Homeಕರೋನಾ ತಲ್ಲಣಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

- Advertisement -
- Advertisement -

ರಾಜಕಾರಣಿಗಳ ವರಸೆಯಲ್ಲಿ ಹಲವು ವಿಜ್ಞಾನಿಗಳು ಕೂಡ ಇದರ ಸಮರ್ಥನೆ ಮಾಡುತ್ತಿರುವುದು, ಒಟ್ಟಿನಲ್ಲಿ ಮೋದಿಯ ’ಆತ್ಮನಿರ್ಭರ್ ಭಾರತ್’ನಲ್ಲಿ ಒಂದು ದೇಸಿ ಲಸಿಕೆ ಅಭಿವೃದ್ಧಿಯಾಗಿತು ಎಂಬುದನ್ನು ತೋರಿಸುವುದಕ್ಕೆ! ಹಾಗಾಗಿ ಇದೊಂದು ಪಾಲಿಟಿಕಲ್ ಜುಮ್ಲಾ ಅಷ್ಟೇ.

ಕೊವ್ಯಾಕ್ಸಿನ್ ಲಸಿಕೆಗೆ ಔಷಧ ನಿಯಂತ್ರಕರು ಅನುಮತಿ ನೀಡಿರುವುದರ ಹಿಂದೆ ವಿಶ್ವಾಸಾರ್ಹವಲ್ಲದ ವೈಜ್ಞಾನಿಕೇತರ ಕಾರಣಗಳಿವೆ. ಈ ಲಸಿಕೆ ಮೂರನೆ ಹಂತದ ಟ್ರಯಲ್ ಪೂರ್ಣಗೊಳಿಸಿಲ್ಲ, ಅದರ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ದತ್ತಾಂಶವನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ರಾಜಕಾರಣಿಗಳು ಮತ್ತು ರಾಜಕೀಯ ವಿಶ್ಲೇಷಕರೇನೋ ತಮ್ಮದೇ ಕಾರಣಗಳಿಗಾಗಿ ಈ ಲಸಿಕೆ ಬಳಕೆಯ ಸಮ್ಮತ್ತಿಯನ್ನು ಸಾರ್ವಜನಿಕ ಆರೋಗ್ಯದ ನೆಪದಲ್ಲಿ ಬೆಂಬಲಿಸುತ್ತಾರೆ. ಆದರೆ ವೈಜ್ಞಾನಿಕ ಸಮುದಾಯದ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವ ಹಲವರು ಕೂಡ ಇದನ್ನು ಕುರುಡಾಗಿ ಬೆಂಬಲಿಸುವುದನ್ನು ನೋಡಿದರೆ, ಮೋದಿಯವರ ಆತ್ಮನಿರ್ಭರ್ ಭಾರತದಲ್ಲಿ ಒಂದು ದೇಸಿ ಲಸಿಕೆ ತಯಾರಾಗಿತು ಎಂದು ಸಾಧಿಸುವ ಹಠವೇ ಎದ್ದು ಕಾಣುತ್ತಿದೆ. ಸೀರಂ ಕಂಪನಿಯ ಕೊವಿಶೀಲ್ಡ್ ಬಳಕೆಗೆ ಅನುಮತಿ ನೀಡುವ ಸಂದರ್ಭದಲ್ಲೇ ಇದಕ್ಕೂ ಅನುಮತಿ ನೀಡಿರುವುದು ಇದೇ ಉದ್ದೇಶಕ್ಕಾಗಿ.

ಭಾರತ ರಿಪಬ್ಲಿಕ್‌ನ ಉನ್ನತ ನ್ಯಾಯಾಂಗವು ಜನ ಪ್ರತಿರೋಧದ ಅಲೆಗಳನ್ನು ತಡೆಯಲು ಹಿಂಜರಿಂಯುತ್ತಿರುವ ಒಳ್ಳೆಯ ಬೆಳವಣಿಗೆಯ ನಡುವೆಯೇ ಔಷಧ ನಿಯಂತ್ರಕರು ’ನಿಯಂತ್ರಿತ ಬಳಕೆ’ ಎಂದು ಭಾಷಾ ನೈಪುಣ್ಯತೆಯ ಹೊದಿಕೆಯಲ್ಲಿ ಈ ಲಸಿಕೆಗೆ ಅನುಮತಿ ನೀಡಿದ್ದಾರೆ.

ಈ ಕ್ರಮದಿಂದ ಅಂತಹ ದೊಡ್ಡ ಪೊಲಿಟಿಕಲ್ ರಿಸ್ಕ್ ಏನೂ ಇಲ್ಲ, ಇದನ್ನು ಮ್ಯಾನೇಜ್ ಮಾಡಬಹುದು ಎಂದು ಮೋದಿ ಸರ್ಕಾರ ಅಂದಾಜಿಸಿರಬಹುದು. ಮೂರನೆ ಹಂತದಲ್ಲಿ ಲಸಿಕೆಯ ಸಮಸ್ಯೆಗಳು ಕಾಣಿಸಿದರೆ, ಅದನ್ನು ಕೈಬಿಡಬೇಕಾಗಬಹುದು. ಸಮಸ್ಯೆಗಳು ನಂತರದಲ್ಲಿ ಗೋಚರಿಸಿದರೆ ಸಾರ್ವಜನಿಕರ ’ಶಾರ್ಟ್ ಮೆಮರಿ’ ಮತ್ತು ಜನರನ್ನು ಬೇರೆ ವಿಷಯಗಳತ್ತ ತಿರುಗಿಸುವ ಸರ್ಕಾರದ ’ಕುಶಲತೆ’ಯಿಂದಾಗಿ ಅದು ಮುಚ್ಚಿಯೂ ಹೋಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಸಾರ್ವಜನಿಕ ಆರೋಗ್ಯ ಮತ್ತು ಮೋದಿ ಸರ್ಕಾರದ ’ರಾಜಕೀಯ ಆರೋಗ್ಯ’ಕ್ಕೆ ಮುಂದೆ ಒದಗಬಹುದಾದ ರಿಸ್ಕ್ ಅನ್ನು ಹೇಗೋ ಸಂಭಾಳಿಸಬಹುದು, ಆದರೆ ಆರೋಗ್ಯ ಸೇವೆ ಮತ್ತು ಫಾರ್ಮಾಟಿಕ್ಸ್‌ನಲ್ಲಿ ಭಾರತಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆಗೆ ಒದಗುವ ರಿಸ್ಕ್ ಅನ್ನು ನಿವಾರಿಸಲಾಗದು. ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

’ನಾವು ತಜ್ಞರು, ನಮ್ಮನ್ನು ನಂಬಿ’, ’ಭಾರತೀಯ ವಿಜ್ಞಾನಿಗಳನ್ನು ನಂಬಿ’ ಎಂಬ ರಮಿಸುವ ಆಟಗಳು ದೇಶದೊಳಗಡೆಯಷ್ಟೇ ಯಶಸ್ವಿಯಾಗಬಹುದು. ಆದರೆ ವಿದೇಶಿ ಕ್ಷೇತ್ರದಲ್ಲಿ ಇಂತದ್ದೆಲ್ಲ ನಡೆಯಲಾರದು. ಈ ಕಾರಣಕ್ಕೇ ಸಾಕಷ್ಟು ಪಾರದರ್ಶಕತೆ, ವ್ಯಾಪಕ ಟ್ರಯಲ್ಸ್ ಮತ್ತು ವೈಜ್ಞಾನಿಕ ಪುರಾವೆ ಹೊಂದಿರುವ ಪಾಶ್ಚಾತ್ಯ ಲಸಿಕೆಗಳಿಗೆ ರಷ್ಯಾ ಮತ್ತು ಚೀನಾದ ಲಸಿಕೆಗಳಿಗಿಂತ ಹೆಚ್ಚು ಬೇಡಿಕೆಯಿದೆ.

ಲಸಿಕೆ ಮತ್ತು ಔಷಧಿ ತಯಾರಿಕೆಯಲ್ಲಿ ಜಗತ್ತಿನ ಪ್ರಮುಖ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಮೋದಿ ಸರ್ಕಾರ ಈ ಹೆಮ್ಮೆಗೆ ಮಸುಕಾಗದಂತೆ ಈ ದೇಸಿ ಕೈಗಾರಿಕೆಗೆ ಉತ್ತೇಜನ ನೀಡಬೇಕು. ಈ ಸರ್ಕಾರ ನೆನಪಿನಲ್ಲಿ ಇಡಬೇಕು: ’ಅಹಿಂಸಾ’ ಎಂಬುದು ಮೂಲಧರ್ಮ. ವೈದ್ಯಕೀಯದಲ್ಲಿ ಮೂಲಧರ್ಮ “primum non nocere”… ಇವೆರಡರ ಅರ್ಥ ಒಂದೇ: ‘Do No Harm’

ಕೃಪೆ: ದಿ ಪ್ರಿಂಟ್- ನಿತಿನ್ ಪೈ (ತಕ್ಷಶಿಲಾ ಸಂಸ್ಥೆಯ ನಿರ್ದೇಶಕರು)
ಅನುವಾದ: ಮಲ್ಲನೌಡರ್‌ ಪಿ.ಕೆ

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...