Homeಕರೋನಾ ತಲ್ಲಣಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಕೊವ್ಯಾಕ್ಸಿನ್: ಒಂದು ಪೊಲಿಟಿಕಲ್ ಜುಮ್ಲಾ, ಆತ್ಮ್‌ನಿರ್ಭರ್ ಹಪಾಹಪಿಗೊಂದು ನಿದರ್ಶನ

ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

- Advertisement -
- Advertisement -

ರಾಜಕಾರಣಿಗಳ ವರಸೆಯಲ್ಲಿ ಹಲವು ವಿಜ್ಞಾನಿಗಳು ಕೂಡ ಇದರ ಸಮರ್ಥನೆ ಮಾಡುತ್ತಿರುವುದು, ಒಟ್ಟಿನಲ್ಲಿ ಮೋದಿಯ ’ಆತ್ಮನಿರ್ಭರ್ ಭಾರತ್’ನಲ್ಲಿ ಒಂದು ದೇಸಿ ಲಸಿಕೆ ಅಭಿವೃದ್ಧಿಯಾಗಿತು ಎಂಬುದನ್ನು ತೋರಿಸುವುದಕ್ಕೆ! ಹಾಗಾಗಿ ಇದೊಂದು ಪಾಲಿಟಿಕಲ್ ಜುಮ್ಲಾ ಅಷ್ಟೇ.

ಕೊವ್ಯಾಕ್ಸಿನ್ ಲಸಿಕೆಗೆ ಔಷಧ ನಿಯಂತ್ರಕರು ಅನುಮತಿ ನೀಡಿರುವುದರ ಹಿಂದೆ ವಿಶ್ವಾಸಾರ್ಹವಲ್ಲದ ವೈಜ್ಞಾನಿಕೇತರ ಕಾರಣಗಳಿವೆ. ಈ ಲಸಿಕೆ ಮೂರನೆ ಹಂತದ ಟ್ರಯಲ್ ಪೂರ್ಣಗೊಳಿಸಿಲ್ಲ, ಅದರ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ದತ್ತಾಂಶವನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ರಾಜಕಾರಣಿಗಳು ಮತ್ತು ರಾಜಕೀಯ ವಿಶ್ಲೇಷಕರೇನೋ ತಮ್ಮದೇ ಕಾರಣಗಳಿಗಾಗಿ ಈ ಲಸಿಕೆ ಬಳಕೆಯ ಸಮ್ಮತ್ತಿಯನ್ನು ಸಾರ್ವಜನಿಕ ಆರೋಗ್ಯದ ನೆಪದಲ್ಲಿ ಬೆಂಬಲಿಸುತ್ತಾರೆ. ಆದರೆ ವೈಜ್ಞಾನಿಕ ಸಮುದಾಯದ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವ ಹಲವರು ಕೂಡ ಇದನ್ನು ಕುರುಡಾಗಿ ಬೆಂಬಲಿಸುವುದನ್ನು ನೋಡಿದರೆ, ಮೋದಿಯವರ ಆತ್ಮನಿರ್ಭರ್ ಭಾರತದಲ್ಲಿ ಒಂದು ದೇಸಿ ಲಸಿಕೆ ತಯಾರಾಗಿತು ಎಂದು ಸಾಧಿಸುವ ಹಠವೇ ಎದ್ದು ಕಾಣುತ್ತಿದೆ. ಸೀರಂ ಕಂಪನಿಯ ಕೊವಿಶೀಲ್ಡ್ ಬಳಕೆಗೆ ಅನುಮತಿ ನೀಡುವ ಸಂದರ್ಭದಲ್ಲೇ ಇದಕ್ಕೂ ಅನುಮತಿ ನೀಡಿರುವುದು ಇದೇ ಉದ್ದೇಶಕ್ಕಾಗಿ.

ಭಾರತ ರಿಪಬ್ಲಿಕ್‌ನ ಉನ್ನತ ನ್ಯಾಯಾಂಗವು ಜನ ಪ್ರತಿರೋಧದ ಅಲೆಗಳನ್ನು ತಡೆಯಲು ಹಿಂಜರಿಂಯುತ್ತಿರುವ ಒಳ್ಳೆಯ ಬೆಳವಣಿಗೆಯ ನಡುವೆಯೇ ಔಷಧ ನಿಯಂತ್ರಕರು ’ನಿಯಂತ್ರಿತ ಬಳಕೆ’ ಎಂದು ಭಾಷಾ ನೈಪುಣ್ಯತೆಯ ಹೊದಿಕೆಯಲ್ಲಿ ಈ ಲಸಿಕೆಗೆ ಅನುಮತಿ ನೀಡಿದ್ದಾರೆ.

ಈ ಕ್ರಮದಿಂದ ಅಂತಹ ದೊಡ್ಡ ಪೊಲಿಟಿಕಲ್ ರಿಸ್ಕ್ ಏನೂ ಇಲ್ಲ, ಇದನ್ನು ಮ್ಯಾನೇಜ್ ಮಾಡಬಹುದು ಎಂದು ಮೋದಿ ಸರ್ಕಾರ ಅಂದಾಜಿಸಿರಬಹುದು. ಮೂರನೆ ಹಂತದಲ್ಲಿ ಲಸಿಕೆಯ ಸಮಸ್ಯೆಗಳು ಕಾಣಿಸಿದರೆ, ಅದನ್ನು ಕೈಬಿಡಬೇಕಾಗಬಹುದು. ಸಮಸ್ಯೆಗಳು ನಂತರದಲ್ಲಿ ಗೋಚರಿಸಿದರೆ ಸಾರ್ವಜನಿಕರ ’ಶಾರ್ಟ್ ಮೆಮರಿ’ ಮತ್ತು ಜನರನ್ನು ಬೇರೆ ವಿಷಯಗಳತ್ತ ತಿರುಗಿಸುವ ಸರ್ಕಾರದ ’ಕುಶಲತೆ’ಯಿಂದಾಗಿ ಅದು ಮುಚ್ಚಿಯೂ ಹೋಗಬಹುದು.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಸಾರ್ವಜನಿಕ ಆರೋಗ್ಯ ಮತ್ತು ಮೋದಿ ಸರ್ಕಾರದ ’ರಾಜಕೀಯ ಆರೋಗ್ಯ’ಕ್ಕೆ ಮುಂದೆ ಒದಗಬಹುದಾದ ರಿಸ್ಕ್ ಅನ್ನು ಹೇಗೋ ಸಂಭಾಳಿಸಬಹುದು, ಆದರೆ ಆರೋಗ್ಯ ಸೇವೆ ಮತ್ತು ಫಾರ್ಮಾಟಿಕ್ಸ್‌ನಲ್ಲಿ ಭಾರತಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆಗೆ ಒದಗುವ ರಿಸ್ಕ್ ಅನ್ನು ನಿವಾರಿಸಲಾಗದು. ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ 110% ಸುರಕ್ಷಿತ ಎಂದು ಯಾವುದೇ ದತ್ತಾಂಶಗಳ ಆಧಾರವಿಲ್ಲದೇ ಘೋಷಣೆ ಮಾಡಿರುವ ವಿಷಯವಾರು ತಜ್ಞರ ಸಮಿತಿಯ ಸದಸ್ಯರ ಹೆಸರು ಸಾರ್ವಜನಿಕ ವಲಯಕ್ಕೆ ಗೊತ್ತೇ ಇಲ್ಲ.

’ನಾವು ತಜ್ಞರು, ನಮ್ಮನ್ನು ನಂಬಿ’, ’ಭಾರತೀಯ ವಿಜ್ಞಾನಿಗಳನ್ನು ನಂಬಿ’ ಎಂಬ ರಮಿಸುವ ಆಟಗಳು ದೇಶದೊಳಗಡೆಯಷ್ಟೇ ಯಶಸ್ವಿಯಾಗಬಹುದು. ಆದರೆ ವಿದೇಶಿ ಕ್ಷೇತ್ರದಲ್ಲಿ ಇಂತದ್ದೆಲ್ಲ ನಡೆಯಲಾರದು. ಈ ಕಾರಣಕ್ಕೇ ಸಾಕಷ್ಟು ಪಾರದರ್ಶಕತೆ, ವ್ಯಾಪಕ ಟ್ರಯಲ್ಸ್ ಮತ್ತು ವೈಜ್ಞಾನಿಕ ಪುರಾವೆ ಹೊಂದಿರುವ ಪಾಶ್ಚಾತ್ಯ ಲಸಿಕೆಗಳಿಗೆ ರಷ್ಯಾ ಮತ್ತು ಚೀನಾದ ಲಸಿಕೆಗಳಿಗಿಂತ ಹೆಚ್ಚು ಬೇಡಿಕೆಯಿದೆ.

ಲಸಿಕೆ ಮತ್ತು ಔಷಧಿ ತಯಾರಿಕೆಯಲ್ಲಿ ಜಗತ್ತಿನ ಪ್ರಮುಖ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಮೋದಿ ಸರ್ಕಾರ ಈ ಹೆಮ್ಮೆಗೆ ಮಸುಕಾಗದಂತೆ ಈ ದೇಸಿ ಕೈಗಾರಿಕೆಗೆ ಉತ್ತೇಜನ ನೀಡಬೇಕು. ಈ ಸರ್ಕಾರ ನೆನಪಿನಲ್ಲಿ ಇಡಬೇಕು: ’ಅಹಿಂಸಾ’ ಎಂಬುದು ಮೂಲಧರ್ಮ. ವೈದ್ಯಕೀಯದಲ್ಲಿ ಮೂಲಧರ್ಮ “primum non nocere”… ಇವೆರಡರ ಅರ್ಥ ಒಂದೇ: ‘Do No Harm’

ಕೃಪೆ: ದಿ ಪ್ರಿಂಟ್- ನಿತಿನ್ ಪೈ (ತಕ್ಷಶಿಲಾ ಸಂಸ್ಥೆಯ ನಿರ್ದೇಶಕರು)
ಅನುವಾದ: ಮಲ್ಲನೌಡರ್‌ ಪಿ.ಕೆ

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...