋಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಸಾರ್ವಜನಿಕ ಆರೋಗ್ಯ ಮತ್ತು ಮೋದಿ ಸರ್ಕಾರದ ’ರಾಜಕೀಯ ಆರೋಗ್ಯ’ಕ್ಕೆ ಮುಂದೆ ಒದಗಬಹುದಾದ ರಿಸ್ಕ್ ಅನ್ನು ಹೇಗೋ ಸಂಭಾಳಿಸಬಹುದು, ಆದರೆ ಆರೋಗ್ಯ ಸೇವೆ ಮತ್ತು ಫಾರ್ಮಾಟಿಕ್ಸ್‌ನಲ್ಲಿ ಭಾರತಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆಗೆ ಒದಗುವ ರಿಸ್ಕ್ ಅನ್ನು ನಿವಾರಿಸಲಾಗದು. ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

’ನಾವು ತಜ್ಞರು, ನಮ್ಮನ್ನು ನಂಬಿ’, ’ಭಾರತೀಯ ವಿಜ್ಞಾನಿಗಳನ್ನು ನಂಬಿ’ ಎಂಬ ರಮಿಸುವ ಆಟಗಳು ದೇಶದೊಳಗಡೆಯಷ್ಟೇ ಯಶಸ್ವಿಯಾಗಬಹುದು. ಆದರೆ ವಿದೇಶಿ ಕ್ಷೇತ್ರದಲ್ಲಿ ಇಂತದ್ದೆಲ್ಲ ನಡೆಯಲಾರದು. ಈ ಕಾರಣಕ್ಕೇ ಸಾಕಷ್ಟು ಪಾರದರ್ಶಕತೆ, ವ್ಯಾಪಕ ಟ್ರಯಲ್ಸ್ ಮತ್ತು ವೈಜ್ಞಾನಿಕ ಪುರಾವೆ ಹೊಂದಿರುವ ಪಾಶ್ಚಾತ್ಯ ಲಸಿಕೆಗಳಿಗೆ ರಷ್ಯಾ ಮತ್ತು ಚೀನಾದ ಲಸಿಕೆಗಳಿಗಿಂತ ಹೆಚ್ಚು ಬೇಡಿಕೆಯಿದೆ.

ಲಸಿಕೆ ಮತ್ತು ಔಷಧಿ ತಯಾರಿಕೆಯಲ್ಲಿ ಜಗತ್ತಿನ ಪ್ರಮುಖ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಮೋದಿ ಸರ್ಕಾರ ಈ ಹೆಮ್ಮೆಗೆ ಮಸುಕಾಗದಂತೆ ಈ ದೇಸಿ ಕೈಗಾರಿಕೆಗೆ ಉತ್ತೇಜನ ನೀಡಬೇಕು. ಈ ಸರ್ಕಾರ ನೆನಪಿನಲ್ಲಿ ಇಡಬೇಕು: ’ಅಹಿಂಸಾ’ ಎಂಬುದು ಮೂಲಧರ್ಮ. ವೈದ್ಯಕೀಯದಲ್ಲಿ ಮೂಲಧರ್ಮ “primum non nocere”… ಇವೆರಡರ ಅರ್ಥ ಒಂದೇ: ‘Do No Harm’

ಕೃಪೆ: ದಿ ಪ್ರಿಂಟ್- ನಿತಿನ್ ಪೈ (ತಕ್ಷಶಿಲಾ ಸಂಸ್ಥೆಯ ನಿರ್ದೇಶಕರು)
ಅನುವಾದ: ಮಲ್ಲನೌಡರ್‌ ಪಿ.ಕೆ

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...