Homeಕರೋನಾ ತಲ್ಲಣಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

- Advertisement -
- Advertisement -

ರಾಜಕಾರಣಿಗಳ ವರಸೆಯಲ್ಲಿ ಹಲವು ವಿಜ್ಞಾನಿಗಳು ಕೂಡ ಇದರ ಸಮರ್ಥನೆ ಮಾಡುತ್ತಿರುವುದು, ಒಟ್ಟಿನಲ್ಲಿ ಮೋದಿಯ ’ಆತ್ಮನಿರ್ಭರ್ ಭಾರತ್’ನಲ್ಲಿ ಒಂದು ದೇಸಿ ಲಸಿಕೆ ಅಭಿವೃದ್ಧಿಯಾಗಿತು ಎಂಬುದನ್ನು ತೋರಿಸುವುದಕ್ಕೆ! ಹಾಗಾಗಿ ಇದೊಂದು ಪಾಲಿಟಿಕಲ್ ಜುಮ್ಲಾ ಅಷ್ಟೇ.

ಕೊವ್ಯಾಕ್ಸಿನ್ ಲಸಿಕೆಗೆ ಔಷಧ ನಿಯಂತ್ರಕರು ಅನುಮತಿ ನೀಡಿರುವುದರ ಹಿಂದೆ ವಿಶ್ವಾಸಾರ್ಹವಲ್ಲದ ವೈಜ್ಞಾನಿಕೇತರ ಕಾರಣಗಳಿವೆ. ಈ ಲಸಿಕೆ ಮೂರನೆ ಹಂತದ ಟ್ರಯಲ್ ಪೂರ್ಣಗೊಳಿಸಿಲ್ಲ, ಅದರ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ದತ್ತಾಂಶವನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ರಾಜಕಾರಣಿಗಳು ಮತ್ತು ರಾಜಕೀಯ ವಿಶ್ಲೇಷಕರೇನೋ ತಮ್ಮದೇ ಕಾರಣಗಳಿಗಾಗಿ ಈ ಲಸಿಕೆ ಬಳಕೆಯ ಸಮ್ಮತ್ತಿಯನ್ನು ಸಾರ್ವಜನಿಕ ಆರೋಗ್ಯದ ನೆಪದಲ್ಲಿ ಬೆಂಬಲಿಸುತ್ತಾರೆ. ಆದರೆ ವೈಜ್ಞಾನಿಕ ಸಮುದಾಯದ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವ ಹಲವರು ಕೂಡ ಇದನ್ನು ಕುರುಡಾಗಿ ಬೆಂಬಲಿಸುವುದನ್ನು ನೋಡಿದರೆ, ಮೋದಿಯವರ ಆತ್ಮನಿರ್ಭರ್ ಭಾರತದಲ್ಲಿ ಒಂದು ದೇಸಿ ಲಸಿಕೆ ತಯಾರಾಗಿತು ಎಂದು ಸಾಧಿಸುವ ಹಠವೇ ಎದ್ದು ಕಾಣುತ್ತಿದೆ. ಸೀರಂ ಕಂಪನಿಯ ಕೊವಿಶೀಲ್ಡ್ ಬಳಕೆಗೆ ಅನುಮತಿ ನೀಡುವ ಸಂದರ್ಭದಲ್ಲೇ ಇದಕ್ಕೂ ಅನುಮತಿ ನೀಡಿರುವುದು ಇದೇ ಉದ್ದೇಶಕ್ಕಾಗಿ.

ಭಾರತ ರಿಪಬ್ಲಿಕ್‌ನ ಉನ್ನತ ನ್ಯಾಯಾಂಗವು ಜನ ಪ್ರತಿರೋಧದ ಅಲೆಗಳನ್ನು ತಡೆಯಲು ಹಿಂಜರಿಂಯುತ್ತಿರುವ ಒಳ್ಳೆಯ ಬೆಳವಣಿಗೆಯ ನಡುವೆಯೇ ಔಷಧ ನಿಯಂತ್ರಕರು ’ನಿಯಂತ್ರಿತ ಬಳಕೆ’ ಎಂದು ಭಾಷಾ ನೈಪುಣ್ಯತೆಯ ಹೊದಿಕೆಯಲ್ಲಿ ಈ ಲಸಿಕೆಗೆ ಅನುಮತಿ ನೀಡಿದ್ದಾರೆ.

ಈ ಕ್ರಮದಿಂದ ಅಂತಹ ದೊಡ್ಡ ಪೊಲಿಟಿಕಲ್ ರಿಸ್ಕ್ ಏನೂ ಇಲ್ಲ, ಇದನ್ನು ಮ್ಯಾನೇಜ್ ಮಾಡಬಹುದು ಎಂದು ಮೋದಿ ಸರ್ಕಾರ ಅಂದಾಜಿಸಿರಬಹುದು. ಮೂರನೆ ಹಂತದಲ್ಲಿ ಲಸಿಕೆಯ ಸಮಸ್ಯೆಗಳು ಕಾಣಿಸಿದರೆ, ಅದನ್ನು ಕೈಬಿಡಬೇಕಾಗಬಹುದು. ಸಮಸ್ಯೆಗಳು ನಂತರದಲ್ಲಿ ಗೋಚರಿಸಿದರೆ ಸಾರ್ವಜನಿಕರ ’ಶಾರ್ಟ್ ಮೆಮರಿ’ ಮತ್ತು ಜನರನ್ನು ಬೇರೆ ವಿಷಯಗಳತ್ತ ತಿರುಗಿಸುವ ಸರ್ಕಾರದ ’ಕುಶಲತೆ’ಯಿಂದಾಗಿ ಅದು ಮುಚ್ಚಿಯೂ ಹೋಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಸಾರ್ವಜನಿಕ ಆರೋಗ್ಯ ಮತ್ತು ಮೋದಿ ಸರ್ಕಾರದ ’ರಾಜಕೀಯ ಆರೋಗ್ಯ’ಕ್ಕೆ ಮುಂದೆ ಒದಗಬಹುದಾದ ರಿಸ್ಕ್ ಅನ್ನು ಹೇಗೋ ಸಂಭಾಳಿಸಬಹುದು, ಆದರೆ ಆರೋಗ್ಯ ಸೇವೆ ಮತ್ತು ಫಾರ್ಮಾಟಿಕ್ಸ್‌ನಲ್ಲಿ ಭಾರತಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆಗೆ ಒದಗುವ ರಿಸ್ಕ್ ಅನ್ನು ನಿವಾರಿಸಲಾಗದು. ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

’ನಾವು ತಜ್ಞರು, ನಮ್ಮನ್ನು ನಂಬಿ’, ’ಭಾರತೀಯ ವಿಜ್ಞಾನಿಗಳನ್ನು ನಂಬಿ’ ಎಂಬ ರಮಿಸುವ ಆಟಗಳು ದೇಶದೊಳಗಡೆಯಷ್ಟೇ ಯಶಸ್ವಿಯಾಗಬಹುದು. ಆದರೆ ವಿದೇಶಿ ಕ್ಷೇತ್ರದಲ್ಲಿ ಇಂತದ್ದೆಲ್ಲ ನಡೆಯಲಾರದು. ಈ ಕಾರಣಕ್ಕೇ ಸಾಕಷ್ಟು ಪಾರದರ್ಶಕತೆ, ವ್ಯಾಪಕ ಟ್ರಯಲ್ಸ್ ಮತ್ತು ವೈಜ್ಞಾನಿಕ ಪುರಾವೆ ಹೊಂದಿರುವ ಪಾಶ್ಚಾತ್ಯ ಲಸಿಕೆಗಳಿಗೆ ರಷ್ಯಾ ಮತ್ತು ಚೀನಾದ ಲಸಿಕೆಗಳಿಗಿಂತ ಹೆಚ್ಚು ಬೇಡಿಕೆಯಿದೆ.

ಲಸಿಕೆ ಮತ್ತು ಔಷಧಿ ತಯಾರಿಕೆಯಲ್ಲಿ ಜಗತ್ತಿನ ಪ್ರಮುಖ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಮೋದಿ ಸರ್ಕಾರ ಈ ಹೆಮ್ಮೆಗೆ ಮಸುಕಾಗದಂತೆ ಈ ದೇಸಿ ಕೈಗಾರಿಕೆಗೆ ಉತ್ತೇಜನ ನೀಡಬೇಕು. ಈ ಸರ್ಕಾರ ನೆನಪಿನಲ್ಲಿ ಇಡಬೇಕು: ’ಅಹಿಂಸಾ’ ಎಂಬುದು ಮೂಲಧರ್ಮ. ವೈದ್ಯಕೀಯದಲ್ಲಿ ಮೂಲಧರ್ಮ “primum non nocere”… ಇವೆರಡರ ಅರ್ಥ ಒಂದೇ: ‘Do No Harm’

ಕೃಪೆ: ದಿ ಪ್ರಿಂಟ್- ನಿತಿನ್ ಪೈ (ತಕ್ಷಶಿಲಾ ಸಂಸ್ಥೆಯ ನಿರ್ದೇಶಕರು)
ಅನುವಾದ: ಮಲ್ಲನೌಡರ್‌ ಪಿ.ಕೆ

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....