Homeಕರೋನಾ ತಲ್ಲಣಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

- Advertisement -
- Advertisement -

ರಾಜಕಾರಣಿಗಳ ವರಸೆಯಲ್ಲಿ ಹಲವು ವಿಜ್ಞಾನಿಗಳು ಕೂಡ ಇದರ ಸಮರ್ಥನೆ ಮಾಡುತ್ತಿರುವುದು, ಒಟ್ಟಿನಲ್ಲಿ ಮೋದಿಯ ’ಆತ್ಮನಿರ್ಭರ್ ಭಾರತ್’ನಲ್ಲಿ ಒಂದು ದೇಸಿ ಲಸಿಕೆ ಅಭಿವೃದ್ಧಿಯಾಗಿತು ಎಂಬುದನ್ನು ತೋರಿಸುವುದಕ್ಕೆ! ಹಾಗಾಗಿ ಇದೊಂದು ಪಾಲಿಟಿಕಲ್ ಜುಮ್ಲಾ ಅಷ್ಟೇ.

ಕೊವ್ಯಾಕ್ಸಿನ್ ಲಸಿಕೆಗೆ ಔಷಧ ನಿಯಂತ್ರಕರು ಅನುಮತಿ ನೀಡಿರುವುದರ ಹಿಂದೆ ವಿಶ್ವಾಸಾರ್ಹವಲ್ಲದ ವೈಜ್ಞಾನಿಕೇತರ ಕಾರಣಗಳಿವೆ. ಈ ಲಸಿಕೆ ಮೂರನೆ ಹಂತದ ಟ್ರಯಲ್ ಪೂರ್ಣಗೊಳಿಸಿಲ್ಲ, ಅದರ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ದತ್ತಾಂಶವನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ರಾಜಕಾರಣಿಗಳು ಮತ್ತು ರಾಜಕೀಯ ವಿಶ್ಲೇಷಕರೇನೋ ತಮ್ಮದೇ ಕಾರಣಗಳಿಗಾಗಿ ಈ ಲಸಿಕೆ ಬಳಕೆಯ ಸಮ್ಮತ್ತಿಯನ್ನು ಸಾರ್ವಜನಿಕ ಆರೋಗ್ಯದ ನೆಪದಲ್ಲಿ ಬೆಂಬಲಿಸುತ್ತಾರೆ. ಆದರೆ ವೈಜ್ಞಾನಿಕ ಸಮುದಾಯದ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವ ಹಲವರು ಕೂಡ ಇದನ್ನು ಕುರುಡಾಗಿ ಬೆಂಬಲಿಸುವುದನ್ನು ನೋಡಿದರೆ, ಮೋದಿಯವರ ಆತ್ಮನಿರ್ಭರ್ ಭಾರತದಲ್ಲಿ ಒಂದು ದೇಸಿ ಲಸಿಕೆ ತಯಾರಾಗಿತು ಎಂದು ಸಾಧಿಸುವ ಹಠವೇ ಎದ್ದು ಕಾಣುತ್ತಿದೆ. ಸೀರಂ ಕಂಪನಿಯ ಕೊವಿಶೀಲ್ಡ್ ಬಳಕೆಗೆ ಅನುಮತಿ ನೀಡುವ ಸಂದರ್ಭದಲ್ಲೇ ಇದಕ್ಕೂ ಅನುಮತಿ ನೀಡಿರುವುದು ಇದೇ ಉದ್ದೇಶಕ್ಕಾಗಿ.

ಭಾರತ ರಿಪಬ್ಲಿಕ್‌ನ ಉನ್ನತ ನ್ಯಾಯಾಂಗವು ಜನ ಪ್ರತಿರೋಧದ ಅಲೆಗಳನ್ನು ತಡೆಯಲು ಹಿಂಜರಿಂಯುತ್ತಿರುವ ಒಳ್ಳೆಯ ಬೆಳವಣಿಗೆಯ ನಡುವೆಯೇ ಔಷಧ ನಿಯಂತ್ರಕರು ’ನಿಯಂತ್ರಿತ ಬಳಕೆ’ ಎಂದು ಭಾಷಾ ನೈಪುಣ್ಯತೆಯ ಹೊದಿಕೆಯಲ್ಲಿ ಈ ಲಸಿಕೆಗೆ ಅನುಮತಿ ನೀಡಿದ್ದಾರೆ.

ಈ ಕ್ರಮದಿಂದ ಅಂತಹ ದೊಡ್ಡ ಪೊಲಿಟಿಕಲ್ ರಿಸ್ಕ್ ಏನೂ ಇಲ್ಲ, ಇದನ್ನು ಮ್ಯಾನೇಜ್ ಮಾಡಬಹುದು ಎಂದು ಮೋದಿ ಸರ್ಕಾರ ಅಂದಾಜಿಸಿರಬಹುದು. ಮೂರನೆ ಹಂತದಲ್ಲಿ ಲಸಿಕೆಯ ಸಮಸ್ಯೆಗಳು ಕಾಣಿಸಿದರೆ, ಅದನ್ನು ಕೈಬಿಡಬೇಕಾಗಬಹುದು. ಸಮಸ್ಯೆಗಳು ನಂತರದಲ್ಲಿ ಗೋಚರಿಸಿದರೆ ಸಾರ್ವಜನಿಕರ ’ಶಾರ್ಟ್ ಮೆಮರಿ’ ಮತ್ತು ಜನರನ್ನು ಬೇರೆ ವಿಷಯಗಳತ್ತ ತಿರುಗಿಸುವ ಸರ್ಕಾರದ ’ಕುಶಲತೆ’ಯಿಂದಾಗಿ ಅದು ಮುಚ್ಚಿಯೂ ಹೋಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಸಾರ್ವಜನಿಕ ಆರೋಗ್ಯ ಮತ್ತು ಮೋದಿ ಸರ್ಕಾರದ ’ರಾಜಕೀಯ ಆರೋಗ್ಯ’ಕ್ಕೆ ಮುಂದೆ ಒದಗಬಹುದಾದ ರಿಸ್ಕ್ ಅನ್ನು ಹೇಗೋ ಸಂಭಾಳಿಸಬಹುದು, ಆದರೆ ಆರೋಗ್ಯ ಸೇವೆ ಮತ್ತು ಫಾರ್ಮಾಟಿಕ್ಸ್‌ನಲ್ಲಿ ಭಾರತಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆಗೆ ಒದಗುವ ರಿಸ್ಕ್ ಅನ್ನು ನಿವಾರಿಸಲಾಗದು. ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

’ನಾವು ತಜ್ಞರು, ನಮ್ಮನ್ನು ನಂಬಿ’, ’ಭಾರತೀಯ ವಿಜ್ಞಾನಿಗಳನ್ನು ನಂಬಿ’ ಎಂಬ ರಮಿಸುವ ಆಟಗಳು ದೇಶದೊಳಗಡೆಯಷ್ಟೇ ಯಶಸ್ವಿಯಾಗಬಹುದು. ಆದರೆ ವಿದೇಶಿ ಕ್ಷೇತ್ರದಲ್ಲಿ ಇಂತದ್ದೆಲ್ಲ ನಡೆಯಲಾರದು. ಈ ಕಾರಣಕ್ಕೇ ಸಾಕಷ್ಟು ಪಾರದರ್ಶಕತೆ, ವ್ಯಾಪಕ ಟ್ರಯಲ್ಸ್ ಮತ್ತು ವೈಜ್ಞಾನಿಕ ಪುರಾವೆ ಹೊಂದಿರುವ ಪಾಶ್ಚಾತ್ಯ ಲಸಿಕೆಗಳಿಗೆ ರಷ್ಯಾ ಮತ್ತು ಚೀನಾದ ಲಸಿಕೆಗಳಿಗಿಂತ ಹೆಚ್ಚು ಬೇಡಿಕೆಯಿದೆ.

ಲಸಿಕೆ ಮತ್ತು ಔಷಧಿ ತಯಾರಿಕೆಯಲ್ಲಿ ಜಗತ್ತಿನ ಪ್ರಮುಖ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಮೋದಿ ಸರ್ಕಾರ ಈ ಹೆಮ್ಮೆಗೆ ಮಸುಕಾಗದಂತೆ ಈ ದೇಸಿ ಕೈಗಾರಿಕೆಗೆ ಉತ್ತೇಜನ ನೀಡಬೇಕು. ಈ ಸರ್ಕಾರ ನೆನಪಿನಲ್ಲಿ ಇಡಬೇಕು: ’ಅಹಿಂಸಾ’ ಎಂಬುದು ಮೂಲಧರ್ಮ. ವೈದ್ಯಕೀಯದಲ್ಲಿ ಮೂಲಧರ್ಮ “primum non nocere”… ಇವೆರಡರ ಅರ್ಥ ಒಂದೇ: ‘Do No Harm’

ಕೃಪೆ: ದಿ ಪ್ರಿಂಟ್- ನಿತಿನ್ ಪೈ (ತಕ್ಷಶಿಲಾ ಸಂಸ್ಥೆಯ ನಿರ್ದೇಶಕರು)
ಅನುವಾದ: ಮಲ್ಲನೌಡರ್‌ ಪಿ.ಕೆ

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...