Homeಮುಖಪುಟಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಭಾರತದ ಮೊದಲ ದೇಸಿ ಕೊವಿಡ್ ಲಸಿಕೆ ಎನಿಸಿರುವ ಕೊವ್ಯಾಕ್ಸಿನ್‌ಗೆ ಈಗ ಜನ-ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ನಡೆಯುತ್ತಿರುವ ಕೊವ್ಯಾಕ್ಸಿನ್ ಮೂರನೆ ಹಂತದ ಟ್ರಯಲ್ಸ್ ರದ್ದು ಮಾಡಬೇಕು, ಮೂರನೇ ಹಂತದಲ್ಲಿ ಲಸಿಕೆ ಸ್ವೀಕರಿಸಿ ಮೃತರಾದ ವ್ಯಕ್ತಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿಯವರಿಗೆ ಭೋಪಾಲ್ ಅನಿಲ ದುರಂತದ ಸಂತ್ರಸ್ತರ ಪರ ಕೆಲಸ ಮಾಡುತ್ತಿರುವ ನಾಲ್ಕು ಸಂಘಟನೆಗಳು ಪತ್ರ ಬರೆದಿವೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ದೇಶದ ಐಕೈಕ ‘ದೇಸಿ’ ಲಸಿಕೆ ಎಂದು ಹೆಸರು ಪಡೆದಿದೆ.

ಟ್ರಯಲ್ಸ್ ನಡೆಸುತ್ತಿರುವ ಭೋಪಾಲ್‌ನ ಪೀಪಲ್ಸ್ ಕಾಲೇಜ್ ಆಫ್ ಮೆಡಿಸಿನ್ & ರಿಸರ್ಚ್, ಲಸಿಕೆಯ ಡೋಸ್‌ನಿಂದ ಸಾವು ಸಂಭವಿಸಿಲ್ಲ ಎಂಬ ಹೇಳಿಕೆ ನೀಡಿದ್ದು, ಮಧ್ಯಪ್ರದೇಶ ಸರ್ಕಾರ ಕೂಡ ಕಾಲೇಜಿಗೆ ಕ್ಲೀನ್‌ಚಿಟ್ ನೀಡಿದೆ.

ಸಾವಿಗೀಡಾದ ಸ್ವಯಂಸೇವಕ ಭರ್ತಿ (ರಿಕ್ರೂಟ್‌ಮೆಂಟ್) ಸಂದರ್ಭದಲ್ಲಿ ಎಲ್ಲ ಮಾನದಂಡಗಳಲ್ಲು ತೇರ್ಗಡೆಯಾಗಿದ್ದ ಮತ್ತು ಲಸಿಕೆಯ ಡೋಸ್ ನೀಡಿದ ಹಿಂದಿನ 7 ದಿನ ಕಾಲ ಆರೋಗ್ಯವಂತ ಸ್ಥಿತಿಯಲ್ಲೇ ಇದ್ದ, ಯಾವುದೇ ಅಡ್ಡ ಪರಿಣಾಮ ಕೂಡ ಸಂಭವಿಸಿರಲಿಲ್ಲ ಎಂದು ಹಲವು ಮಾಧ್ಯಮಗಳ ವರದಿಗಳು ಹೇಳುತ್ತಿವೆ.

ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿರುವ ಮರಣೋತ್ತರ ವರದಿ ಉಲ್ಲೇಖಿಸಿರುವ ಭಾರತ್ ಬಯೋಟೆಕ್, ‘ಕಾರ್ಡಿಯೋ-ರೆಸ್ಪಿರೆಟರಿ ಸಮಸ್ಯೆಯಿಂದ ಸಾವು ಸಂಭವಿಸಿದೆ, ಬಹುಷಃ ವಿಷಪ್ರಾಸನ ನಡೆದಿರಬಹುದು’ ಎಂದು ಹೇಳುತ್ತಿದೆ.

ಆದರೆ, ಈ ಲಸಿಕೆಯ ಟ್ರಯಲ್ಸ್ ಅನ್ನು ಕೂಡಲೇ ನಿಲ್ಲಿಸಬೇಕೆಂದು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘ, ಭೋಪಾಲ್ ಗ್ಯಾಸ್ ಪೀಡಿತ್ ಪುರುಷ್ ಸಂಘ, ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಮತ್ತು ಚಿಲ್ಡ್ರನ್ ಅಗೇನಸ್ಟ್ ಡೌ ಕಾರ್ಬೈಡ್- ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿವೆ.

‘ಲಸಿಕೆ ಪ್ರಯೋಗಗೊಂಡ 1,700 ಜನರ ಪೈಕಿ ಕನಿಷ್ಠ 700 ಜನರು ಭೋಪಾಲ್ ಅನಿಲ ದುರಂತದಿಂದ ಸಂಭವಿಸಿದ ಕಾಯಿಲೆಗಳಿಂದ ನರಳುತ್ತಿದ್ದಾರೆ. ಲಸಿಕೆ ಪಡೆದ 10 ದಿನದಲ್ಲೇ ಒಬ್ಬ ಅನಿಲ ದುರಂತ ಸಂತ್ರಸ್ತ ತೀರಿಕೊಂಡಿದ್ದು, ಲಸಿಕೆ ಪಡೆದ ಇತರ ಸಂತ್ರಸ್ತರು ಗಂಭೀರ ಆರೋಗ್ಯ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಇಂತಹ ಅಸಮರ್ಪಕ ಟ್ರಯಲ್ಸ್ ಕಾರಣದಿಂದ 12 ವರ್ಷದ ಹಿಂದೆ 13 ಅನಿಲ ದುರಂತ ಸಂತ್ರಸ್ತರು ಸಾವೀಗೀಡಾಗಿದ್ದರು. ಈಗಲೂ ಆ ಘಟನೆಗೆ ಕಾರಣಾದವರ ಮೇಲೆ ಕ್ರಮ ಜರುಗಿಸಿಲ್ಲ’ ಎಂದು ಮಾಧ್ಯಮಗಳಿಗೆ ಹೇಳಿರುವ ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘದ ರಷೀದಾ ಬೀ, ಇಂಥದ್ದು ಮತ್ತೆ ಸಂಭವಿಸಲಾರದು ಎಂದು ಪ್ರಧಾನಿ ಭರವಸೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅವರ ಸಮ್ಮತಿಯಿಲ್ಲದೇ ಕೊವ್ಯಾಕ್ಸಿನ್ ಲಸಿಕೆಯ ಟ್ರಯಲ್ ಶಾಟ್ಸ್/ಡೋಸ್ ನೀಡಲಾಗಿದೆ. ಟ್ರಯಲ್ಸ್ ನಂತರ ಅವರ ಆರೋಗ್ಯ ಕುರಿತ ಅಪ್ಡೇಟ್‌ಗಳನ್ನು ಕೂಡ ಮೆಂಟೇನ್ ಮಾಡಿಲ್ಲ. ಕೆಲವರು ಟ್ರಯಲ್‌ನಿಂದ ಹೊರಬಂದರು. ಅವರಿಗೆ ನಂತರದಲ್ಲಿ ಸೂಕ್ತ ಆರೋಗ್ಯ ಚಿಕಿತ್ಸೆಯ ಏರ್ಪಾಟನ್ನೂ ಮಾಡಿಲ್ಲ’ ಎಂದು ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಸಂಘಟನೆಯ ರೀಚಾ ಧಿಂಗ್ರಾ ಕಿಡಿ ಕಾರಿದ್ದಾರೆ.

‘ಕಂಪನಿಯೊಂದನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯವನ್ನೇ ಹಾಳು ಮಾಡುತ್ತಿದೆ’ ಎಂದು ಸಂಘಟನೆಗಳು ದೂಷಿಸಿವೆ. ಮಧ್ಯಪ್ರದೇಶದ ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ‘ಭಾರತ್ ಬಯೋಟೆಕ್ ತಪ್ಪು ಮಾಡಿಲ್ಲ’ ಎಂದು ಪ್ರತಿಪಾದಿಸುತ್ತಿದ್ದಾರೆ.


ಇದನ್ನೂ ಓದಿ: ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...